ದಾವಣಗೆರೆ; ಮಟ್ಕಾ ಜಾಲದ ಕಿಂಗ್ ಪಿನ್ ಗಳ ಮಟ್ಟ ಹಾಕಲು ಸಾಧ್ಯವೇ?
ಮನೆಹಾಳು ಆಟ ಎಂದೇ ಕುಖ್ಯಾತಿಯಾಗಿರುವ ಮಟ್ಕಾ ಅಥವಾ ಓಸಿ ಅರ್ಥಾತ್ ಓಪನ್ ಅಂಡ್ ಕ್ಲೋಸ್ ನಂಬರ್ ಗೇಮ್ ಹಿಂದೆ ಬಿದ್ದು ಎದ್ದವರು ಕಡಿಮೆ. ನಗರ, ಪಟ್ಟಣ, ಹಳ್ಳಿ, ಗಲ್ಲಿ ಗಲ್ಲಿಗಳಲ್ಲಿ ಮಟ್ಕಾ ಅಡ್ಡಾಗಳಿವೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಶುರು ಮಾಡಿದರೆ ಕರ್ನಾಟಕದ ನೆತ್ತಿನ ಬೀದರ್ ತನಕವೂ ಓಸಿ ದಂಧೆ ಅವ್ಯಾಹತವಾಗಿ ಹರಡಿದೆ.
ಇಂದಿನ ಪಬ್ಜಿಯಂತೆ ವಿಡಿಯೋ ಗೇಮ್ಸ್ ಚಟದಂತೆ ಮಟ್ಕಾ ಚಟಕ್ಕೆ ದೀಪಕ್ಕೆ ಮುತ್ತಿಕೊಳ್ಳುವ ಮಳೆ ಹುಳದಂತೆ ಮನೆ ಮಂದಿಯೆಲ್ಲಾ ದಾಸರಾಗಿರುವ ನಿದರ್ಶನಗಳಿವೆ. ಬಡವ ಬಲ್ಲಿದ ಎಂಬ ಯಾವುದೇ ಅಂತರವಿಲ್ಲದೆ ಆಕರ್ಷಿಸುವ ಈ ಆಟದ ಪರಿಸ್ಥಿತಿ, ಚಟದಿಂದ ಬಲಿಯಾದವರು, ಕರ್ನಾಟಕದಲ್ಲಿ ದಂಧೆ ಯಾವ ಪರಿಸ್ಥಿತಿಯಲ್ಲಿದೆ ಎಂಬುದರ ಬಗ್ಗೆ ಒನ್ಇಂಡಿಯಾ ಫೋಕಸ್ ತಂಡ ಬೆಳಕು ಚೆಲ್ಲಲಿದ್ದು, ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ಬಂದ ವರದಿಗಳ ಸರಣಿ ಲೇಖನ ಇಲ್ಲಿದೆ...
ದಾವಣಗೆರೆ: ದಾವಣಗೆರೆ ಎಂದರೆ ಬೆಣ್ಣೆ ನಗರ ಎಂದೇ ಕರೆಯುತ್ತಾರೆ. ಆದರೆ ಇದೇ ಬೆಣ್ಣೆ ನಗರಿಗೆ ಒಂದು ಕರಾಳ ಮುಖವೂ ಇದೆ. ಮಟ್ಕಾ ಎನ್ನುವ ದಂಧೆ ಬಹು ವರ್ಷಗಳಿಂದ ಇಲ್ಲಿ ನಡೆದುಕೊಂಡು ಬರುತ್ತಿರುವುದು ಊರಿಗೆ ಒಂದು ಕಳಂಕವೂ ಆಗಿದೆ.

ದಾವಣಗೆರೆಯ ನಿಟ್ಟುವಳ್ಳಿ ಭರತ್ ಕಾಲೋನಿ, ಲೆನಿನ್ ನಗರ, ಕೆಟಿಜೆ ನಗರ, ಶೇಖರಪ್ಪನ ನಗರ, ಬೇತೂರು ರಸ್ತೆ. ಅಜಾದ್ ನಗರ, ಬಾಷಾ ನಗರ್, ಅಹಮದ್ ನಗರ, ರಾಮನಗರ, ಜಾಲಿನಗರ ಹೊಂಡಾ ಸರ್ಕಲ್ ಸೇರಿದಂತೆ ಹಲವು ತಾಣಗಳು ಮಟ್ಕಾ ದಂಧೆಯ ಅಡ್ಡಾಗಳಾಗಿವೆ. ಮಟ್ಕಾ ದಂಧೆಗೆ ಕೂಲಿ ಕಾರ್ಮಿಕರು, ಅಮಾಲಿಗಳೇ ಬಲುಪಶುಗಳು. ಈಗೀಗ ಯುವಕರೂ ಇದರಲ್ಲಿ ತೊಡಗಿಕೊಂಡಿರುವುದು ಆತಂಕ ಉಂಟು ಮಾಡಿದೆ. ಪ್ರತಿನಿತ್ಯ ದುಡಿಯುವ ಹಣವನ್ನು ಈ ದಂಧೆಯಲ್ಲಿ ಕಳೆದುಕೊಂಡು ಎಷ್ಟೋ ಸಂಸಾರಗಳು ಬೀದಿಗೆ ಬಂದಿವೆ. ದಾವಣಗೆರೆಯಲ್ಲಿ ಎರಡು ಲೈನ್ ಗಳಲ್ಲಿ ಮಟ್ಕಾ ಪ್ರಮುಖವಾಗಿ ನಡೆಯುತ್ತದೆ. ಮಧ್ಯಾಹ್ನ ಗೋವಾದ ಕಲ್ಯಾಣಿ, ರಾತ್ರಿ ಬಾಂಬೆ ಲೈನ್ ನಲ್ಲಿ ಜೂಜುಕೋರರು ಹಣ ಕಟ್ಟುತ್ತಾರೆ. ಕೊಳೆಗೇರಿಗಳಲ್ಲಿ ಮಟ್ಕಾ ದಂಧೆ ಹೆಚ್ಚಿನ ಮಟ್ಟದಲ್ಲಿ ನಡೆಯುತ್ತಿದೆ.
ಇತ್ತೀಚಿನ ಕೆಲ ವರ್ಷಗಳಿಂದ ಪೊಲೀಸರು ಈ ದಂಧೆ ನಿಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ದಂಧೆಕೋರರನ್ನು ಮಟ್ಟ ಹಾಕಲು ಪೊಲೀಸರು ಹೊಂಚು ಹಾಕುತ್ತಿದ್ದರೂ, ದಂಧೆಕೋರರು ಚಾಣಾಕ್ಷ್ಯತನ ತೋರುತ್ತಿದ್ದಾರೆ. 2009-10ರಲ್ಲಿ ದಾವಣಗೆರೆ ಎಸ್ ಪಿಯಾಗಿದ್ದ ಎಸ್ ಪಿ ಸಂದೀಪ್ ಪಾಟೀಲ್ ಸಾಕಷ್ಟು ದಂಧೆಕೋರರನ್ನು ಗಡಿಪಾರು ಮಾಡಿರುವ ನಿದರ್ಶನಗಳು ಸಹ ಇವೆ.
ಖಡಕ್ ಪೊಲೀಸ್ ಅಧಿಕಾರಿ ಎಂದೇ ಪ್ರಸಿದ್ಧಿಯಾಗಿದ್ದ ಆರ್ ಚೇತನ್ ಅವರೂ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಪ್ರಯತ್ನ ನಡೆಸಿದ್ದರು. ಅವರ ನಂತರ ಬಂದ ಎಸ್ ಪಿ ಹನುಮಂತರಾಯ ಅವರು ಮಟ್ಕಾ ದಂಧೆಯನ್ನು ಸಂಪೂರ್ಣ ಮಟ್ಟ ಹಾಕುವ ಆಶಯ ಹೊಂದಿದ್ದಾರೆ. ಒಂದು ವರ್ಷದಲ್ಲಿ ಒಂದು ಸಾವಿರಕ್ಕಿಂತ ಹೆಚ್ಚು ಮಟ್ಕಾ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಬೀಸುವ ಬಲೆಗೆ ಕೇವಲ ಸಣ್ಣ ಪುಟ್ಟ ದಂಧೆಕೋರರಷ್ಟೇ ಸಿಗುತ್ತಿದ್ದಾರೆ. ಕಿಂಗ್ ಪಿನ್ ಗಳನ್ನು ಮಟ್ಟ ಹಾಕುವ ಹಾಗೂ ಸಂಪೂರ್ಣವಾಗಿ ಈ ದಂಧೆ ನಿಲ್ಲಿಸುವ ಪ್ರಯತ್ನಗಳು ಇನ್ನೂ ನಡೆಯುತ್ತಲೇ ಇವೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications