Video: ಸಾಮಾಜಿಕ ಜಾಲತಾಣದಲ್ಲಿ ಜನತಾ ಕರ್ಫ್ಯೂ ನೆನಪು!
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ದೇಶದಲ್ಲೇ ಮೊದಲ ಬಾರಿಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಒಂದು ವರ್ಷದ ಹಿಂದೆ ಇದೇ ಮಾರ್ಚ್ 22ರಂದು ಭಾರತೀಯರೆಲ್ಲ ಸ್ವಯಂಪ್ರೇರಿತರಾಗಿ 14 ಗಂಟೆಗಳ ಕಾಲ ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿದ್ದರು.
ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಂದು ಸಾರ್ವಜನಿಕರು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೂ ಮನೆಯಿಂದ ಹೊರ ಬಾರದಂತೆ ಮನವಿ ಮಾಡಿಕೊಂಡಿದ್ದರು. ಸಂಜೆ 5 ಗಂಟೆಗೆ ಮನೆಯ ಬಾಲ್ಕನಿಗಳಲ್ಲಿ ಬಂದು ಚಪ್ಪಾಳೆ ತಟ್ಟಬೇಕು. ಆ ಮೂಲಕ ಕೊರೊನಾವೈರಸ್ ವಾರಿಯರ್ಸ್ ಸೇವೆಗೆ ಗೌರವ ಸೂಚಿಸಬೇಕು ಎಂದು ಮನವಿ ಮಾಡಿದ್ದರು.
"ಇಂದು ನಾನು ಪ್ರತಿಯೊಬ್ಬ ಸಾರ್ವಜನಿಕರಿಂದ ಹೆಚ್ಚಿನ ಸಹಕಾರವನ್ನು ಬಯಸುತ್ತಿದ್ದೇನೆ. ಜನರು ತಮಗೆ ತಾವೇ ಹಾಕಿಕೊಳ್ಳುವ ಕರ್ಫ್ಯೂ ಅನ್ನು ಜನತಾ ಕರ್ಫ್ಯೂ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು. ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಜನತಾ ಕರ್ಫ್ಯೂಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣ ಹಳೆ ನೆನಪುಗಳನ್ನು ಕೆದಕುತ್ತಿದೆ. ಟ್ವಿಟ್ಟರ್ ಮತ್ತು ಫೇಸ್ ಬುಕ್ ಸಂದೇಶಗಳು ನೆನಪಿಸುತ್ತಿರುವ ಜನತಾ ಕರ್ಫ್ಯೂನ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
|
ಹಾಸ್ಯದ ಮೂಲಕ ಜನತಾ ಕರ್ಫ್ಯೂ ಮೆಲುಕು
ಮಾರ್ಚ್ 22ರಂದು ಕೆಲವು ಜನರು ಗೋ ಕೊರೊನಾ ಗೋ ಎಂದು ಕೂಗಿದ ಪರಿ ಹೀಗಿತ್ತು.
|
ಪೋಗೋ ನೋಡುತ್ತಿರುವ ನಮ್ಮ ತಂಡ ಹೇಗಿದೆ?
ಪುಟ್ಟ ಮಕ್ಕಳು ಪೋಗೋ ನೋಡುತ್ತಿರುವ ಸಂದರ್ಭದಲ್ಲಿ ಬೆಕ್ಕು ಕೂಡಾ ಅವರೊಂದಿಗೆ ಇಣುಕಿ ನೋಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
|
ಚಪ್ಪಾಳೆ ತಟ್ಟಿ ಅಂದ್ರೆ ಪ್ಲೇಟು ಬಾರಿಸುವುದೇ?
ಪುಟ್ಟ ಮಕ್ಕಳಿಂದ ಹಿಡಿದು ವೃದ್ಧೆಯವರೆಗೂ ದೊಡ್ಡ ದೊಡ್ಡ ಪ್ಲೇಟುಗಳನ್ನು ಬಾರಿಸುತ್ತಾ ನಿಂತಿರುವುದು ಇಲ್ಲಿ ಕಂಡು ಬಂದಿದೆ.
|
ಪೀಸ್ ಪೀಸ್: ಇದು ತಾಟು ಪ್ಲೇಟುಗಳ ಕಥೆ
ಚಪ್ಪಾಳೆ ತಟ್ಟಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದರೆ, ಇಲ್ಲಿ ಮಕ್ಕಳು ಊಟದ ಪ್ಲೇಟುಗಳನ್ನು ನೆಲಕ್ಕೆ ಬಡಿಯುತ್ತಿರುವ ದೃಶ್ಯ ಹೀಗಿತ್ತು.
|
ಕೊರೊನಾವೈರಸ್ ಬಗ್ಗೆ ಸುಮಧುರ ಸಂಗೀತ
ಹಿಂದಿ ಹಾಡಿಗೆ ಕೊರೊನಾ ಸಾಹಿತ್ಯವನ್ನು ಮಿಶ್ರಣ ಮಾಡಿ ಸಂಯೋಜಿಸಿದ ಹಾಡು ಮತ್ತು ದೃಶ್ಯದ ಪರಿ ಹೀಗಿದೆ.

ದೇಶದಲ್ಲಿ ವಿವಿಧ ಹಂತಗಳಲ್ಲಿ ಲಾಕ್ ಡೌನ್ ಜಾರಿ
ಜನತಾ ಕರ್ಫ್ಯೂ ಯಶಸ್ವಿಯಾದ ಎರಡು ದಿನಗಳ ನಂತರ ದೇಶಾದ್ಯಂತ ಮೊದಲ ಹಂತದ ಲಾಕ್ ಡೌನ್ ಘೋಷಿಸಲಾಯಿತು. ಮಾರ್ಚ್ 24 ರಿಂದ 21 ದಿನಗಳವರೆಗೂ ಲಾಕ್ ಡೌನ್ ಘೋಷಿಸಲಾಗಿದ್ದು, ನಂತರದಲ್ಲಿ ಅದನ್ನು ಮೂರು ಬಾರಿ ವಿಸ್ತರಿಸಲಾಯಿತು. ಕೊನೆಯದಾಗಿ ಮೇ 18ರಂದು ಆರಂಭವಾದ ಭಾರತ ಲಾಕ್ ಡೌನ್ ಮೇ 31ಕ್ಕೆ ಅಂತ್ಯವಾಯಿತು. ಜೂನ್ 1ರಿಂದ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications