"ಚೋಟಾ ಮುಂಬೈ" ಹುಬ್ಬಳ್ಳಿಯಲ್ಲಿ ಎಗ್ಗಿಲ್ಲದೆ ನಡೆದಿದೆ ಮಟ್ಕಾ ದಂಧೆ
ಮನೆಹಾಳು ಆಟ ಎಂದೇ ಕುಖ್ಯಾತಿಯಾಗಿರುವ ಮಟ್ಕಾ ಅಥವಾ ಓಸಿ ಅರ್ಥಾತ್ ಓಪನ್ ಅಂಡ್ ಕ್ಲೋಸ್ ನಂಬರ್ ಗೇಮ್ ಹಿಂದೆ ಬಿದ್ದು ಎದ್ದವರು ಕಡಿಮೆ. ನಗರ, ಪಟ್ಟಣ, ಹಳ್ಳಿ, ಗಲ್ಲಿ ಗಲ್ಲಿಗಳಲ್ಲಿ ಮಟ್ಕಾ ಅಡ್ಡಾಗಳಿವೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಶುರು ಮಾಡಿದರೆ ಕರ್ನಾಟಕದ ನೆತ್ತಿನ ಬೀದರ್ ತನಕವೂ ಓಸಿ ದಂಧೆ ಅವ್ಯಾಹತವಾಗಿ ಹರಡಿದೆ.
ಇಂದಿನ ಪಬ್ಜಿಯಂತೆ ವಿಡಿಯೋ ಗೇಮ್ಸ್ ಚಟದಂತೆ ಮಟ್ಕಾ ಚಟಕ್ಕೆ ದೀಪಕ್ಕೆ ಮುತ್ತಿಕೊಳ್ಳುವ ಮಳೆ ಹುಳದಂತೆ ಮನೆ ಮಂದಿಯೆಲ್ಲಾ ದಾಸರಾಗಿರುವ ನಿದರ್ಶನಗಳಿವೆ. ಬಡವ ಬಲ್ಲಿದ ಎಂಬ ಯಾವುದೇ ಅಂತರವಿಲ್ಲದೆ ಆಕರ್ಷಿಸುವ ಈ ಆಟದ ಪರಿಸ್ಥಿತಿ, ಚಟದಿಂದ ಬಲಿಯಾದವರು, ಕರ್ನಾಟಕದಲ್ಲಿ ದಂಧೆ ಯಾವ ಪರಿಸ್ಥಿತಿಯಲ್ಲಿದೆ ಎಂಬುದರ ಬಗ್ಗೆ ಒನ್ಇಂಡಿಯಾ ಫೋಕಸ್ ತಂಡ ಬೆಳಕು ಚೆಲ್ಲಲಿದ್ದು, ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ಬಂದ ವರದಿಗಳ ಸರಣಿ ಲೇಖನ ಇಲ್ಲಿದೆ...
ಹುಬ್ಬಳ್ಳಿ: ಚೋಟಾ ಮುಂಬೈ ಎಂದು ಕರೆಸಿಕೊಳ್ಳುವ ಹುಬ್ಬಳ್ಳಿ, ಮುಂಬೈನಂತೆಯೇ ಅಕ್ರಮ ದಂಧೆಗೂ ಫೇಮಸ್. ಅಕ್ರಮ ಚಟುವಟಿಕೆಯಿಂದ ಪ್ರತಿನಿತ್ಯ ಸುದ್ದಿಯಲ್ಲಿರುವ ಈ ನಗರ ಈಗ ಹೆಚ್ಚಿಗೆ ಸದ್ದು ಮಾಡುತ್ತಿರುವುದು ಮಟ್ಕಾ ದಂಧೆಯಿಂದ. ನಗರದ ಜನತಾ ಬಜಾರ್, ಹಳೇ ಹುಬ್ಬಳ್ಳಿಯ ಆನಂದ ನಗರ, ಉಣಕಲ್, ಸೇರಿದಂತೆ ನಗರದ ಬಹುತೇಕ ಕಡೆ ಮಟ್ಕಾ ದಂಧೆ ರಾಜಾರೋಷವಾಗಿ ನಡೆಯುತ್ತಿದೆ.

ಜನತಾ ಬಜಾರ್ ದಂಧೆಯ ಅಡ್ಡಾ: ನಗರದ ಪ್ರಮುಖ ಮಾರುಕಟ್ಟೆಯಾದ ಜನತಾ ಬಜಾರ್ ನಲ್ಲಿ ಮಟ್ಕಾ ದಂಧೆ ತಡೆಯುವವರೇ ಇಲ್ಲ. ಮಟ್ಕಾ ಕುಳಗಳಿಗೆ ಅಲ್ಲಿನ ವ್ಯಾಪಾರಿಗಳೇ ಟಾರ್ಗೆಟ್. ಮುಂಜಾನೆಯಿಂದ ಸಂಜೆಯವರೆಗೆ ಕಷ್ಟಪಟ್ಟು ದುಡಿದು ಜೀವನ ನಡೆಸುತ್ತಿರುವ ಬಡ ಜನರನ್ನು ಟಾರ್ಗೆಟ್ ಮಾಡಿಕೊಂಡು ಒಂದು ರೂಪಾಯಿಗೆ ಎಂಬತ್ತು ರೂಪಾಯಿ ನೀಡುತ್ತೇವೆ ಎಂದು ನೂರಾರು ಜನರ ಜೀವನ ಹಾಳು ಮಾಡುವ ಕೆಲಸಕ್ಕೆ ಇನ್ನೂ ಬ್ರೇಕ್ ಬಿದ್ದಿಲ್ಲ. ದುಡ್ಡು ಮಾಡುವ ಆಸೆಗೆ ಬಿದ್ದ ವ್ಯಾಪಾರಿಗಳು ಇದರಿಂದ ಸಾಲ ಮಾಡಿಕೊಂಡು, ವ್ಯಾಪಾರದಲ್ಲೂ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆಗಳು ಹೆಜ್ಜೆಗೊಂದರಂತೆ ಸಿಗುತ್ತವೆ.
ಹುಬ್ಬಳ್ಳಿ, ಧಾರವಾಡ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಮಟ್ಕಾ ದಂಧೆ ಕಡಿಮೆಯಿಲ್ಲ. ತಿಳಿದೂ ತಿಳಿಯದವರಂತೆ ಇರುವ ಕೆಲವು ಪೊಲೀಸರಿಂದ ಈ ಜಾಲ ಇನ್ನಷ್ಟು ಬೆಳೆಯುತ್ತಿರುವುದೂ ಸುಳ್ಳಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಮಟ್ಕಾ ದಂಧೆ ಮೇಲೆ ಪೊಲೀಸರು ಆಗೊಮ್ಮೆ ಈಗೊಮ್ಮೆ ದಾಳಿ ಮಾಡುತ್ತಾರೆ. ಈ ಅಕ್ಟೋಬರ್ ತಿಂಗಳಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ, ಮೆಹಬೂಬ್ ಬಳ್ಳಾರಿ ಹಾಗೂ ಶೌಕತ್ ತಂಬೂರಿ ಎನ್ನುವ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 7 ಸಾವಿರ ನಗದನ್ನು ವಶ ಪಡೆಸಿಕೊಂಡಿದ್ದರು. ಆದರೆ ಅವರು ಜೈಲಿನಿಂದ ಹೊರ ಬಂದು ಮತ್ತೆ ಈ ದಂಧೆಯಲ್ಲೇ ಮುಂದುವರೆದಿದ್ದಾರೆ.
ಪೊಲೀಸ್ ಕಮಿಷನರ್ ಕಟ್ಟುನಿಟ್ಟಿನ ಆದೇಶ
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆರ್ ದಿಲೀಪ್ ಅವರು ಮಟ್ಕಾ ದಂಧೆ ವಿರುದ್ಧ ಸಮರ ಸಾರಿದ್ದಾರೆ. ಅವಳಿ ನಗರದಲ್ಲಿ ಮಟ್ಕಾ ದಂಧೆಯನ್ನು ಆಡಿಸುವವರು ಹಾಗೂ ಆಡುವವರು ಕಂಡುಬಂದರೆ 9480802000 ಕಾಲ್ ಮಾಡಿ ಅಥವಾ ಮೆಸೇಜ್ ಮಾಡಲು ತಿಳಿಸಿದ್ದಾರೆ. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದೂ ತಿಳಿಸಿದ್ದಾರೆ.
ಗೃಹ ಸಚಿವರಿಂದಲೂ ಆದೇಶ
ಈಚೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹುಬ್ಬಳ್ಳಿಯ ನವನಗರದ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿದ್ದರು. ಆ ಸಭೆಯಲ್ಲಿ ಅಧಿಕಾರಿಗಳಿಗೆ ಅಕ್ರಮ ಮಟ್ಕಾ ದಂಧೆಗೆ ಬ್ರೇಕ್ ಹಾಕುವಂತೆ ಆದೇಶ ಮಾಡಿದ್ದರು. ಆದರೆ ಇಷ್ಟೆಲ್ಲಾ ಆದರೂ ಮಟ್ಕಾ ದಂಧೆಗೆ ಫುಲ್ ಸ್ಟಾಪ್ ಇಡಲು ಇನ್ನೂ ಸಾಧ್ಯವಾಗಿಲ್ಲ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications