ವರ್ಷದ ವ್ಯಕ್ತಿ 2017: ಇನ್ಫಿ ಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಇನ್ಫೋಸಿಸ್ ನ ಸಹ ಸ್ಥಾಪಕರಾದ ಎನ್. ಆರ್ ನಾರಾಯಣ ಮೂರ್ತಿ ಅವರು ಕಳೆದ ವರ್ಷ ಸಂಸ್ಥೆಯ ಆಡಳಿತ ಮಂಡಳಿ ತಿದ್ದುವುದರಲ್ಲಿ ನಿರತರಾಗಿದ್ದರು. ಇದು ಕರ್ನಾಟಕ ಸಾಫ್ಟ್ ವೇರ್ ಜಗತ್ತು, ಆರ್ಥಿಕ ವಲಯದ ಮೇಲೆ ಪರಿಣಾಮ ಬೀರಿದ್ದು ಸುಳ್ಳಲ್ಲ.
ಸಂಬಳ ಏರಿಕೆ ವಿವಾದದಿಂದಾಗಿ ಸಿಇಒ ಹಾಗೂ ಎಂ.ಡಿ ವಿಶಾಲ್ ಸಿಕ್ಕಾ ಅವರು ಸಂಸ್ಥೆ ತೊರೆದರು. ಮತ್ತೊಮ್ಮೆ ನಾರಾಯಣ ಮೂರ್ತಿ ಅವರು ಇನ್ಫೋಸಿಸ್ ನ ಹೊಸ ಸಾರಥಿ ಆಯ್ಕೆಯ ಜವಾಬ್ದಾರಿ ಹೊತ್ತುಕೊಂಡರು.

ಇಸ್ರೇಲಿ ತಂತ್ರಜ್ಞಾನ ಸಂಸ್ಥೆ ಪನಾಯ ಖರೀದಿ ವ್ಯವಹಾರದಿಂದ ನಿಲೇಕಣಿ ಕ್ಲೀನ್ ಚಿಟ್ ಸಿಕ್ಕಿದ್ದೇ ತಡ ಇನ್ಫೋಸಿಸ್ ನ ಆಡಳಿತ ಚುಕ್ಕಾಣಿ ಹಿಡಿಯುವಂತೆ ಕೇಳಿಕೊಂಡರು. ಇನ್ಫೋಸಿಸ್ ಬೋರ್ಡ್ ಸದಸ್ಯರ ಅಸಮಾಧಾನ, ತಪ್ಪುಗಳನ್ನು ತಮ್ಮ ಮೇಲೆ ಹೇರಿಕೊಂಡು ಸಂಸ್ಥೆಯ ಪ್ರಗತಿ ಹಾದಿ ತಪ್ಪದ್ದಂತೆ ನೋಡಿಕೊಂಡರು. ಈ ಮೂಲಕ ತ್ವರಿತ ನಿರ್ಧಾರ ಕೈಗೊಂಡು ಸಂಸ್ಥೆ ಹಾಗೂ ಆರ್ಥಿಕ ಅಲ್ಲೋಲ ಕಲ್ಲೋಲವನ್ನು ತಪ್ಪಿಸಿದರು. ಸಿಕ್ಕಾ ಅವರ ಜತೆ ಜಗ್ಗಾಟದಿಂದ ಷೇರುಪೇಟೆಯಲ್ಲಾದ ತಲ್ಲಣವನ್ನು ಮರೆಯುವಂತಿಲ್ಲ.
71 ವರ್ಷ ವಯಸ್ಸಿನ ನಾರಾಯಣ ಮೂರ್ತಿ ಅವರು ಬೋರ್ಡ್ ಸದಸ್ಯರ ವಿರೋಧ ಕಟ್ಟಿಕೊಳ್ಳದೆ ನಾಜೂಕಾಗಿ ವ್ಯವಹಾರ ಮುಗಿಸಿ ಸಂಸ್ಥೆಯನ್ನು ಅಪಾಯದಿಂದ ಪಾರು ಮಾಡಿದರು.
ಸಲೀಲ್ ಎಸ್ ಪರೇಖ್ ಅವರನ್ನು ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಜನವರಿ 02, 2018ರಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ, ಸಂಸ್ಥೆಯ ಎಲ್ಲಾ ಬೆಳವಣಿಗೆ ಹಿಂದೆ ನಾರಾಯಣ ಮೂರ್ತಿ ಅವರು ಈಗಲೂ ಸಕ್ರಿಯರಾಗಿದ್ದಾರೆ. ರಾಜ್ಯದ ಸಾಫ್ಟ್ ವೇರ್ ರಫ್ತು, ಆರ್ಥಿಕ ಪ್ರಗತಿಗೆ ಇನ್ಫೋಸಿಸ್ ಕೊಡುಗೆ ಮುಂದುವರಿದಿದೆ.
ಇನ್ಫೋಸಿಸ್ ಸೈನ್ಸ್ ಫೌಂಡೇಷನ್ ಮುಖ್ಯವಾಗಿ ಯುವ ವಿಜ್ಞಾನಿಗಳಿಗೆ ಹೊಸ ಸಂಶೋಧನೆ, ಅನ್ವೇಷಣೆಗಳಿಗೆ ನೀಡುತ್ತಿರುವ ಆದ್ಯತೆಯನ್ನು ಪರಿಗಣಿಸಿ ಜಾಗತಿಕ ಮಟ್ಟದ ಅಲೈಯಸ್ ಪ್ರೈಜ್ ಕೂಡಾ ನಾರಾಯಣ ಮೂರ್ತಿ ಅವರನ್ನು ಹುಡುಕಿಕೊಂಡು ಬಂದಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications