2017ರ ವರ್ಷದ ವ್ಯಕ್ತಿ : ಸಚಿವ ಕೆ.ಜೆ.ಜಾರ್ಜ್
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ಸಚಿವ ಸ್ಥಾನ ಅಲಂಕರಿಸಿದ ದಿನದಿಂದ ಸುದ್ದಿಯಲ್ಲಿರುವವರು ಕೆ.ಜೆ.ಜಾರ್ಜ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ, ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರು.
ಮಂಗಳೂರು ಐಜಿ ಕಚೇರಿಯಲ್ಲಿ ಡಿವೈಎಸ್ಪಿಯಾಗಿದ್ದ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಹೆಸರು ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಕೆ.ಜೆ.ಜಾರ್ಜ್. ಬೆಂಗಳೂರು ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಪ್ರಸ್ತಾವನೆ ಮುಂಚೂಣಿಕೆ ಬಂದಾಗ ಕೆ.ಜೆ.ಜಾರ್ಜ್ ಸುದ್ದಿಯಲ್ಲಿದ್ದರು.
ವರ್ಷವಿಡೀ ಸುದ್ದಿಯಲ್ಲಿದ್ದ ಸಚಿವ ಕೆ.ಜೆ.ಜಾರ್ಜ್ ಅವರು ಈ ವರ್ಷದ ವ್ಯಕ್ತಿಯೇ?. ಒನ್ ಇಂಡಿಯಾ ಕನ್ನಡ ಆರಂಭಿಸಿರುವ 2017ರ ವರ್ಷದ ವ್ಯಕ್ತಿ ಆಯ್ಕೆಯಲ್ಲಿ ಓದುಗರು ಕೆ.ಜೆ.ಜಾರ್ಜ್ ಅವರಿಗೆ ಮತ ಹಾಕಬಹುದಾಗಿದೆ.