'ಶೂನ್ಯ ಆವರಿಸಿದೆ', ವಾಜಪೇಯಿ ಅಗಲಿಕೆ ನೋವಲ್ಲಿ ಮೋದಿ
ನವದೆಹಲಿ, ಆಗಸ್ಟ್ 15: ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯ ನೋವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಏಮ್ಸ್ ನಲ್ಲಿ 5.05ರ ಸುಮಾರಿಗೆ ಆಗಸ್ಟ್ 16ರ ಗುರುವಾರ ಸಂಜೆ ಭಾರತದ ಹೆಮ್ಮೆಯ ಪುತ್ರ ಅಟಲ್ ಅವರ ದೇಹಾಂತ್ಯವಾಗಿದೆ. ವಾಜಪೇಯಿಯ ನಿಧನದ ಬಗ್ಗೆ ಭಾವನಾತ್ಮಕವಾಗಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿಯನ್ನು ಹಂತ ಹಂತವಾಗಿ ಕಟ್ಟಿ ಬೆಳೆಸಿದ ಧೀಮಂತ ನಾಯಕ, ದೇಶದ ಉದ್ದಗಲಕ್ಕೂ ಸಂಚರಿಸಿ ಬಿಜೆಪಿ ಬಗ್ಗೆ ಜನರಲ್ಲಿ ಗೌರವ ತಂದ ಮುಖಂಡ, ಇಂದು ದೇಶದಲ್ಲಿ ರಾಷ್ಟ್ರ್ರೀಯ ಪಕ್ಷವಾಗಿ, ಅನೇಕ ರಾಜ್ಯಗಳಲ್ಲಿ ಅಧಿಕಾರ ಅನುಭವಿಸಲು ಅಟಲ್ ಜೀ ಅವರ ಕಠಿಣ ಪರಿಶ್ರಮವೇ ಕಾರಣ ಎಂದು ಮೋದಿ ಅವರು ಸ್ಮರಿಸಿದ್ದಾರೆ.
ನನಗೆ ಮಾತನಾಡಲು ಪದಗಳಿಲ್ಲ. ನಾನು ಭಾವುಕನಾಗಿದ್ದೇನೆ. ಗೌರವಾನ್ವಿತ ಅಟಲ್ ಜೀ ಅವರು ಇನ್ನಿಲ್ಲ. ಅವರ ಜೀವನದ ಪ್ರತಿಯೊಂದು ಕ್ಷಣವೂ ದೇಶಕ್ಕಾಗಿಯೇ ಸಮರ್ಪಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.
|
ಮೋದಿ ಮಾಡಿದ ಟ್ವೀಟ್ಸ್
ಬಿಜೆಪಿಯನ್ನು ಹಂತ ಹಂತವಾಗಿ ಕಟ್ಟಿ ಬೆಳೆಸಿದ ಧೀಮಂತ ನಾಯಕ, ದೇಶದ ಉದ್ದಗಲಕ್ಕೂ ಸಂಚರಿಸಿ ಬಿಜೆಪಿ ಬಗ್ಗೆ ಜನರಲ್ಲಿ ಗೌರವ ತಂದ ಮುಖಂಡ, ಇಂದು ದೇಶದಲ್ಲಿ ರಾಷ್ಟ್ರ್ರೀಯ ಪಕ್ಷವಾಗಿ, ಅನೇಕ ರಾಜ್ಯಗಳಲ್ಲಿ ಅಧಿಕಾರ ಅನುಭವಿಸಲು ಅಟಲ್ ಜೀ ಅವರ ಕಠಿಣ ಪರಿಶ್ರಮವೇ ಕಾರಣ ಎಂದು ಮೋದಿ ಅವರು ಸ್ಮರಿಸಿದ್ದಾರೆ.
|
ಅವರು ಕಲಿಸಿದ ಪಾಠಗಳು ಎಂದಿಗೂ ಅನುಕರಣೀಯ
ಆಟಲ್ ಜೀ ಅವರ ನಿಧನ ವೈಯಕ್ತಿಕವಾಗಿ ಭಾರಿ ನಷ್ಟವಾಗಿದೆ. ಅವರೊಂದಿಗೆ ಅಚ್ಚಳಿಯದ ಅಗಣಿತ ನೆನಪುಗಳಿವೆ. ನನ್ನಂಥ ಕಾರ್ಯಕರ್ತರಿಗೆ ಅವರು ಸ್ಫೂರ್ತಿಯಾಗಿದ್ದರು. ಹಾಸ್ಯದ ಧಾಟಿಯಲ್ಲಿ ಅವರು ಕಲಿಸಿದ ಪಾಠಗಳು ಎಂದಿಗೂ ಅನುಕರಣೀಯ.
|
ಭಾರತ ಅಭ್ಯುದಯಕ್ಕೆ ಅಡಿಗಲ್ಲು ಹಾಕಿದರು
ಅಟಲ್ ಅವರ ದೂರದರ್ಶಿತ್ವದ ಫಲವಾಗಿ 21ನೇ ಶತಮಾನದಲ್ಲಿ ಭಾರತ ಪ್ರಕಾಶಿಸುವಂತಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ಅನುಕೂಲವಾಗುವಂಥ ಹಲವು ಯೋಜನೆಗಳ ಹರಿಕಾರರಾಗಿದ್ದರು. ಭಾರತ ಅಭ್ಯುದಯಕ್ಕೆ ಅಡಿಗಲ್ಲು ಹಾಕಿದರು.
|
ಓಂ ಶಾಂತಿ, ವಾಜಪೇಯಿ ಅಗಲಿಕೆ ನೋವು
ವಾಜಪೇಯಿ ಅವರ ಅಗಲಿಕೆಯೊಂದಿಗೆ ಒಂದು ಯುಗಾಂತ್ಯವಾಗಿದೆ. ದೇಶಕ್ಕಾಗಿ ಜೀವಿಸಿ, ದಶಕಗಳ ಕಾಲ ಸೇವೆ ಸಲ್ಲಿಸಿದ ನಾಯಕನ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ, ಅಭಿಮಾನಿಗಳಿಗೆ ಸಿಗಲಿ, ಓಂ ಶಾಂತಿ
|
ಸಾವಿಗೆ ಸರಿಯಾದ ವಯಸ್ಸುಯಾವುದು?
ಸಾವಿಗೆ ಸರಿಯಾದ ವಯಸ್ಸು ಯಾವುದು? ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಕವನವೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಮೋದಿ.
|
ವಾಜಪೇಯಿಯ ನಿಧನದ ಬಗ್ಗೆ ಮೋದಿ
ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯ ನೋವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications