News Makers 2020: ಶಹೀನ್ ಬಾಗ್ ಪ್ರತಿಭಟನೆಯ ಬಿಲ್ಕಿಸ್ ದಾದಿ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕಳೆದ ವರ್ಷದ ಡಿಸೆಂಬರ್ನಿಂದ 2020ರ ಮಾರ್ಚ್ 24ರವರೆಗೂ ನಿರಂತರ ಹಾಗೂ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಅದರಲ್ಲಿ ದೆಹಲಿಯ ಶಹೀನ್ ಬಾಗ್ನಲ್ಲಿ ಸಂಪೂರ್ಣವಾಗಿ ಮಹಿಳೆಯರೇ ಕುಳಿತು ನಡೆಸಿದ ಪ್ರತಿಭಟನೆ ಜಗತ್ತಿನ ಗಮನ ಸೆಳೆದಿತ್ತು. ದೇಶದಲ್ಲಿ ಕೊರೊನಾ ವೈರಸ್ ಲಾಕ್ಡೌನ್ ಜಾರಿಯಾಗುವ ಮಾರ್ಚ್ 24ರವರೆಗೂ 101 ದಿನಗಳ ಕಾಲ ಶಹೀನ್ ಬಾಗ್ ಪ್ರತಿಭಟನೆ ನಡೆದಿತ್ತು. ಅದರಲ್ಲಿ ಹೆಚ್ಚು ಸುದ್ದಿಯಾದವರು ಬಿಲ್ಕಿಸ್ ದಾದಿ.
82 ವರ್ಷದ ಬಿಲ್ಕಿಸ್ ಬಾನೊ ಅವರು ಶಹೀನ್ ಬಾಗ್ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರ ಜತೆ ಕುಳಿತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಸಿದ ಪ್ರತಿಭಟನೆ ಸುದ್ದಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಬಿಲ್ಕಿಸ್ ದಾದಿ ಎಂದೇ ಹೆಸರಾದ ಬಿಲ್ಕಿಸ್ ಬಾನೊ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದರು. ಇಳಿವಯಸ್ಸಿನಲ್ಲಿಯೂ ದೆಹಲಿನ ನಡುಗುವ ಚಳಿಯಲ್ಲಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸ್ಫೂರ್ತಿ ನೀಡಿದ್ದರು.
ಪ್ರತಿಷ್ಠಿತ ಟೈಮ್ ನಿಯತಕಾಲಿಕೆ ಸೆಪ್ಟೆಂಬರ್ನಲ್ಲಿ ಪ್ರಕಟಿಸಿದ '2020ರ ಜಗತ್ತಿನ ನೂರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು' ಪಟ್ಟಿಯಲ್ಲಿ ಬಿಲ್ಕಿಸ್ ಬಾನೊ ಅವರು ಸ್ಥಾನ ಪಡೆದಿದ್ದರು.

'ನಮಗೆ ವಯಸ್ಸಾಗಿದೆ. ನಾವು ಇದನ್ನು ನಮಗಾಗಿ ಮಾಡುತ್ತಿಲ್ಲ. ಇದು ನಮ್ಮ ಮಕ್ಕಳಿಗಾಗಿ. ಇಲ್ಲದಿದ್ದರೆ ನಮ್ಮ ಜೀವವನ್ನು ಪಣವಾಗಿಟ್ಟುಕೊಂಡು ಇಲ್ಲಿ ಕೊರೆಯುವ ಚಳಿಯಲ್ಲಿ ಹಗಲು ರಾತ್ರಿ ಕಳೆಯಬೇಕು? ಎಲ್ಲ ವಿರೋಧಗಳ ನಡುವೆಯೂ ಅವರು ಬಾಬ್ರಿ ಮಸೀದಿ ತೀರ್ಪು, ತ್ರಿವಳಿ ತಲಾಖ್ ಕಾನೂನು, ಅಪನಗದೀಕರಣಗಳನ್ನು ಜಾರಿ ಮಾಡಿದ್ದರು. ಅದಕ್ಕೆ ನಾವು ಏನೂ ಅನ್ನಲಿಲ್ಲ. ಆದರೆ ನಮ್ಮನ್ನು ವಿಭಜಿಸುವ ಈ ಕಾನೂನನ್ನು ಒಪ್ಪುವುದಿಲ್ಲ' ಎಂದು ಬಿಲ್ಕಿಸ್ ದಾದಿ ಹೇಳಿದ್ದರು.
ಪ್ರಸ್ತುತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿಯೂ ಬಿಲ್ಕಿಸ್ ದಾದಿ ಸುದ್ದಿಯಾಗಿದ್ದರು. ಅಕ್ಟೋಬರ್ 1ರಂದು ದೆಹಲಿ-ಹರ್ಯಾಣ ನಡುವಿನ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಅವರನ್ನು ಸೇರಿಕೊಳ್ಳಲು ಬಿಲ್ಕಿಸ್ ದಾದಿ ಹೊರಟಿದ್ದರು. ಆದರೆ ಕೊರೊನಾ ವೈರಸ್ ಸೋಂಕಿನ ಭೀತಿಯ ಕಾರಣ ಅವರನ್ನು ತಡೆದು ಅವರ ಒಳಿತಿಗಾಗಿ ವಾಪಸ್ ಹೋಗುವಂತೆ ಸೂಚಿಸಲಾಗಿತ್ತು. ಅವರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಪೊಲೀಸರು ದೆಹಲಿಯಲ್ಲಿನ ಅವರ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದರು.
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು, ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೃದ್ಧೆಯೊಬ್ಬರನ್ನು ಶಹೀನ್ ಬಾಗ್ ದಾದಿ ಎಂದು ತಪ್ಪಾಗಿ ಕರೆಯುವ ಮೂಲಕ ಟೀಕೆಗೆ ಗುರಿಯಾಗಿದ್ದರು. ನೂರು ರೂಪಾಯಿ ಮತ್ತು ಬಿರಿಯಾನಿ ಕೊಟ್ಟರೆ ಪ್ರತಿಭಟನೆಗೆ ಬರುತ್ತಾರೆ ಎಂದು ಕಂಗನಾ ಅವರು ಬಿಲ್ಕಿಸ್ ಬಾನೊ ಅವರನ್ನು ಲೇವಡಿ ಮಾಡಿದ್ದರು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?











Click it and Unblock the Notifications