Video: ಸಾಮಾಜಿಕ ಜಾಲತಾಣದಲ್ಲಿ ಜನತಾ ಕರ್ಫ್ಯೂ ನೆನಪು!
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ದೇಶದಲ್ಲೇ ಮೊದಲ ಬಾರಿಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಒಂದು ವರ್ಷದ ಹಿಂದೆ ಇದೇ ಮಾರ್ಚ್ 22ರಂದು ಭಾರತೀಯರೆಲ್ಲ ಸ್ವಯಂಪ್ರೇರಿತರಾಗಿ 14 ಗಂಟೆಗಳ ಕಾಲ ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿದ್ದರು.
ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಂದು ಸಾರ್ವಜನಿಕರು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೂ ಮನೆಯಿಂದ ಹೊರ ಬಾರದಂತೆ ಮನವಿ ಮಾಡಿಕೊಂಡಿದ್ದರು. ಸಂಜೆ 5 ಗಂಟೆಗೆ ಮನೆಯ ಬಾಲ್ಕನಿಗಳಲ್ಲಿ ಬಂದು ಚಪ್ಪಾಳೆ ತಟ್ಟಬೇಕು. ಆ ಮೂಲಕ ಕೊರೊನಾವೈರಸ್ ವಾರಿಯರ್ಸ್ ಸೇವೆಗೆ ಗೌರವ ಸೂಚಿಸಬೇಕು ಎಂದು ಮನವಿ ಮಾಡಿದ್ದರು.
"ಇಂದು ನಾನು ಪ್ರತಿಯೊಬ್ಬ ಸಾರ್ವಜನಿಕರಿಂದ ಹೆಚ್ಚಿನ ಸಹಕಾರವನ್ನು ಬಯಸುತ್ತಿದ್ದೇನೆ. ಜನರು ತಮಗೆ ತಾವೇ ಹಾಕಿಕೊಳ್ಳುವ ಕರ್ಫ್ಯೂ ಅನ್ನು ಜನತಾ ಕರ್ಫ್ಯೂ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು. ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಜನತಾ ಕರ್ಫ್ಯೂಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣ ಹಳೆ ನೆನಪುಗಳನ್ನು ಕೆದಕುತ್ತಿದೆ. ಟ್ವಿಟ್ಟರ್ ಮತ್ತು ಫೇಸ್ ಬುಕ್ ಸಂದೇಶಗಳು ನೆನಪಿಸುತ್ತಿರುವ ಜನತಾ ಕರ್ಫ್ಯೂನ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
|
ಹಾಸ್ಯದ ಮೂಲಕ ಜನತಾ ಕರ್ಫ್ಯೂ ಮೆಲುಕು
ಮಾರ್ಚ್ 22ರಂದು ಕೆಲವು ಜನರು ಗೋ ಕೊರೊನಾ ಗೋ ಎಂದು ಕೂಗಿದ ಪರಿ ಹೀಗಿತ್ತು.
|
ಪೋಗೋ ನೋಡುತ್ತಿರುವ ನಮ್ಮ ತಂಡ ಹೇಗಿದೆ?
ಪುಟ್ಟ ಮಕ್ಕಳು ಪೋಗೋ ನೋಡುತ್ತಿರುವ ಸಂದರ್ಭದಲ್ಲಿ ಬೆಕ್ಕು ಕೂಡಾ ಅವರೊಂದಿಗೆ ಇಣುಕಿ ನೋಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
|
ಚಪ್ಪಾಳೆ ತಟ್ಟಿ ಅಂದ್ರೆ ಪ್ಲೇಟು ಬಾರಿಸುವುದೇ?
ಪುಟ್ಟ ಮಕ್ಕಳಿಂದ ಹಿಡಿದು ವೃದ್ಧೆಯವರೆಗೂ ದೊಡ್ಡ ದೊಡ್ಡ ಪ್ಲೇಟುಗಳನ್ನು ಬಾರಿಸುತ್ತಾ ನಿಂತಿರುವುದು ಇಲ್ಲಿ ಕಂಡು ಬಂದಿದೆ.
|
ಪೀಸ್ ಪೀಸ್: ಇದು ತಾಟು ಪ್ಲೇಟುಗಳ ಕಥೆ
ಚಪ್ಪಾಳೆ ತಟ್ಟಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದರೆ, ಇಲ್ಲಿ ಮಕ್ಕಳು ಊಟದ ಪ್ಲೇಟುಗಳನ್ನು ನೆಲಕ್ಕೆ ಬಡಿಯುತ್ತಿರುವ ದೃಶ್ಯ ಹೀಗಿತ್ತು.
|
ಕೊರೊನಾವೈರಸ್ ಬಗ್ಗೆ ಸುಮಧುರ ಸಂಗೀತ
ಹಿಂದಿ ಹಾಡಿಗೆ ಕೊರೊನಾ ಸಾಹಿತ್ಯವನ್ನು ಮಿಶ್ರಣ ಮಾಡಿ ಸಂಯೋಜಿಸಿದ ಹಾಡು ಮತ್ತು ದೃಶ್ಯದ ಪರಿ ಹೀಗಿದೆ.

ದೇಶದಲ್ಲಿ ವಿವಿಧ ಹಂತಗಳಲ್ಲಿ ಲಾಕ್ ಡೌನ್ ಜಾರಿ
ಜನತಾ ಕರ್ಫ್ಯೂ ಯಶಸ್ವಿಯಾದ ಎರಡು ದಿನಗಳ ನಂತರ ದೇಶಾದ್ಯಂತ ಮೊದಲ ಹಂತದ ಲಾಕ್ ಡೌನ್ ಘೋಷಿಸಲಾಯಿತು. ಮಾರ್ಚ್ 24 ರಿಂದ 21 ದಿನಗಳವರೆಗೂ ಲಾಕ್ ಡೌನ್ ಘೋಷಿಸಲಾಗಿದ್ದು, ನಂತರದಲ್ಲಿ ಅದನ್ನು ಮೂರು ಬಾರಿ ವಿಸ್ತರಿಸಲಾಯಿತು. ಕೊನೆಯದಾಗಿ ಮೇ 18ರಂದು ಆರಂಭವಾದ ಭಾರತ ಲಾಕ್ ಡೌನ್ ಮೇ 31ಕ್ಕೆ ಅಂತ್ಯವಾಯಿತು. ಜೂನ್ 1ರಿಂದ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಯಿತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications