ಭೂಮಿ ಸರ್ವನಾಶಕ್ಕೆ ದುಷ್ಟರ ಮುನ್ನುಡಿ, ಕಾಡು ಕಡಿದು ಬೆಂಕಿ ಇಟ್ಟವರಿಗೆ ಹಿಡಿಶಾಪ
ಅದು ಅಚ್ಚ ಹಸಿರಾದ ಕಾಡು, ದಟ್ಟಡವಿ. ಆದರೆ ಇಂತಹ ಕಾಡಿನ ಮೇಲೆ ಕಳ್ಳರು, ಮಾಫಿಯಾ ಡಾನ್ಗಳು, ಡ್ರಗ್ಸ್ ಗ್ಯಾಂಗ್ ಕಣ್ಣು ಬಿದ್ದಿದ್ದೇ ತಡ ಎಲ್ಲವೂ ಸರ್ವನಾಶವಾಗಿದೆ. ಹೌದು, ಇದು ಭೂಮಿ ಪಾಲಿನ ಆಕ್ಸಿಜೆನ್ ಸಿಲಿಂಡರ್ ಅಮೆಜಾನ್ ಕಾಡಿನ ಕಣ್ಣೀರ ಕಥೆ. ಅಮೆಜಾನ್ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಜಗತ್ತಿಗೇ ಗೊತ್ತಿರುವ ಸಂಗತಿ.
ಆದ್ರೆ ದೌರ್ಜನ್ಯದ ಪರಿಣಾಮ ಹೇಗಿದೆ ಎಂಬುದನ್ನ ವಿಜ್ಞಾನಿಗಳು ರಿವೀಲ್ ಮಾಡಿದ್ದಾರೆ. ಅಂದಹಾಗೆ ಇಡೀ ಜಗತ್ತಿನಲ್ಲಿ ಉತ್ಪತ್ತಿಯಾಗುವ 'ಹಸಿರು ಮನೆ ಅನಿಲ' ಅಂದರೆ ಗ್ರೀನ್ ಹೌಸ್ ಗ್ಯಾಸ್ನಲ್ಲಿ ಬಹುಪಾಲನ್ನು ಅಮೆಜಾನ್ ಕಾಡು ಕೊಡುಗೆಯಾಗಿ ನೀಡುತ್ತಿದೆಯಂತೆ. ಒಂದಾನೊಂದು ಕಾಲದಲ್ಲಿ ಭೂಮಿ ಪಾಲಿಗೆ ಶ್ವಾಸಕೋಶ ಎಂಬಂತಿದ್ದ ಅಮೆಜಾನ್ ಕಾಡಿನಿಂದಲೇ ಭೂಮಿಗೆ ಕಂಟಕ ಎದುರಾಗಿದೆ. ಕಾಡು ಕಡಿದು ಬೆಂಕಿ ಇಟ್ಟಿದ್ದು, ಲಕ್ಷಾಂತರ ಎಕರೆ ಕಾಡು ಭಸ್ಮವಾಗಿ ಹೋಗಿದ್ದು ಅಮೆಜಾನ್ ಪ್ರಕೃತಿ ಮೇಲೆ ಭಾರಿ ಪ್ರಭಾವ ಬೀರಿದೆ. ಹೀಗಾಗಿ 'ಹಸಿರು ಮನೆ ಅನಿಲ'ವನ್ನು ಹೀರಿಕೊಳ್ಳುವುದಕ್ಕಿಂತ ಹೆಚ್ಚಾಗಿ, ಭೂಮಿಯ ವಾತಾವರಣಕ್ಕೆ ಈ ಗ್ಯಾಸ್ ಅನ್ನು ಅಮೆಜಾನ್ ಕಾಡು ಉಗುಳುತ್ತಿದೆ. ಇದು ಭವಿಷ್ಯದ ಕರಾಳ ದಿನಗಳಿಗೆ ಮುನ್ನುಡಿ ಬರೆದಿದೆ.

ವಿಜ್ಞಾನಿಗಳ ಸಲಹೆ ಏನು..?
'ಹಸಿರು ಮನೆ ಅನಿಲ'ದಿಂದಲೇ ಭೂಮಿ ತಾಪಮಾನದಲ್ಲಿ ಸಾಕಷ್ಟು ಏರುಪೇರಾಗುತ್ತಿದೆ. ಹೊಸ ಅಧ್ಯಯನಗಳ ಪ್ರಕಾರ ಜಾಗತಿಕವಾಗಿ ಅಮೆಜಾನ್ ಅರಣ್ಯದಿಂದ ಭಾರಿ ಪ್ರಮಾಣದ 'ಹಸಿರು ಮನೆ ಅನಿಲ' ಹೊರಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಕಾಡು ಕಡಿಯುತ್ತಿರುವುದು, ಅಮೆಜಾನ್ ಕಾಡಿನಲ್ಲಿ ಬೀಫ್ ಮಾಫಿಯಾದ ಅಟ್ಟಹಾಸ ಸೇರಿದಂತೆ ಹಲವು ನ್ಯೂನ್ಯತೆಗಳೇ ಭೂಮಿಗೆ ಸಂಚಕಾರ ತಂದೊಡ್ಡಿದೆ. ಭವಿಷ್ಯದಲ್ಲಿ ಇದೇ ಅರಣ್ಯ ಮಾನವರ ಪಾಲಿಗೆ ಕಂಟಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ತಕ್ಷಣ ಅಮೆಜಾನ್ ಅರಣ್ಯದ ಮೇಲಿನ ದೌರ್ಜನ್ಯ ನಿಲ್ಲಿಸಬೇಕು ಹಾಗೂ ಹೊಸದಾಗಿ ಗಿಡಗಳನ್ನ ನೆಡಬೇಕೆಂದು ಸಲಹೆ ನೀಡಿದ್ದಾರೆ.

ಬೀಫ್ ಮಾಫಿಯಾ ದೌರ್ಜನ್ಯ
ಅಮೆಜಾನ್ ಮೇಲೆ ದೌರ್ಜನ್ಯ ವಿಪರೀತವಾಗಿದೆ. ಸೋಯಾಬೀನ್, ಬೀಫ್ ಎಕ್ಸ್ಪೋರ್ಟ್ ಉದ್ಯಮದ ಚಂಡಮಾರುತಕ್ಕೆ ಸಿಲುಕಿರುವ ಅಮೆಜಾನ್ ಕಾಡು ನಾಶವಾಗಿ ಹೋಗುತ್ತಿದೆ. ಅಮೆಜಾನ್ ರೈನ್ ಫಾರೆಸ್ಟ್ ನಾಶಗೊಳಿಸುತ್ತಿರುವ ಎರಡೂ ಉದ್ಯಮಗಳ ಬಗ್ಗೆ ಇತ್ತೀಚೆಗೆ ರಿವೀಲ್ ಆದ ಮಾಹಿತಿ ಬೆಚ್ಚಿಬೀಳಿಸುವಂತಿದೆ. ಈಗಾಗಲೇ ಅಮೆಜಾನ್ ಕಾಡಿನ ಶೇಕಡ 20ರಷ್ಟು ಭಾಗ ಹಾಳಾಗಿ ಹೋಗಿದೆ. ಕಾಡುಗಳ್ಳರು, ಕೃಷಿ ಕಾರಣ ನೀಡಿ ಕಾಡನ್ನ ಕಡಿಯುತ್ತಿರುವವರು ಹಾಗೂ ಬೀಫ್ ಮಾಫಿಯಾ ನಿತ್ಯಹರಿದ್ವರ್ಣ ಕಾಡನ್ನು ನಾಶ ಮಾಡುತ್ತಿದೆ. ಗ್ಲೋಬಲ್ ವಾರ್ಮಿಂಗ್ ಕೂಪದಲ್ಲಿ ನರಳುತ್ತಿರುವ ಪ್ರಪಂಚಕ್ಕೆ ಇದು ಆಘಾತ ನೀಡಿದೆ. ಅಮೆಜಾನ್ ಕಾಡಿನ ಸುತ್ತಮುತ್ತ ಬೆಳೆಯುವ ಕೃಷಿ ಪದಾರ್ಥ ಹಾಗೂ ಬೀಫ್ ಉದ್ಯಮ ಯುರೋಪ್ ಮೇಲೆ ಅವಲಂಬಿತವಾಗಿದೆ. ಯುರೋಪ್ ರಾಷ್ಟ್ರಗಳಿಗೆ ರಫ್ತು ಮಾಡುತ್ತಿರುವ ಶೇಕಡ 20ರಷ್ಟು ಸೋಯಾ ಹಾಗೂ ಶೇಕಡ 17ರಷ್ಟು ಬೀಫ್ ಅಕ್ರಮವಾಗಿದೆ. ಇನ್ನು ಸ್ಮಗ್ಲರ್ಗಳ ಪಾಲಿಗಂತು ಈ ಅಮೆಜಾನ್ ಕಾಡು ಅಕ್ಷಯಪಾತ್ರೆಯಾಗಿದೆ.

ನೂರಾರು ಕೋಟಿ ಎಕರೆ ಅರಣ್ಯ..!
ಅಮೆಜಾನ್ ಅರಣ್ಯದಲ್ಲಿ ಇರುವಷ್ಟು ಕಾಡು ಜಗತ್ತಿನ ಯಾವ ಭಾಗದಲ್ಲೂ ಸಿಗೋದಕ್ಕೆ ಸಾಧ್ಯವಿಲ್ಲ. ಇದಕ್ಕೆ ಸಹಕಾರಿಯಾಗಿರೋದು ಅಲ್ಲಿನ ವಾತಾವರಣ. ಸುಮಾರು 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್ನಷ್ಟು ಅರಣ್ಯ ಪ್ರದೇಶವನ್ನ ಅಮೆಜಾನ್ ಹೊಂದಿದೆ. ಎಕರೆ ಲೆಕ್ಕದಲ್ಲಿ ಹೇಳುವದಾದರೆ ಸುಮಾರು 130 ಕೋಟಿ ಎಕರೆಗೂ ಹೆಚ್ಚಿನ ಪ್ರದೇಶ. ಇಷ್ಟು ಪ್ರಮಾಣದ ಕಾಡಿನಲ್ಲಿ ಬಹುಪಾಲು ಅರಣ್ಯ ಹರಡಿರುವುದು ಬ್ರೆಜಿಲ್ನಲ್ಲಿ. ಎಡಬಿಡದೆ ಸುರಿಯುವ ಮಳೆ, ಸದಾ ತುಂಬಿ ಹರಿಯುವ ಅಮೆಜಾನ್ ನದಿಯ ಸುತ್ತಮುತ್ತಲೂ ದಟ್ಟವಾದ ಮರ-ಗಿಡಗಳು ಬೆಳೆದು ನಿಂತಿವೆ. ಜೌಗು ಪ್ರದೇಶವಾಗಿರುವ ಕಾಡು ಊಹೆಗೆ ನಿಲುಕದಷ್ಟು ಅರಣ್ಯ ಸಂಪತ್ತು ಹೊಂದಿದೆ. ಅಧ್ಯಯನವೊಂದರ ಪ್ರಕಾರ ಅಮೆಜಾನ್ನ 1 ಹೆಕ್ಟೇರ್ ಪ್ರದೇಶದಲ್ಲಿ 750 ಜಾತಿಯ ಮರಗಳು ಹಾಗೂ 1500ಕ್ಕೂ ಹೆಚ್ಚು ಜಾತಿಯ ಗಿಡಗಳನ್ನ ಕಾಣಬಹುದು. ಕೇವಲ 1 ಹೆಕ್ಟೆರ್ ಅಂದರೆ ಸುಮಾರು 2.47 ಎಕರೆ ಪ್ರದೇಶದಲ್ಲೇ ಇಷ್ಟು ಅರಣ್ಯ ಸಂಪತ್ತು ಅಡಗಿದೆ ಎಂದರೆ 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್ ಜಾಗದಲ್ಲಿ ಇನ್ನೆಂತಹ ಸಂಪತ್ತು ಇರಬೇಡ ಊಹಿಸಿ.

ಕಾಡುಗಳ್ಳರಿಗೆ ಸ್ವರ್ಗ..!
ಅಮೆಜಾನ್ನಲ್ಲಿ ಅದರಲ್ಲೂ ಬ್ರೆಜಿಲ್ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ. ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಲಾಭಕ್ಕಾಗಿ ಬಂಡವಾಳಿಗರ ಫೈಟಿಂಗ್..!
ಅರಣ್ಯ ಸಂಪತ್ತು ಇರುವ ಕಡೆ ಕೈಗಾರಿಕೆಗೆ ಬೇಕಾದ ಕಚ್ಚಾವಸ್ತುಗಳು ಸುಲಭವಾಗಿ ಸಿಗುತ್ತವೆ. ಇದೇ ಕಾರಣಕ್ಕೆ ಅಮೆಜಾನ್ ನಾಡು ಬ್ರೆಜಿಲ್ನಲ್ಲಿ ಹೂಡಿಕೆ ಮಾಡಲು ಜಗತ್ತಿನ ದೊಡ್ಡ ದೊಡ್ಡ ಉದ್ಯಮಿಗಳು ತುದಿಗಾಲಲ್ಲಿ ನಿಂತಿರುತ್ತಾರೆ. ಈಗಾಗಲೇ ಲಕ್ಷಾಂತರ ಕೋಟಿ ಬಂಡವಾಳ ಇದೇ ಕಾಡನ್ನು ನಂಬಿ ಹರಿದುಬಂದಿದೆ. ಬ್ರೆಜಿಲ್ ಸದ್ಯದ ಮಟ್ಟಿಗೆ ಬಂಡವಾಳಿಗರ ಸ್ವರ್ಗ ಕೂಡ. ಇನ್ನು ಇಲ್ಲಿ ಅಡಗಿರುವ ಅಪಾರ ಗಣಿ ಸಂಪತ್ತು ದೋಚುವ ಹುನ್ನಾರ ಶ್ರೀಮಂತ ರಾಷ್ಟ್ರಗಳದ್ದು. ಹೀಗಾಗಿಯೇ ಅಮೆಜಾನ್ನಲ್ಲಿ ಗಣಿಗಾರಿಕೆಗೆ ವಿಶ್ವದ ಬಲಿಷ್ಠ ರಾಷ್ಟ್ರಗಳು ಅತ್ಯುತ್ಸಾಹ ತೋರುತ್ತಿವೆ. ಇದರ ಪರಿಣಾಮವೇ ದಟ್ಟ ಅರಣ್ಯ ನಾಶವಾಗಿ, ಬೆಂಗಾಡು ರೂಪುಗೊಳ್ಳುತ್ತಿದೆ. ಇಲ್ಲಿ ಪ್ರಮುಖವಾಗಿ ಟಿಂಬರ್ ಉದ್ಯಮ, ಫಾರ್ಮಸಿ, ಗಣಿಗಾರಿಕೆಗಳ ಮೇಲೆ ಉದ್ಯಮಿಗಳು ಕಣ್ಣು ನೆಟ್ಟಿದ್ದಾರೆ. ಅಲ್ಲದೆ ಅಪಾರ ಪ್ರಮಾಣದ ಔಷಧಿ ಸಸ್ಯಗಳನ್ನು ಕೂಡ ದೋಚುತ್ತಿದ್ದಾರೆ.

ಮೂಲ ನಿವಾಸಿಗಳ ಜೀವಕ್ಕೆ ಕುತ್ತು
ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications