ಜನವರಿ 3ನೇ ವಾರ ಅತಿ ಹೆಚ್ಚು ಓದಲ್ಪಟ್ಟ ಸುದ್ದಿಚಿತ್ರ
ಒನ್ಇಂಡಿಯಾ ಕನ್ನಡ ವೆಬ್ ತಾಣದಲ್ಲಿ ಜನವರಿ 13 ರಿಂದ ಜನವರಿ 20ರ ತನಕದ ಅತಿ ಹೆಚ್ಚು ಓದಲ್ಪಟ್ಟ, ಚರ್ಚಿಸಲ್ಪಟ್ಟ ಸುದ್ದಿಗಳ ಸಂಗ್ರಹ ಇಲ್ಲಿದೆ.
2000 ಇಸವಿಯಿಂದ ಕನ್ನಡ ಭಾಷೆ, ಸಂಸ್ಕೃತಿ, ಅನಿವಾಸಿ, ಹೊರನಾಡು, ಒಳನಾಡು ಕನ್ನಡಿಗರ ಜೊತೆ ನಿರಂತರ ಸಂವಹನ ಹೊಂದಿರುವ ವೆಬ್ ತಾಣ ಒನ್ಇಂಡಿಯಾ ಕನ್ನಡ (ಈ ಹಿಂದಿನ ದಟ್ಸ್ ಕನ್ನಡ).
ಆಡಿಯೋ ವಿಡಿಯೋ ಸಾಧ್ಯತೆಗಳನ್ನು ತನ್ನದಾಗಿಸಿಕೊಂಡ ಮೇಲೆ ಸಿನಿಮಾ ಸುದ್ದಿ, ಸಮಾಚಾರ, ಸಂದರ್ಶನಗಳಿಗಾಗಿ ಪ್ರತ್ಯೇಕ ಯೂಟ್ಯೂಬ್ ಚಾನೆಲ್ ಕೂಡಾ ಹೊಂದಿದೆ. ಮೊಬೈಲ್ ಫೋನಿನಲ್ಲಿ ಒನ್ ಇಂಡಿಯಾ ಕನ್ನಡ ವೆಬ್ ತಾಣದಲ್ಲಿ ವಿಹರಿಸುವುದು ಹೇಗೆ ಎಂಬುದರ ಪ್ರಾತ್ಯಕ್ಷಿಕೆ ವಿಡಿಯೋ ನೋಡಬಹುದು.
ಜನವರಿ 3ನೇ ವಾರದಲ್ಲಿ ಗ್ರಾಚ್ಯುಟಿ ಮಸೂದೆ ಬಗ್ಗೆ ವಿವರಣೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೀಡಿದ ಆಫರ್, ಕರ್ನಾಟಕ ವಿಧಾನಸಭೆ ಚುನಾವಣೆ, ಸಿಎಚ್ಎಸ್ ಸಂಸ್ಥೆ ನಡೆಸಿರುವ ಸಮೀಕ್ಷೆ ಬಗ್ಗೆ ಪ್ರತಿಕ್ರಿಯೆ, ಸಂಸದ ಪ್ರತಾಪ್ ಸಿಂಹ, ಸಂಸದ ಅನಂತಕುಮಾರ್ ಹೆಗಡೆ ಅವರದ್ದೇ ಸುದ್ದಿ ಸದ್ದು ಮಾಡಿತು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಮುಂದೆ ಓದಿ...

ಗ್ರಾಚ್ಯುಟಿ ಲೆಕ್ಕಾಚಾರ ಹೇಗೆ?
ಮುಂದಿನ ಕೇಂದ್ರ ಬಜೆಟ್ ಅಧಿವೇಶನದಲ್ಲಿ ಗ್ರಾಚ್ಯುಟಿ ತಿದ್ದುಪಡಿ ಮಸೂದೆ 2017ಕ್ಕೆ ಅಂಗೀಕಾರ ಸಿಗುವ ಸಾಧ್ಯತೆ ಇದೆ. ಇದರಿಂದಾಗಿ ಉದ್ಯೋಗಿಗಳಿಗೆ 20 ಲಕ್ಷ ರೂ.ವರೆಗೂ ತೆರಿಗೆ ಮುಕ್ತ ಗ್ರಾಚ್ಯುಟಿ ಪಡೆಯಲು ಅರ್ಹರಾಗಲಿದ್ದಾರೆ. ಸದ್ಯ ಐದು ಅಥವಾ ಅದಕ್ಕಿಂತ ಹೆಚ್ಚು ಸೇವಾ ಅವಧಿ ಹೊಂದಿರುವ ಉದ್ಯೋಗಿಗಳು ಉದ್ಯೋಗ ತೊರೆದಾಗ, ನಿವೃತ್ತಿ ಹೊಂದಿದಾಗ 10 ಲಕ್ಷ ರೂ. ವರೆಗೂ ತೆರಿಗೆ ಮುಕ್ತವಾಗಿ ಗ್ರಾಚ್ಯುಟಿ ಗಳಿಸಬಹುದಾಗಿದೆ. ಇಷ್ಟಕ್ಕೂ ಗ್ರಾಚ್ಯುಟಿ ಎಂದರೇನು? ಇದರ ಲೆಕ್ಕ ಹಾಕುವುದು ಹೇಗೆ? ಮುಂದೆ ಓದಿ...

ಚಂದ್ರಬಾಬು ನಾಯ್ಡು ನೀಡಿದ ಆಫರ್

ಎಸ್ ಬಿಐ ಉದ್ಯೋಗ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ) ಶುಕ್ರವಾರ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕ್ಲರ್ಕ್ ದರ್ಜೆಯ ಒಟ್ಟು 9,000 ಜೂನಿಯರ್ ಅಸೋಸಿಯೇಟ್ ಹುದ್ದೆ (ಗ್ರಾಹಕ ಸೇವೆ ಮತ್ತು ಸೇಲ್ಸ್) ಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಇಂದಿನಿಂದಲೇ (ಜನವರಿ 20) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರಲಿದೆ.

ಅಶ್ವಿನಿಯಿಂದ ಆರಂಭವಾಗಿ ಗುಣ ಹಾಗೂ ಸ್ವಭಾವ

ನಮ್ಮ ಟೀಮ್ ನಿಂದಲೂ ಒಂದು ಸಮೀಕ್ಷೆ
"ನಮ್ಮ ಟೀಮ್ ನಿಂದಲೂ ಒಂದು ಸಮೀಕ್ಷೆ ಮಾಡಿಸಿದ್ದೀವಿ. ಅದನ್ನೂ ಬಿಡುಗಡೆ ಮಾಡ್ತೀವಿ. ಆಗ ನೀವೇ ನೋಡಿ. ಅದು ಬರೀ ಸಂಖ್ಯೆಗಳಲ್ಲ, ಕ್ರಮಬದ್ಧವಾಗಿ ಸಮೀಕ್ಷೆ ಮಾಡಿಸಿದ್ದೀವಿ" ಎಂದರು ನಟ ಹಾಗೂ ಕೆಪಿಜೆಪಿ ಪಕ್ಷದ ಮುಖ್ಯಸ್ಥ ಉಪೇಂದ್ರ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ನಾಲ್ಕು ತಿಂಗಳಷ್ಟೇ ಸಮಯ ಇದೆ.
ಈ ಹಿನ್ನೆಲೆಯಲ್ಲಿ ಒನ್ಇಂಡಿಯಾ ಕನ್ನಡದಿಂದ ಉಪೇಂದ್ರ ಸಂದರ್ಶನ ಮಾಡಲಾಗಿದೆ. ಈ ವರೆಗಿನ ಚುನಾವಣೆ ಸಮೀಕ್ಷೆಗಳ ಪ್ರಕಾರ ಕೆಪಿಜೆಪಿಯು ಯಾವುದೇ ಸ್ಥಾನ ಗಳಿಸುವುದಿಲ್ಲ ಅಂತಲೇ ಬರುತ್ತಿದೆ. ಈ ಬಗ್ಗೆ ನೀವೇನಂತೀರಾ ಎಂಬ ಪ್ರಶ್ನೆಗೆ ಈ ಮೇಲಿನಂತೆ ಉಪೇಂದ್ರ ಉತ್ತರಿಸಿದರು.

ಪ್ರತಾಪ್ ಸ್ಪಷ್ಟನೆ ನೀಡಿದ್ದಾರೆ
ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಭಾರತೀಯ ಜನತಾ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಿದ್ದಾರೆ. ಪ್ರತಾಪ್ ಅವರನ್ನು ಸೆಳೆಯುವಲ್ಲಿ ಜೆಡಿಎಸ್ ಯುವ ನೇತಾರ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಯಶಸ್ವಿಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೆಲ್ಲವೂ ಶುದ್ಧ ಸುಳ್ಳು ಎಂದು ಫೇಸ್ ಬುಕ್ ಪೋಸ್ಟ್ ಮೂಲಕ ಸಂಸದ ಪ್ರತಾಪ್ ಸ್ಪಷ್ಟನೆ ನೀಡಿದ್ದಾರೆ.

ಪಕ್ಷದ ಐಕಾನ್ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರಲೇ ಬೇಕೆಂಬ ಹಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿದ್ದಿದ್ದಾರೆ. ಇದಕ್ಕಾಗಿಯೇ ರಾಜ್ಯಾದ್ಯಂತ ಸಾವಿರಾರು ಕಿ.ಮೀ. ಪ್ರವಾಸ ಮಾಡುತ್ತಾ, ಹುರುಪಿನಿಂದಲೇ ಓಡಾಡುತ್ತಿದ್ದಾರೆ. ಸಾಧನಾ ಸಮಾವೇಶದ ಮೂಲಕ ತಮ್ಮ ಸರ್ಕಾರದ ಸಾಧನೆಗಳ ಜತೆಯಲ್ಲಿ ತಮ್ಮ ವರ್ಚಸ್ಸನ್ನೂ ಇಮ್ಮಡಿಗೊಳಿಸಿಕೊಳ್ಳುತ್ತ ಪಕ್ಷದ ಐಕಾನ್ ಆಗುತ್ತಿದ್ದಾರೆ. ಹೇಗೆ ಎಂಬುದನ್ನು ಮುಂದೆ ಓದಿ...

ಕೆ.ಸಿ.ವೀರೇಂದ್ರ ಸ್ಪರ್ಧೆ
ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ನಟ ದೊಡ್ಡಣ್ಣ ಅಳಿಯ ಮತ್ತು ಉದ್ಯಮಿ ಕೆ.ಸಿ.ವೀರೇಂದ್ರ ಅವರು ಚಿತ್ರದುರ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ
"ಪೊಲೀಸರ ಬ್ಯಾರಿಕೇಡ್ ಮುರಿದು ಅನಂತಕುಮಾರ್ ಹೆಗಡೆ ಮುಖಕ್ಕೆ ಮಸಿ ಬಳಿಯುವುದು ಖಚಿತ. ಸಂವಿಧಾನ ಬದಲಾವಣೆ ಮಾಡುವ ಸಲುವಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬ ಹೇಳಿಕೆ ನೀಡಿದ್ದ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ದಲಿತ ಮುಖಂಡ ಹಣಮಂತ ಯಳಸಂಗಿ ಬುಧವಾರ ಇಲ್ಲಿ ಆಗ್ರಹಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ
ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಸಿಎಚ್ಎಸ್ ಸಂಸ್ಥೆ ನಡೆಸಿರುವ ಸಮೀಕ್ಷೆಯ ವರದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications