Maha Kumbh Mela: 90,000ಕ್ಕೂ ಹೆಚ್ಚು ಕೈದಿಗಳಿಗೆ ಮಹಾಕುಂಭ ಮೇಳದ ಪವಿತ್ರ ಸ್ನಾನಕ್ಕೆ ಅವಕಾಶ
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಭಕ್ತಾದಿಗಳು ಕೋಟ್ಯಂತರ ಸಂಖ್ಯೆಯಲ್ಲಿ ಆಗಮಿಸಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಇದೀಗ ಉತ್ತರ ಪ್ರದೇಶ ಸರ್ಕಾರವು ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ.
ಉತ್ತರ ಪ್ರದೇಶದ ಜೈಲು ಆಡಳಿತವು ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ ಕಚೇರಿಯು ಈ ಮಾಹಿತಿ ನೀಡಿದೆ. ಫೆಬ್ರವರಿ 21ರಂದು (ಶುಕ್ರವಾರ) ಎಲ್ಲ ಜೈಲುಗಳಲ್ಲಿ ಬೆಳಿಗ್ಗೆ 9.30ರಿಂದ 10 ಗಂಟೆಯವರೆಗೆ ಈ ಪವಿತ್ರ ಸ್ನಾನದ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದೆ.

ಉತ್ತರಪ್ರದೇಶದ ರಾಜ್ಯದಾದ್ಯಂತ ಏಳು ಕೇಂದ್ರ ಕಾರಾಗೃಹಗಳು ಸೇರಿದಂತೆ ಒಟ್ಟು 75 ಜೈಲುಗಳಲ್ಲಿ 90,000ಕ್ಕೂ ಹೆಚ್ಚು ಕೈದಿಗಳಿದ್ದಾರೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಾರಾಗೃಹ ಸಚಿವರ ಸೂಚನೆ ಮೇರೆಗೆ ಕೈದಿಗಳಿಗೆ ಮಹಾಕುಂಭ ಮೇಳದ ಪವಿತ್ರ ಸ್ನಾನದ ವ್ಯವಸ್ಥೆ ಮಾಡಲಿದ್ದೇವೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ.
ಪ್ರಯಾಗ್ರಾಜ್ ತ್ರಿವೇಣಿ ಸಂಗಮದ ಪವಿತ್ರ ನೀರನ್ನು ಎಲ್ಲಾ ಜೈಲುಗಳಿಗೆ ತಂದು ಸಾಮಾನ್ಯ ನೀರಿನೊಂದಿಗೆ ಸೇರಿಸಲಾಗುತ್ತದೆ. ಜೈಲು ಆವರಣದಲ್ಲಿರುವ ಸಣ್ಣ ತೊಟ್ಟಿಯಲ್ಲಿ ಈ ನೀರನ್ನು ಸಂಗ್ರಹಿಸಲಾಗುತ್ತದೆ. ಎಲ್ಲ ಕೈದಿಗಳು ಪ್ರಾರ್ಥನೆಯ ನಂತರ ಈ ಪವಿತ್ರ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಪ್ರಕ್ರಿಯೆ ವಿವರಿಸಿದ್ದಾರೆ. ಹಾಗಾಗಿ ಫೆಬ್ರವರಿ 21ರಂದು ಲಕ್ನೋ ಜೈಲಿನಲ್ಲಿ ನಡೆಯಲಿರುವ ಈ ಪವಿತ್ರ ಸ್ನಾನದ ಕಾರ್ಯಕ್ರಮದಲ್ಲಿ ಸಚಿವ ಚೌಹಾಣ್ ಹಾಗೂ ಹಿರಿಯ ಜೈಲು ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ.
ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್ನಲ್ಲಿರು ಜಿಲ್ಲಾ ಕಾರಾಗೃಹದ ಸುಮಾರು 1,350 ಕೈದಿಗಳು ಪವಿತ್ರ ಸ್ನಾನ ಮಾಡಲು ಸಜ್ಜಾಗಿದ್ದಾರೆ. ಅವರ ಬಂಧನದ ಹೊರತಾಗಿಯೂ ಕುಂಭಮೇಳದಲ್ಲಿ ಭಾಗವಹಿಸಲು ಅವಕಾಶ ಪಡೆಯುತ್ತಿದ್ದಾರೆ ಎಂದು ಪ್ರಯಾಗರಾಜ್ ಜಿಲ್ಲಾ ಕಾರಾಗೃಹದ ಹಿರಿಯ ಅಧೀಕ್ಷಕ ಅಮಿತಾ ದುಬೆ ಹೇಳಿದ್ದಾರೆ. ಉನ್ನಾವೋ ಜೈಲಿನಲ್ಲಿ ಈಗಾಗಲೇ ಒಂದು ಬಾರಿ ಕೈದಿಗಳಿಗೆ ಪವಿತ್ರ ನೀರಿನಿಂದ ಸ್ನಾನ ಮಾಡುವ ಅವಕಾಶ ನೀಡಲಾಗಿದೆ. ಈಗ ಫೆಬ್ರವರಿ 21ರಂದು ಅವರಿಗೆ ಎರಡನೇ ಬಾರಿ ಪವಿತ್ರ ಸ್ನಾನ ಮಾಡುವ ಅವಕಾಶ ಸಿಗಲಿದೆ. ಜೈಲು ಆಡಳಿತವು ಇಲ್ಲಿನ ಕೈದಿಗಳಿಗೆ ಮತ್ತೊಮ್ಮೆ ಪವಿತ್ರ ಸ್ನಾನದ ವ್ಯವಸ್ಥೆ ಮಾಡುತ್ತಿದೆ.

ಜನವರಿ 13ರಂದು ಪ್ರಾರಂಭವಾದ ಮಹಾಕುಂಭ ಮೇಳವು ಫೆಬ್ರವರಿ 26ರಂದು ಮುಕ್ತಾಯಗೊಳ್ಳಲಿದೆ. ಇಂದು ಬೆಳಿಗ್ಗೆ 8 ಗಂಟೆಯವರೆಗೆ ಸುಮಾರು 30.94 ಲಕ್ಷ ಭಕ್ತರು ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಈ ಮೂಲಕ ಪವಿತ್ರ ಸ್ನಾನ ಮಾಡುವ ಒಟ್ಟು ಭಕ್ತರ ಸಂಖ್ಯೆ 55.56 ಕೋಟಿ ದಾಟಿದೆ ಎಂದು ಉತ್ತರಪ್ರದೇಶದ ಮಾಹಿತಿ ಇಲಾಖೆ ತಿಳಿಸಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications