ಇದು ಸರ್ವಾಧಿಕಾರಿಗೆ ಹಿಡಿದಿರುವ ಹುಚ್ಚೋ? ಅಥವಾ ಅತಿ ಬುದ್ಧಿವಂತಿಕೆಯೋ?
ಏನಾದರೂ ಒಂದು ಹುಚ್ಚು ನಿರ್ಧಾರ ಕೈಗೊಳ್ಳುತ್ತಾ ಸದಾ ಸುದ್ದಿಯಲ್ಲಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತೆ ಸದ್ದು ಮಾಡುತ್ತಿದ್ದಾನೆ. ಆದ್ರೆ ಈ ಬಾರಿ ಕೊರೊನಾ ವ್ಯಾಕ್ಸಿನ್ ವಿಚಾರಕ್ಕೆ ಉತ್ತರ ಕೊರಿಯಾ ಸುದ್ದಿಯಲ್ಲಿದೆ. ಚೀನಾದ 'ಸಿನೋವ್ಯಾಕ್ ಬಯೋಟೆಕ್'ನ 30 ಲಕ್ಷ ಡೋಸ್ ವ್ಯಾಕ್ಸಿನ್ನ ಉತ್ತರ ಕೊರಿಯಾ ತಿರಸ್ಕರಿಸಿದೆ ಎನ್ನಲಾಗಿದೆ.
ಕೊರೊನಾ ವಕ್ಕರಿಸಿದ ದಿನದಿಂದ್ಲೂ ಒಂದಲ್ಲ ಒಂದು ವಿಚಾರಕ್ಕೆ ಕಿಮ್ ವಿವಾದ ಎಬ್ಬಿಸುತ್ತಿದ್ದಾನೆ. ಈವರೆಗೆ ಉತ್ತರ ಕೊರಿಯಾ ಒಂದೇ ಒಂದು ಕೊರೊನಾ ಕೇಸ್ ಅನ್ನೂ ಕನ್ಫರ್ಮ್ ಮಾಡಿಲ್ಲ. ನಮ್ಮ ದೇಶಕ್ಕೆ ಕೊರೊನಾ ಕಾಲಿಟ್ಟಿಲ್ಲ ಅಂತಾ ಕಿಮ್ ಜಾಂಗ್ ಉನ್ ಆಡಳಿತ ಹೇಳುತ್ತಿದೆ.
ಇದೀಗ ಲಸಿಕೆ ವಿಚಾರದಲ್ಲೂ ಇದೇ ರೀತಿ ಅಸಡ್ಡೆ ತೋರಿಸಿರುವ ಕಿಮ್ & ಕಂಪನಿ, ಸ್ವತಃ ತನ್ನ ಆಪ್ತ ಗೆಳೆಯ ಚೀನಾ ನೀಡುವ ಲಸಿಕೆಯನ್ನೂ ತಿರಸ್ಕರಿಸಿದೆ. ಬರ, ನೆರೆ, ಆಹಾರ ಅಭಾವದ ಜೊತೆಗೆ ಉತ್ತರ ಕೊರಿಯಾ ಜನ ಡೆಡ್ಲಿ ಕೊರೊನಾ ವಿರುದ್ಧ ಹೋರಾಡಬೇಕಿದೆ. ಆದರೆ ಕಿಮ್ ಆಡಳಿತ ಮಾತ್ರ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ.

ಇನ್ನೂ ಅದೆಷ್ಟುದಿನ ನಾಟಕ..?
'ಉತ್ತರ ಕೊರಿಯಾ ಬಲಿಷ್ಠವಾಗಿ ಬೆಳೆಯಬೇಕು, ಆರ್ಥಿಕವಾಗಿ ಶಕ್ತಿಶಾಲಿ ರಾಷ್ಟ್ರವಾಗಬೇಕು, ನಮ್ಮ ಬದುಕು ಬದಲಾಗಬೇಕು' ಹೀಗೆ ಅಲ್ಲಿನ ಜನ ಸಾವಿರಾರು ಕನಸು ಕಾಣುತ್ತಿದ್ದಾರೆ. ಆದ್ರೆ ಕಿಮ್ ಜಾಂಗ್ ಉನ್ ಹಾಗೂ ಆತನ ಪಟಾಲಂ ಎಲ್ಲವನ್ನೂ ಹಾಳು ಮಾಡಿದೆ. ಯುದ್ಧದ ಉನ್ಮಾದ ಹಾಗೂ ದುರಹಂಕಾರದ ನಡುವೆ ಉತ್ತರ ಕೊರಿಯಾ ಇದೀಗ ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅದೆಲ್ಲಾ ಬಿಡಿ ಈವರೆಗೂ ಉತ್ತರ ಕೊರಿಯಾದಲ್ಲಿ ಕೊರೊನಾ ಸೋಂಕಿನಿಂದ ಹಲವರು ಮೃತಪಟ್ಟಿರುವ ಆರೋಪವಿದೆ. ಆದರೂ ತನ್ನ ದೇಶದಲ್ಲಿ ಒಂದೇ ಒಂದು ಕೊರೊನಾ ಕೇಸ್ ಕೂಡ ಪತ್ತೆ ಆಗಿಲ್ಲ ಅಂತಿದ್ದಾನೆ ಈ ಸರ್ವಾಧಿಕಾರಿ ಕಿಮ್ ಜಾಂಗ್ ಉನ್.

ಗಡಿ ಮುಚ್ಚಿದ್ದೇ ಎಡವಟ್ಟು..!
ಕಿಮ್ ಜಾಂಗ್ ಉನ್ ಉತ್ತರ ಕೊರಿಯಾ ಅಧ್ಯಕ್ಷ ಎನ್ನುವುದಕ್ಕಿಂತ, ಆತ ಒಬ್ಬ ಸರ್ವಾಧಿಕಾರಿ ಎನ್ನುವುದೇ ಸೂಕ್ತ. ಏಕೆಂದರೆ ತನಗೆ ಇರುವ ಅಧಿಕಾರವನ್ನ ಸಮರ್ಪಕವಾಗಿ ಬಳಸಿಕೊಳ್ಳಲು ಆಗದ ಕಿಮ್, ಬಾಯಿಗೆ ಬಂದಂತೆ ಆದೇಶ ನೀಡುತ್ತಾರೆ. ಕೊರೊನಾ ವಿಚಾರದಲ್ಲೂ ಕಿಮ್ ಮಾಡಿದ್ದ ಎಡವಟ್ಟು ಉತ್ತರ ಕೊರಿಯಾಗೆ ಮುಳುವಾಗಿದೆ. ಅಂದಹಾಗೆ ಕೊರೊನಾ ನೆಪದಲ್ಲಿ ಉ. ಕೊರಿಯಾ ಗಡಿಯನ್ನ ಕಿಮ್ ಮುಚ್ಚಿದ್ದ. ಇದರಿಂದ ಆರ್ಥಿಕ ಸ್ಥಿತಿಗತಿ ಮತ್ತಷ್ಟು ಹಳ್ಳ ಹಿಡಿದಿತ್ತು. ಕಡೆಗೆ ತನ್ನ ಪರಮಾಪ್ತ ರಾಷ್ಟ್ರ ಚೀನಾ ಜೊತೆಗಿನ ವ್ಯಾಪಾರವನ್ನೂ ಸ್ಥಗಿತಗೊಳಿಸಿದ್ದಾನೆ ಸರ್ವಾಧಿಕಾರಿ. ಇದು ಸಾಲದು ಎಂಬಂತೆ ಚಂಡಮಾರುತ, ಪ್ರವಾಹ ಬೆಳೆ ನಾಶಪಡಿಸಿದೆ. ಪರಿಸ್ಥಿತಿ ಹೀಗಿರುವಾಗ ಉತ್ತರ ಕೊರಿಯಾದ ಪ್ರಜೆಗಳೇನು ಹೊಟ್ಟೆಗೆ ಕಲ್ಲು ತಿನ್ನಬೇಕಾ..?

‘ಕೊರೊನಾ’ಗಿಂತಲೂ ಕಿಮ್ ಕ್ರೂರಿ..!
ಉತ್ತರ ಕೊರಿಯಾದಲ್ಲಿ ಕೊರೊನಾ ಸೋಂಕನ್ನು ಕಂಟ್ರೋಲ್ಗೆ ತರಲು ಕಿಮ್ ಜಾಂಗ್ ಉನ್ ರಾಕ್ಷಸನ ರೀತಿ ವರ್ತಿಸಿದ್ದ ಎಂಬ ಆರೋಪವಿದೆ. ಅಲ್ಲದೆ ಕೊರೊನಾ ಸೋಂಕಿತರನ್ನು ಬರ್ಬರವಾಗಿ ಕೊಲೆ ಮಾಡಿದ ಉದಾಹರಣೆಗಳೂ ಇವೆ. ಹೀಗೆ ಕಿಮ್ ತನ್ನ ದೇಶದ ಅಧಿಕಾರಿಗಳು ಸೇರಿದಂತೆ ಸಾವಿರಾರು ಅಮಾಯಕರ ಪ್ರಾಣ ತೆಗೆದಿದ್ದಾನೆ. ಈ ನಡುವೆ ದೇಶ ಮುನ್ನೆಡೆಸುವಲ್ಲೂ ಕಿಮ್ ವಿಫಲನಾಗಿದ್ದಾನೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಆರ್ಥಿಕ ಶಿಸ್ತು ಮರೆತು ತಿಕ್ಕಲುತನ ಮೆರೆದಿದ್ದು ಉತ್ತರ ಕೊರಿಯಾಗೆ ಮುಳುವಾಗುತ್ತಿದೆಯಾ? ಗೊತ್ತಿಲ್ಲ. ಆದರೆ ಸರ್ವಾಧಿಕಾರಿಯ ಅತಿಯಾದ ಶಸ್ತ್ರಾಸ್ತ್ರ ವ್ಯಾಮೋಹವೇ ಈ ಪರಿಸ್ಥಿತಿ ಸೃಷ್ಟಿಸಿರಬಹುದು.

ಕಪ್ ಕಾಫಿಗೆ 7000 ರೂಪಾಯಿ!
ಕೊರೊನಾ ಕಾಲಘಟ್ಟದಲ್ಲಿ ಉತ್ತರ ಕೊರಿಯಾ ಆರ್ಥಿಕತೆ ಛಿದ್ರವಾಗಿದೆ. ಇದರ ನೇರ ಪರಿಣಾಮ ಆಹಾರದ ಮೇಲಾಗುತ್ತಿದೆ. ಆಮದು, ಪೂರೈಕೆ, ಉತ್ಪಾದನೆ ಸೇರಿದಂತೆ ಅರ್ಥ ವ್ಯವಸ್ಥೆಯ ಎಲ್ಲಾ ವಿಭಾಗದಲ್ಲೂ ಫ್ಲಾಪ್ ಆಗಿದೆ ಉ.ಕೊರಿಯಾ. ಭೀಕರ ಬರಗಾಲ ಚಂಡಮಾರುತ ಸೇರಿ ನೂರಾರು ಸಮಸ್ಯೆ ಸುಳಿಗೆ ಸಿಲುಕಿ ಸರಿಯಾಗಿ ಆಹಾರ ಉತ್ಪಾದನೆಯೂ ಆಗಿಲ್ಲ. ಹೀಗಾಗಿ ಸದ್ಯ ಉ. ಕೊರಿಯಾದಲ್ಲಿ ಆಹಾರ ಪದಾರ್ಥಗಳ ಬೆಲೆ ನೂರಾರು ಪಟ್ಟು ಹೆಚ್ಚಾಗಿದ್ದು, 1 ಕಪ್ ಕಾಫಿ ಬೆಲೆ 7000 ರೂಪಾಯಿ ಆಗಿದ್ರೆ, 1 ಕೆ.ಜಿ. ಬಾಳೆಹಣ್ಣಿಗೆ 3500 ರೂಪಾಯಿ ಖರ್ಚು ಮಾಡಬೇಕಿದೆ.

ಬಿಲ್ಡಪ್ ಕಿಮ್ ಎಡವಟ್ಟು..!
ಅಬ್ಬಬ್ಬಾ.. ನ್ಯೂಕ್ಲಿಯರ್ ವೆಪನ್ಸ್ ತೋರಿಸೋದು ಏನು, ಮಿಸೈಲ್ ಉಡಾಯಿಸಿ ವಾರ್ನಿಂಗ್ ಕೊಟ್ಟಿದ್ದೇನು. ಬರೀ ಇಂತಹ ಬಿಲ್ಡಪ್ಗಳೇ ಆಯ್ತು. ಆದ್ರೆ ಪ್ರಜೆಗಳಿಗೆ ತುತ್ತು ಅನ್ನವೂ ಸಿಗದೆ, ಹಸಿವಿನಿಂದ ಸಾಯುವ ಸ್ಥಿತಿ ಬಂದಿದೆ. ಅಷ್ಟಕ್ಕೂ ಕಿಮ್ ಜಾಂಗ್ ಉನ್ ಮಾಡಿಕೊಂಡ ಎಡವಟ್ಟು ಒಂದೆರಡಲ್ಲ. ತನ್ನ ದೇಶದ ಆರ್ಥಿಕತೆ ಮೇಲೆ ಗಮನ ಇಡದೆ, ಸದಾ ಯುದ್ಧದ ಉನ್ಮಾದದಲ್ಲೇ ತೇಲಿದ ಕಿಮ್, ಕೋಟ್ಯಂತರ ಜನರ ಜೀವ ಮತ್ತು ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ಉತ್ತರ ಕೊರಿಯಾದಲ್ಲಿ ಕೋಟ್ಯಂತರ ಜನರಿಗೆ ತುತ್ತು ಅನ್ನ ಕೂಡ ಸಿಗುವುದಿಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications