News Makers 2020: ಶಹೀನ್ ಬಾಗ್ ಪ್ರತಿಭಟನೆಯ ಬಿಲ್ಕಿಸ್ ದಾದಿ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕಳೆದ ವರ್ಷದ ಡಿಸೆಂಬರ್ನಿಂದ 2020ರ ಮಾರ್ಚ್ 24ರವರೆಗೂ ನಿರಂತರ ಹಾಗೂ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಅದರಲ್ಲಿ ದೆಹಲಿಯ ಶಹೀನ್ ಬಾಗ್ನಲ್ಲಿ ಸಂಪೂರ್ಣವಾಗಿ ಮಹಿಳೆಯರೇ ಕುಳಿತು ನಡೆಸಿದ ಪ್ರತಿಭಟನೆ ಜಗತ್ತಿನ ಗಮನ ಸೆಳೆದಿತ್ತು. ದೇಶದಲ್ಲಿ ಕೊರೊನಾ ವೈರಸ್ ಲಾಕ್ಡೌನ್ ಜಾರಿಯಾಗುವ ಮಾರ್ಚ್ 24ರವರೆಗೂ 101 ದಿನಗಳ ಕಾಲ ಶಹೀನ್ ಬಾಗ್ ಪ್ರತಿಭಟನೆ ನಡೆದಿತ್ತು. ಅದರಲ್ಲಿ ಹೆಚ್ಚು ಸುದ್ದಿಯಾದವರು ಬಿಲ್ಕಿಸ್ ದಾದಿ.
82 ವರ್ಷದ ಬಿಲ್ಕಿಸ್ ಬಾನೊ ಅವರು ಶಹೀನ್ ಬಾಗ್ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರ ಜತೆ ಕುಳಿತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಸಿದ ಪ್ರತಿಭಟನೆ ಸುದ್ದಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಬಿಲ್ಕಿಸ್ ದಾದಿ ಎಂದೇ ಹೆಸರಾದ ಬಿಲ್ಕಿಸ್ ಬಾನೊ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದರು. ಇಳಿವಯಸ್ಸಿನಲ್ಲಿಯೂ ದೆಹಲಿನ ನಡುಗುವ ಚಳಿಯಲ್ಲಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸ್ಫೂರ್ತಿ ನೀಡಿದ್ದರು.
ಪ್ರತಿಷ್ಠಿತ ಟೈಮ್ ನಿಯತಕಾಲಿಕೆ ಸೆಪ್ಟೆಂಬರ್ನಲ್ಲಿ ಪ್ರಕಟಿಸಿದ '2020ರ ಜಗತ್ತಿನ ನೂರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು' ಪಟ್ಟಿಯಲ್ಲಿ ಬಿಲ್ಕಿಸ್ ಬಾನೊ ಅವರು ಸ್ಥಾನ ಪಡೆದಿದ್ದರು.

'ನಮಗೆ ವಯಸ್ಸಾಗಿದೆ. ನಾವು ಇದನ್ನು ನಮಗಾಗಿ ಮಾಡುತ್ತಿಲ್ಲ. ಇದು ನಮ್ಮ ಮಕ್ಕಳಿಗಾಗಿ. ಇಲ್ಲದಿದ್ದರೆ ನಮ್ಮ ಜೀವವನ್ನು ಪಣವಾಗಿಟ್ಟುಕೊಂಡು ಇಲ್ಲಿ ಕೊರೆಯುವ ಚಳಿಯಲ್ಲಿ ಹಗಲು ರಾತ್ರಿ ಕಳೆಯಬೇಕು? ಎಲ್ಲ ವಿರೋಧಗಳ ನಡುವೆಯೂ ಅವರು ಬಾಬ್ರಿ ಮಸೀದಿ ತೀರ್ಪು, ತ್ರಿವಳಿ ತಲಾಖ್ ಕಾನೂನು, ಅಪನಗದೀಕರಣಗಳನ್ನು ಜಾರಿ ಮಾಡಿದ್ದರು. ಅದಕ್ಕೆ ನಾವು ಏನೂ ಅನ್ನಲಿಲ್ಲ. ಆದರೆ ನಮ್ಮನ್ನು ವಿಭಜಿಸುವ ಈ ಕಾನೂನನ್ನು ಒಪ್ಪುವುದಿಲ್ಲ' ಎಂದು ಬಿಲ್ಕಿಸ್ ದಾದಿ ಹೇಳಿದ್ದರು.
ಪ್ರಸ್ತುತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿಯೂ ಬಿಲ್ಕಿಸ್ ದಾದಿ ಸುದ್ದಿಯಾಗಿದ್ದರು. ಅಕ್ಟೋಬರ್ 1ರಂದು ದೆಹಲಿ-ಹರ್ಯಾಣ ನಡುವಿನ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಅವರನ್ನು ಸೇರಿಕೊಳ್ಳಲು ಬಿಲ್ಕಿಸ್ ದಾದಿ ಹೊರಟಿದ್ದರು. ಆದರೆ ಕೊರೊನಾ ವೈರಸ್ ಸೋಂಕಿನ ಭೀತಿಯ ಕಾರಣ ಅವರನ್ನು ತಡೆದು ಅವರ ಒಳಿತಿಗಾಗಿ ವಾಪಸ್ ಹೋಗುವಂತೆ ಸೂಚಿಸಲಾಗಿತ್ತು. ಅವರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಪೊಲೀಸರು ದೆಹಲಿಯಲ್ಲಿನ ಅವರ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದರು.
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು, ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೃದ್ಧೆಯೊಬ್ಬರನ್ನು ಶಹೀನ್ ಬಾಗ್ ದಾದಿ ಎಂದು ತಪ್ಪಾಗಿ ಕರೆಯುವ ಮೂಲಕ ಟೀಕೆಗೆ ಗುರಿಯಾಗಿದ್ದರು. ನೂರು ರೂಪಾಯಿ ಮತ್ತು ಬಿರಿಯಾನಿ ಕೊಟ್ಟರೆ ಪ್ರತಿಭಟನೆಗೆ ಬರುತ್ತಾರೆ ಎಂದು ಕಂಗನಾ ಅವರು ಬಿಲ್ಕಿಸ್ ಬಾನೊ ಅವರನ್ನು ಲೇವಡಿ ಮಾಡಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications