ವರ್ಷದ ವ್ಯಕ್ತಿ: ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
2017ರಲ್ಲಿ ಸುದ್ದಿ ಕೇಂದ್ರದ ಸುತ್ತ ಗಿರಕಿ ಹೊಡೆದವರಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಪ್ರಮುಖರು. ದಕ್ಷ, ಖಡಕ್ ಪೊಲೀಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅದಕ್ಕಿಂತ ಹೆಚ್ಚಾಗಿ ತಮ್ಮ ಮಾನವೀಯ ನಡೆಗಳ ಮೂಲಕವೂ ಚಿಕ್ಕಮಗಳೂರಿನ ಗಡಿಗಳನ್ನು ಮೀರಿ ಕಾಫಿಯ ಘಮಲಿನಂತೆ ರಾಜ್ಯದಾದ್ಯಂತ ಸುದ್ದಿಗೆ ಗ್ರಾಸವಾದವರು.
2016ರ ಜುಲೈನಲ್ಲಿ ಉಡುಪಿಯಿಂದ ಚಿಕ್ಕಮಗಳೂರು ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ ವರ್ಗವಾದರು. ನಂತರ ನಡೆದ ಘಟನೆಯೊಂದರಲ್ಲಿ ಇಲ್ಲಿನ ಮರಳು ಮಾಫಿಯಾದವರು ಊರ ಜನರೊಂದಿಗೆ ಸೇರಿ ರಸ್ತೆಯನ್ನು ಬ್ಲಾಕ್ ಮಾಡಿ ಪೊಲೀಸರನ್ನೇ ಕೂಡಿಹಾಕಿದ್ದರು. ಆಗ ಸ್ಥಳಕ್ಕೆ ಬಂದ ಅಣ್ಣಾಮಲೈ ಬಹಿರಂಗವಾಗಿ ಅಪರಾಧಿಗಳ ವಿರುದ್ಧ ಗುಡುಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿತ್ತು. ಈ ವಿಡಿಯೋ ನೋಡಿಯೇ ಅರ್ಧ ಕ್ರಿಮಿನಲ್ ಗಳು ಅವತ್ತು ಪತರಗುಟ್ಟಿದ್ದರು.

ನಂತರ ಜೂನಿನಲ್ಲಿ ಬಂಟ್ವಾಳದಲ್ಲಿ ಎಸ್.ಡಿ.ಪಿ.ಐನ ಅಶ್ರಫ್ ಕೊಲೆಯಾದ ಸಂದರ್ಭ ಉಂಟಾದ ಗಲಭೆಯನ್ನು ಹತೋಟಿಗೆ ತರಲು ಸರಕಾರ ಇದೇ ಅಣ್ಣಾಮಲೈರನ್ನು ದಕ್ಷಿಣ ಕನ್ನಡಕ್ಕೆ ಕರೆಸಿಕೊಂಡಿತು. ಹಾಗೆ ಬಂಟ್ವಾಳಕ್ಕೆ ಬಂದ ಅಣ್ಣಾಮಲೈ ರಾತ್ರಿ ಹಗಲು ರಸ್ತೆಯಲ್ಲೇ ಬೀಡುಬಿಟ್ಟು ಗಲಾಟೆ ಹತೋಟಿಗೆ ತಂದು ಜನಮೆಚ್ಚುಗೆ ಗಳಿಸಿದರು.
ನಿರಂತರ ಗಲಭೆಗಳು ದಕ್ಷಿಣ ಕನ್ನಡ ಭಾಗದಲ್ಲಿ ನಡೆಯುತ್ತಿದ್ದಾಗ ಅಣ್ಣಾಮಲೈರನ್ನು ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಬೇಕು ಎಂಬ ಬೇಡಿಕೆಯೂ ಜನರಿಂದ ಬಂದಿತ್ತು. ಅಷ್ಟರಮಟ್ಟಿಗೆ ಅಣ್ಣಾಮಲೈ ಜನರ ಬೆಂಬಲ ಗಿಟ್ಟಿಸಿದ್ದರು.
ಇದೇ ವರ್ಷ ಫೆಬ್ರವರಿಯಲ್ಲಿ ಅಣ್ಣಾಮಲೈ ತಬ್ಬಲಿಯಾಗಲಿದ್ದ ಚಿಕ್ಕಮಗಳೂರಿನ ಯುವತಿಯ ವಿದ್ಯಾಭ್ಯಾಸ ಮತ್ತು ಇತರ ಖರ್ಚುಗಳನ್ನು ಭರಿಸುವ ಅಭಯ ನೀಡಿ ತಮ್ಮ ಮಾನವೀಯ ಮುಖವನ್ನು ತೆರೆದಿಟ್ಟಿದ್ದರು. ಈ ಮೂಲಕ ಖಾಕಿಯಾಚೆಗಿನ ತಮ್ಮ ವ್ಯಕ್ತಿತ್ವದಿಂದ ಜನರ ಮನಸೂರೆಗೊಂಡಿದ್ದರು.
ಡಿಸೆಂಬರ್ 3ರಂದು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಆಚರಣೆ ನಡೆದಾಗ ಅಹಿತಕರ ಘಟನೆಗಳಾಗದಂತೆ ಅಣ್ಣಾಮಲೈ ತಡೆದಿದ್ದರು. ಜಿಲ್ಲೆಯಲ್ಲಿ ಅಕ್ಷರಶಃ ಪೊಲೀಸ್ ಸರ್ಪಗಾವಲು ಹಾಕಿ ಯಾವುದೇ ಗಲಭೆ, ಗಲಾಟೆಗಳಾಗದಂತೆ ಎಚ್ಚರಿಕೆ ವಹಿಸಿದ್ದರು.
ಹೀಗೆ ಮಿತಭಾಷಿ ಅಣ್ಣಾಮಲೈ ನಿರಂತರ ತಮ್ಮ ಕಾರ್ಯಚಟುವಟಿಕೆಗಳ ಮೂಲಕವೇ ಆಗಾಗ ಹೆಡ್ಲೈನ್ ಗಳನ್ನು ಅಲಂಕರಿಸಿದರು.
-
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
Content Creator: ಇನ್ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್ ಕ್ರಿಯೇಟರ್












Click it and Unblock the Notifications