ಯುಪಿಯಲ್ಲಿ ಬಿಜೆಪಿ ವಿರುದ್ಧ ಪ್ರಚಾರದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಟಿಕಾಯತ್
ನವದೆಹಲಿ ನವೆಂಬರ್ 22: ಉತ್ತರಪ್ರದೇಶದಲ್ಲಿ ಬಿಜೆಪಿ ವಿರುದ್ಧ ಪ್ರಚಾರದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಆರು ತಿಂಗಳ ಕಾಲ ಪ್ರಚಾರ ನಡೆಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್ ಈ ಹಿಂದೆ ಹೇಳಿದ್ದರು. ಆದರೆ ವಿವಾದಾತ್ಮಕ ಕಾನೂನುಗಳನ್ನು ಹಿಂಪಡೆಯುವುದಾಗಿ ಕೇಂದ್ರದ ಘೋಷಣೆಯ ನಂತರ ಟಿಕಾಯತ್ ತನ್ನ ನಿಲುವನ್ನು ಬದಲಾಯಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಟಿಕಾಯತ್ ಸ್ಥಳೀಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ್ದೆವು. ಆದರೆ ಉತ್ತರಪ್ರದೇಶದಲ್ಲಿ ಪ್ರಚಾರ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸಿಲ್ಲ. ಯುಪಿ ಸೇರಿದಂತೆ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನಿಯಮಗಳನ್ನು ಹಿಂಪಡೆದಿದೆ. ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೈತರಿಗೆ ಏನೂ ಮಾಡಿಲ್ಲ. ಅವರು ಮೊದಲು ರೈತರನ್ನು ಸ್ವೀಕರಿಸಲು ಸಿದ್ಧರಿರಲಿ ಮತ್ತು ರೈತರಿಗೆ ಪ್ರಾಮಾಣಿಕವಾಗಿರಲಿ "ಎಂದು ಯುಪಿಯ ಪ್ರಮುಖ ಜಾಟ್ ನಾಯಕರೂ ಆಗಿರುವ ಟಿಕಾಯತ್ ಹೇಳಿದರು.
ಕೇಂದ್ರ ಸರ್ಕಾರವು ಕಾನೂನುಗಳನ್ನು ರದ್ದುಗೊಳಿಸುವಲ್ಲಿ ತಡವಾಗಿದೆ. ಆದರೆ ಮೋದಿ ಸಲಹೆಗಾರರಿಗೆ ಇದು ಸ್ವಲ್ಪ ಮುಂಚಿತವಾಗಿರಬಹುದು. ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೇತೃತ್ವದಲ್ಲಿ ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಪ್ರಾರಂಭಿಸಲಾಯಿತು.
ರೈತರ ಕುಟುಂಬಗಳಿಗೆ ಸಹಾಯಧನಕ್ಕಾಗಿ ಬೇಡಿಕೆ:
ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ನಂತರ ರೈತರು ನಡೆಸುತ್ತಿರುವ ಮೊದಲ ಪ್ರತಿಭಟನೆ ಇದಾಗಿದೆ. ಉತ್ತರ ಪ್ರದೇಶದ ವಾರಣಾಸಿ ಮತ್ತು ಮುಜಾಫರ್ನಗರದಲ್ಲಿ ರೈತರ ಪಂಚಾಯ್ತಿ ನಡೆದಿದೆ. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಬೇಕು, ಮುಷ್ಕರದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಸಹಾಯಧನ ನೀಡಬೇಕು, ರೈತರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಹೊರಹಾಕಬೇಕು ಎಂದು ಮಹಾಪಂಚಾಯತ್ ಒತ್ತಾಯಿಸಿದೆ.
ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮುಷ್ಕರವನ್ನು ಕೊನೆಗೊಳಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಜೆಕೆಎಂ) ಹೇಳಿದೆ. ಜೊತೆಗೆ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕರಡು ಮಸೂದೆಯನ್ನು ಸಂಪುಟದ ಪರಿಗಣನೆಗೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಬುಧವಾರ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುವ ಕೇಂದ್ರ ಸಚಿವ ಸಂಪುಟದಲ್ಲಿ ಮಸೂದೆ ಅಂಗೀಕಾರವಾಗಲಿದೆ. ಈ ಮಧ್ಯೆ ನಿಯಮ ರದ್ದು ಹಾಗೂ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಧಿಸುವ ಕುರಿತು ಕ್ರಮ ಕೈಗೊಳ್ಳಲು ಪ್ರಧಾನಿ ನ.28ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
ಮುಂದಿನ ವರ್ಷಾರಂಭದಲ್ಲಿ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಕಾನೂನುಗಳನ್ನು ರದ್ದುಪಡಿಸುವ ಘೋಷಣೆ ಮಾಡಿರುವುದು ಬಿಜೆಪಿಗೆ ಹೆಚ್ಚಿನ ಲಾಭ ತರುವುದರಲ್ಲಿ ಸಂಶಯವಿಲ್ಲ. ವಿಶೇಷವಾಗಿ ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಕಾನೂನಿನ ವಿರುದ್ಧ ಪ್ರತಿಭಟನೆಗಳು ತೀವ್ರವಾಗಿವೆ. ಪಂಜಾಬ್ ನಲ್ಲಿ ರೈತಾಪಿ ಆಂದೋಲನ ತಾಂಡವವಾಡುತ್ತಿದ್ದು, ಈ ಬಾರಿ ಕಾಂಗ್ರೆಸ್ ತೊರೆದಿರುವ ಮಾಜಿ ಮುಖ್ಯಮಂತ್ರಿ ಅಮರಿಂದರ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿ ಬಿಜೆಪಿ ಇದೆ. ಯುಪಿಯಲ್ಲಿ ಬಿಜೆಪಿ ವಿರುದ್ಧ ಪ್ರಬಲ ಪ್ರಚಾರ ನಡೆಸುವುದಾಗಿ ಘೋಷಿಸಿರುವ ರೈತ ಸಂಘಟನೆಗಳ ಮೃದುಧೋರಣೆಗಾಗಿ ಬಿಜೆಪಿ ಎದುರು ನೋಡುತ್ತಿದೆ.
ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯನ್ನು ಸೋಲಿಸಲು ಬಿಜೆಪಿಯ ವಿರುದ್ದವಾಗಿ ರೈತರು ಪ್ರಚಾರ ಮಾಡುವುದಾಗಿ ಈ ಹಿಂದೆಯೇ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಈ ಹಿಂದೆ "2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ" ಅನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದರು.
Recommended Video