ವರ್ಷದ ವ್ಯಕ್ತಿ 2017: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗೀಲ್
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ಅಕ್ರಮ ಆಸ್ತಿ ಸಂಪಾದನೆ ಆರೋಪಿ ಎಐಎಡಿಎಂಕೆಯ ಶಶಿಕಲಾ ಪರಪ್ಪನ ಅಗ್ರಹಾರದಲ್ಲಿ ರಾಜವೈಭೋಗ ಅನುಭವಿಸುತ್ತಿರುವ ಬಗ್ಗೆ ತನಿಖೆ ನಡೆಸಿ ಡಿಜಿಪಿ ವಿರುದ್ಧವೇ ಆರೋಪಪಟ್ಟಿ ಸಲ್ಲಿಸಿದ ದಿಟ್ಟ ಅಧಿಕಾರಿ ಡಿ.ರೂಪ.
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸುಧಾರಣೆ, ಭ್ರಷ್ಟಾಚಾರ ಬಯಲಿಗೆಳೆದಿದ್ದು, ದಿಟ್ಟವಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯವಸ್ಥೆಯನ್ನು ಟೀಕಿಸಿದ್ದು, ಜನಾನುರಾಗಿಯಾಗಿ ಜಾಗೃತಿ ಮೂಡಿಸಿದ್ದು ಎಲ್ಲವೂ ಇವರನ್ನು ಸುದ್ದಿಯಲ್ಲಿರುವಂತೆ ಮಾಡಿತು.

ಬಂದಿ ಖಾನೆಯ ಡಿಜಿಪಿ ಹುದ್ದೆಯಿಂದ ಟ್ರಾಫಿಕ್ ವಿಭಾಗಕ್ಕೆ ವರ್ಗಾವಣೆಯಾದ ಬಳಿಕವೂ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಮುಂದುವರೆಸಿದ್ದಾರೆ.
ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಬಳಿಕ 2000ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 43ನೇ ಶ್ರೇಯಾಂಕ ಗಳಿಸಿದ್ದರು. ಹೈದರಾಬಾದ್ ನ ಪೊಲೀಸ್ ಅಕಾಡೆಮಿಯಲ್ಲಿ ಐಪಿಎಸ್ ತರಬೇತಿ ಪಡೆದ ರೂಪಾ ಅತ್ಯುತ್ತಮ ಶಾರ್ಪ್ ಶೂಟರ್. ಬಂದೂಕು ಗುರಿಯಿಂದಾಗಿಯೇ ರೂಪಾ ಅವರು ಸಾಕಷ್ಟು ಪ್ರಶಸ್ತಿಗಳನ್ನು ತರಬೇತಿ ಅವಧಿಯಲ್ಲಿಯೇ ಪಡೆದಿದ್ದರು.
ಬಹುಮುಖ ಪ್ರತಿಭೆಯ ರೂಪಾ ಅವರು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಹಾಗೂ ಭರತನಾಟ್ಯ ನೃತ್ಯ ಪ್ರವೀಣೆ ಕೂಡಾ. ಹಾಡುಗಾರ್ತಿ, ಪ್ರೇರಣಾತ್ಮಕ ಭಾಷಣಕಾರ್ತಿ ಕೂಡಾ, ಟೆಡ್ಎಕ್ಸ್ ನಲ್ಲಿ ಇವರ ಭಾಷಣಗಳು ಖ್ಯಾತಿಗಳಿಸಿವೆ.
ವೃತ್ತಿ ಜೀವನದ ಆರಂಭದಲ್ಲಿಯೇ ದಿಟ್ಟತನಕ್ಕೆ ಹೆಸರಾಗಿದ್ದ ರೂಪಾ ಮೊದಲಿಗೆ ಬೆಳಕಿಗೆ ಬಂದದ್ದು ಈಗಿನ ಕೇಂದ್ರ ಸಚಿವೆ ಉಮಾ ಭಾರತಿ ಅವರನ್ನು ಬಂಧಿಸಿದಾಗ. ಗಲಭೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಉಮಾ ಭಾರತಿ ಅವರನ್ನು ಬಂಧಿಸುವಂತೆ ನ್ಯಾಯಾಲಯದ ಆದೇಶ ಇತ್ತು, ಆ ಕೆಲಸವನ್ನು ದಿಟ್ಟತನದಿಂದ ಡಿ.ರೂಪಾ ಮಾಡಿ ಮುಗಿಸಿ ಶಹಭಾಷ್ ಎನಿಸಿಕೊಂಡಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications