ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2017ರ ವರ್ಷದ ವ್ಯಕ್ತಿ : ಸಚಿವ ಎಂ.ಬಿ.ಪಾಟೀಲ್

|
Google Oneindia Kannada News

ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.

ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರು. ಇಲಾಖೆಯಲ್ಲಿ ಮಾಡಿದ ಕೆಲಸಕ್ಕಿಂತ ಹೆಚ್ಚಿನ ಪ್ರಚಾರ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರಿಗೆ ಸಿಕ್ಕಿದೆ.

ವರ್ಷದ ವ್ಯಕ್ತಿ 2017

ಕರ್ನಾಟಕದಲ್ಲಿ ಹಲವು ತಿಂಗಳಿನಿಂದ ಜಾರಿಯಲ್ಲಿರುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಸಚಿವ ಎಂ.ಬಿ.ಪಾಟೀಲ್.ಇಂದಿಗೂ ಈ ಹೋರಾಟ ಅಂತಿಮ ಘಟಕ್ಕೆ ತಲುಪಿಲ್ಲ.

 Newsmaker of Karnataka 2017 : MB Patil

'ಲಿಂಗಾಯತ ಧರ್ಮ ಸ್ಥಾಪನೆ ಹೋರಾಟಕ್ಕೆ ಶಿವಕುಮಾರ ಸ್ವಾಮೀಜಿ ಅವರು ಆಶೀರ್ವದಿಸಿದ್ದಾರೆ' ಎಂದು ಸಚಿವ ಎಂ.ಬಿ.ಪಾಟೀಲ ಅವರು ಹೇಳಿಕೆ ನೀಡಿ ಎರಡು ದಿನ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದರು.

'ಲಿಂಗಾಯತ ಪ್ರತ್ಯೇಕ ಧರ್ಮ ವಾಗುವ ತನಕ ಹೋರಾಟವನ್ನು ನಿಲ್ಲಿಸುವುದಿಲ್ಲ' ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕೆ ಗಡುವನ್ನು ಸಹ ನೀಡಲಾಗಿದೆ.

ಒನ್ ಇಂಡಿಯಾ ಕನ್ನಡ 2017ರ ವರ್ಷದ ವ್ಯಕ್ತಿಯಾಗಿ ಎಂ.ಬಿ.ಪಾಟೀಲ ಅವರನ್ನು ಆಯ್ಕೆ ಮಾಡಿದೆ.

English summary
Water Resources minister M.B.Patil demanding for separate religion status for Lingayat Dharma. He is in a lead in moment. Oneindiakannada has choose MB Patil as news maker of Karnataka 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X