ಬಂಡೀಪುರ ರಸ್ತೆಯಲ್ಲಿ ಸಂಚಾರ ನಿಷೇಧ ತೆರವಿನ ಹಿಂದೆ ರಾಜಕೀಯ ದುರುದ್ದೇಶ
ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಿಷೇಧ ಹೇರುವಂತೆ ಪರಿಸರವಾದಿಗಳು, ವನ್ಯಜೀವಿ ತಜ್ಞರು ಹಿಡಿದಿರುವ ಪಟ್ಟು ಕರ್ನಾಟಕ ಮತ್ತು ಕೇರಳ ಸರ್ಕಾರಗಳ ನಿದ್ದೆ ಕೆಡಿಸಿದೆ.
ಸುಪ್ರೀಂ ಕೋರ್ಟ್ ಈ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ಹೇರಿದ್ದರೂ, ಆ ನಿಷೇಧವನ್ನು ತೆರವುಗೊಳಸಲು ದಿನ ದಿನವೂ ಸಾವಿರಾರು ಮಂದಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದಕ್ಕೆ ಕಾರಣವಿದೆ!
ರಾತ್ರಿ ಸಮಯದಲ್ಲಿ ನಡೆಯುವ ಹಲವು ಕಳ್ಳಸಾಗಣೆ, ಅರಣ್ಯ ದರೋಡೆಗಳಿಗೆ ನ್ಯಾಯಾಲಯದ ಆದೇಶ ತೊಡಕಾಗಿತ್ತು. ತುರ್ತು ಮತ್ತು ಭದ್ರತಾ ಸಿಬ್ಬಂದಿ ವಾಹನಗಳನ್ನು ಬಿಟ್ಟು ಬೇರೆಲ್ಲ ವಾಹನಗಳಿಗೂ ಈ ರಸ್ತೆಯಲ್ಲಿ ಸಂಪೂರ್ಣ ನಿಷೇಧ ವಿಧಿಸಬೇಕು ಎಂಬ ಕೂಗೂ ಎದ್ದಿತ್ತು. ಆದರೆ ಸರ್ಕಾರವೇ ಸಾವಿರಾರು ಜನರನ್ನು ಪ್ರೇರೇಪಿಸಿ, ಈ ಆದೇಶ ಜಾರಿಗೆ ಬರದಂತೆ ಮಾಡಿತ್ತು.

ಆದರೆ ಇದೀಗ ವೈಲ್ಡ್ ಲೈಫ್ ಫಸ್ಟ್ ಎಂಬ ಎನ್ ಜಿಒ ವೊಂದು ಮನೋಹರ್ ವ್ಯಾಸ್ ಮತ್ತು ಪಿಕೆ ಮನೋಹರ್ ಎಂಬುವವರ ಮೂಲಕ ದಾವೆಗೆ ಸೇರಿಸುವಂತೆ ಹಾಕಲಾಗಿದ್ದ ಅರ್ಜಿ (Impleading Application) ಅರ್ಜಿ ಭಾರತ ಸರ್ಕಾರದ ಅಟಾರ್ನಿ ಜನರಲ್ ಹರೀಶ್ ಸಾಳ್ವೆ ಅವರ ಗಮನ ಸೆಳೆದಿತ್ತು. ಕರ್ನಾಟಕ ಮತ್ತು ಕೇರಳ ಗಡಿಯ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವ ಎನ್ ಎಚ್ 766 ರಲ್ಲಿ ಸಂಪೂರ್ಣ ಸಂಚಾರ ನಿಷೇಧಿಸಬೇಕೆಂಬ ಒತ್ತಾಯವನ್ನು ಸುಪ್ರೀಂ ಕೋರ್ಟ್ ಮುಂದಿಡುವುದಕ್ಕೆ ಅದು ನೆರವಾಗಿತ್ತು.
ಆದರೆ ಕೇರಳ ಮತ್ತು ಕರ್ನಾಟಕದ ಶಾಸಕರು, ಪ್ರಭಾವಿಗಳ ನಡೆವೆ ನಡೆದ ಮಾತುಕತೆಯ ನಂತರ ಈ ರಸ್ತೆಯನ್ನು ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ಮಾತ್ರ ಮುಚ್ಚಬೇಕು, ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ, ಆ ಆದೇಶವನ್ನೇ ಜಾರಿಗೆ ಬರುವಂತೆ ಮಾಡಿದರು.
ಇದೀಗ ಇದ್ದಕ್ಕಿದ್ದಂತೆ ರಾತ್ರಿ ಸಂಚಾರ ನಿಷೇಧವನ್ನೂ ತೆರವುಗೊಳಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಕುರಿತಂತೆ 2018 ರಲ್ಲೇ ವೈಲ್ಡ್ ಲೈಫ್ ಫಸ್ಟ್ ಅರ್ಜಿ ಸಲ್ಲಿಸಿದ್ದರೂ, ಅದನ್ನು ಸುಪ್ರೀಂ ಕೋರ್ಟ್ ಇಂದಿಗೂ ಕೈಗೆಟ್ಟಿಕೊಂಡಿಲ್ಲ. ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದೆಂದು ಹಲವು ಪರಿಸರ ವಾದಿಗಳು, ವನ್ಯಜೀವಿ ತಜ್ಞರು ಬೀದಿಗಿಳಿದಿದ್ದು, ಇದೀಗ ಈ ಹೋರಾಟಕ್ಕೆ ರಾಹುಲ್ ಗಾಂಧಿ ಅವರಂಥ ಹಲವು ಮುಖಂಡರು ಕೈಜೋಡಿಸಿದ್ದಾರೆ. ಇದು ದಕ್ಷಿಣ ಭಾರತದ ಸೂಕ್ಷ್ಮ ಪರಿಸರವಾದ ಪಶ್ಚಿಮ ಘಟ್ಟದ ಉಳಿವಿಗಾಗಿ ಅತೀ ದೊಡ್ಡ ಪರಿಸರ ಹೋರಾಟವಾಗುವ ಲಕ್ಷಣಗಳು ಕಾಣಿಸುತ್ತಿವೆ.
ಆದರೆ ಈ ಹೋರಾಟವನ್ನು ಆರಂಭಿಸಿದ ವೈಲ್ಡ್ ಲೈಫ್ ಫಸ್ಟ್ ಅನ್ನೂ ಟೀಕಿಸುವ ಪ್ರಕ್ರಿಯೆಯೂ ಆರಂಭವಾಗಿದ್ದು, ಪ್ರಚಾರಕ್ಕೋಸ್ಕರ ಎನ್ ಜಿ ಓ ಹೀಗೆಲ್ಲ ಮಾಡುತ್ತಿದೆ ಎಂಬ ಮಾತೂ ಕೇಳಿಬರುತ್ತಿದೆ. ಹೋರಾಟದಲ್ಲಿ ಇವೆಲ್ಲ ಸಹಜ ತಾನೆ...?
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications