ವರ್ಷದ ವ್ಯಕ್ತಿ: ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
2017ರಲ್ಲಿ ಸುದ್ದಿ ಕೇಂದ್ರದ ಸುತ್ತ ಗಿರಕಿ ಹೊಡೆದವರಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಪ್ರಮುಖರು. ದಕ್ಷ, ಖಡಕ್ ಪೊಲೀಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅದಕ್ಕಿಂತ ಹೆಚ್ಚಾಗಿ ತಮ್ಮ ಮಾನವೀಯ ನಡೆಗಳ ಮೂಲಕವೂ ಚಿಕ್ಕಮಗಳೂರಿನ ಗಡಿಗಳನ್ನು ಮೀರಿ ಕಾಫಿಯ ಘಮಲಿನಂತೆ ರಾಜ್ಯದಾದ್ಯಂತ ಸುದ್ದಿಗೆ ಗ್ರಾಸವಾದವರು.
2016ರ ಜುಲೈನಲ್ಲಿ ಉಡುಪಿಯಿಂದ ಚಿಕ್ಕಮಗಳೂರು ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ ವರ್ಗವಾದರು. ನಂತರ ನಡೆದ ಘಟನೆಯೊಂದರಲ್ಲಿ ಇಲ್ಲಿನ ಮರಳು ಮಾಫಿಯಾದವರು ಊರ ಜನರೊಂದಿಗೆ ಸೇರಿ ರಸ್ತೆಯನ್ನು ಬ್ಲಾಕ್ ಮಾಡಿ ಪೊಲೀಸರನ್ನೇ ಕೂಡಿಹಾಕಿದ್ದರು. ಆಗ ಸ್ಥಳಕ್ಕೆ ಬಂದ ಅಣ್ಣಾಮಲೈ ಬಹಿರಂಗವಾಗಿ ಅಪರಾಧಿಗಳ ವಿರುದ್ಧ ಗುಡುಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿತ್ತು. ಈ ವಿಡಿಯೋ ನೋಡಿಯೇ ಅರ್ಧ ಕ್ರಿಮಿನಲ್ ಗಳು ಅವತ್ತು ಪತರಗುಟ್ಟಿದ್ದರು.

ನಂತರ ಜೂನಿನಲ್ಲಿ ಬಂಟ್ವಾಳದಲ್ಲಿ ಎಸ್.ಡಿ.ಪಿ.ಐನ ಅಶ್ರಫ್ ಕೊಲೆಯಾದ ಸಂದರ್ಭ ಉಂಟಾದ ಗಲಭೆಯನ್ನು ಹತೋಟಿಗೆ ತರಲು ಸರಕಾರ ಇದೇ ಅಣ್ಣಾಮಲೈರನ್ನು ದಕ್ಷಿಣ ಕನ್ನಡಕ್ಕೆ ಕರೆಸಿಕೊಂಡಿತು. ಹಾಗೆ ಬಂಟ್ವಾಳಕ್ಕೆ ಬಂದ ಅಣ್ಣಾಮಲೈ ರಾತ್ರಿ ಹಗಲು ರಸ್ತೆಯಲ್ಲೇ ಬೀಡುಬಿಟ್ಟು ಗಲಾಟೆ ಹತೋಟಿಗೆ ತಂದು ಜನಮೆಚ್ಚುಗೆ ಗಳಿಸಿದರು.
ನಿರಂತರ ಗಲಭೆಗಳು ದಕ್ಷಿಣ ಕನ್ನಡ ಭಾಗದಲ್ಲಿ ನಡೆಯುತ್ತಿದ್ದಾಗ ಅಣ್ಣಾಮಲೈರನ್ನು ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಬೇಕು ಎಂಬ ಬೇಡಿಕೆಯೂ ಜನರಿಂದ ಬಂದಿತ್ತು. ಅಷ್ಟರಮಟ್ಟಿಗೆ ಅಣ್ಣಾಮಲೈ ಜನರ ಬೆಂಬಲ ಗಿಟ್ಟಿಸಿದ್ದರು.
ಇದೇ ವರ್ಷ ಫೆಬ್ರವರಿಯಲ್ಲಿ ಅಣ್ಣಾಮಲೈ ತಬ್ಬಲಿಯಾಗಲಿದ್ದ ಚಿಕ್ಕಮಗಳೂರಿನ ಯುವತಿಯ ವಿದ್ಯಾಭ್ಯಾಸ ಮತ್ತು ಇತರ ಖರ್ಚುಗಳನ್ನು ಭರಿಸುವ ಅಭಯ ನೀಡಿ ತಮ್ಮ ಮಾನವೀಯ ಮುಖವನ್ನು ತೆರೆದಿಟ್ಟಿದ್ದರು. ಈ ಮೂಲಕ ಖಾಕಿಯಾಚೆಗಿನ ತಮ್ಮ ವ್ಯಕ್ತಿತ್ವದಿಂದ ಜನರ ಮನಸೂರೆಗೊಂಡಿದ್ದರು.
ಡಿಸೆಂಬರ್ 3ರಂದು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಆಚರಣೆ ನಡೆದಾಗ ಅಹಿತಕರ ಘಟನೆಗಳಾಗದಂತೆ ಅಣ್ಣಾಮಲೈ ತಡೆದಿದ್ದರು. ಜಿಲ್ಲೆಯಲ್ಲಿ ಅಕ್ಷರಶಃ ಪೊಲೀಸ್ ಸರ್ಪಗಾವಲು ಹಾಕಿ ಯಾವುದೇ ಗಲಭೆ, ಗಲಾಟೆಗಳಾಗದಂತೆ ಎಚ್ಚರಿಕೆ ವಹಿಸಿದ್ದರು.
ಹೀಗೆ ಮಿತಭಾಷಿ ಅಣ್ಣಾಮಲೈ ನಿರಂತರ ತಮ್ಮ ಕಾರ್ಯಚಟುವಟಿಕೆಗಳ ಮೂಲಕವೇ ಆಗಾಗ ಹೆಡ್ಲೈನ್ ಗಳನ್ನು ಅಲಂಕರಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications