ನರೇಂದ್ರ ಮೋದಿ ಸನ್ಯಾಸಿಯಾಗದೆ, ಪ್ರಧಾನಿಯಾಗಿದ್ದು ಹೇಗೆ?
Recommended Video
ನವದೆಹಲಿ, ಏಪ್ರಿಲ್ 24: "ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಂದರ್ಶನದಲ್ಲಿ, ಮೋದಿ ಅವರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಬದುಕಿನ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಶನ ಸಂಪೂರ್ಣ ರಾಜಕೀಯವನ್ನು ಹೊರತಾಗಿಸಿದ್ದಾಗಿದ್ದರಿಂದ ಮೋದಿ ಅವರ ಬದುಕಿನ ಬಗ್ಗೆ ಜನಸಾಮಾನ್ಯರಿಗೆ ಗೊತ್ತಿರದಿದ್ದ ಹಲವು ಕುತೂಹಲಕರ ವಿಷಯಗಳು ಹೊರಬಂದವು.
ಈ ಸಂದರ್ಶನವನ್ನು ಎಎನ್ ಐ ನ್ಯೂಸ್ ಏಜೆನ್ಸಿ ಪ್ರಸಾರ ಮಾಡಿದ್ದು, ನರೇಂದ್ರ ಮೋದಿ ಅವರು ಅಕ್ಷ ಕುಮಾರ್ ಅವರ ಜೊತೆ ನಡೆಸಿದ ಸಂದರ್ಶನದ ಮುಖ್ಯಾಂಶಗಳು ಇಲ್ಲಿವೆ.
ಬ್ಯಾಂಕ್ ಖಾತೆಯೇ ಇರಲಿಲ್ಲ!
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗುವವರೆಗೂ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಯೇ ಇರಲಿಲ್ಲ! ಮುಖ್ಯಮಂತ್ರಿಯಾದ ನಂತರ ಖಾತೆ ತೆರೆಯ ಬೇಕಾದ ಅಗತ್ಯ ಬಂದಾಗ ಅವರು ಬ್ಯಾಂಕ್ ಖಾತೆ ತೆರೆದರು. ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

ಮೋದಿಗೆ ಕೋಪ ಬರುತ್ತಾ?
"ನನಗೆ ಹಲವು ಬಾರಿ ಆಶ್ಚರ್ಯವಾಗಿದೆ, ಆದರೆ ಕೋಪ ಬಂದಿಲ್ಲ. ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಅಷ್ಟು ವರ್ಷ ಸೇವೆ ಸಲ್ಲಿಸಿದರೂ, ಪ್ರಧಾನಿಯಾಗಿ ಜವಾಬ್ದಾರಿ ಹೊತ್ತಮೇಲೂ ನನಗೆ ಎಂದಿಗೂ ಕೋಪ ಬರಲಿಲ್ಲ. ನಾನು ಶಿಸ್ತು ಮತ್ತು ಗಂಭೀರವಾಗಿರುವುದನ್ನು ಇಷ್ಟಪಡುತ್ತೇನೆ. ಆದರೆ ಅದು ಕೋಪವಲ್ಲ" ನರೇಂದ್ರ ಮೋದಿ

ಸನ್ಯಾಸಿಯಾಗಲು ಹೋಗಿ ಪ್ರಧಾನಿಯಾದ ಬಗೆ
"ಚಿಕ್ಕ ವಯಸ್ಸಿನಿಂದಲೂ ನನಗೆ ಸೇನೆಯನ್ನು ಕಂಡರೆ ಗೌರವ. ನಂತರ ರಾಮಕೃಷ್ಣ ಮಿಶನ್ ಮತ್ತು ಅಲ್ಲಿನ ಅಧ್ಯಾತ್ಮ ಗುರುಗಳಿಂದ ಸ್ಫೂರ್ತಿ ಪಡೆದು ಅಧ್ಯಾತ್ಮದ ಕಡದೆ ಆಕರ್ಷಿತವಾದೆ. ಸನ್ಯಾಸಿಯಾಗಬೇಕು ಎಂದುಕೊಂದಿದ್ದ ನಾನು, ಎಂದೋ ಒಂದು ದಿನ ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ನಿರೀಕ್ಷಿಸಿಯೇ ಇರಲಿಲ್ಲ. ಆದರೆ ಬದುಕು ತಾನೇ ಹಾಗೆ ಆಕಾರಗೊಂಡು, ನನ್ನನ್ನು ಪ್ರಧಾನಿಯನ್ನಾಗಿ ಮಾಡಿತು"- ನರೇಂದ್ರ ಮೋದಿ

ಮೋದಿಗೆ ಅಲ್ಲಾವುದ್ದಿನ್ ನ ದೀಪ ಸಿಕ್ಕರೇ...
ಅಲ್ಲಾವುದ್ದಿನ್ ನ ಮಾಯಾ ದೀಪ ಸಿಕ್ಕರೆ ನೀವು ಯಾವ ವರ ಬೇಡುತ್ತೀರಿ ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, "ಹಾಗೊಮ್ಮೆ ನನಗೆ ಅಲ್ಲಾವುದ್ದಿನ್ ನ ದೀಪ ಸಿಕ್ಕರೆ, ಇಂದಿನ ತಲಮಾರಿನ ಶಿಕ್ಷಕರು ಮಕ್ಕಳಿಗೆ ಯಾವುದೇ ಕಾರಣಕ್ಕೂ ಅಲ್ಲಾವುದ್ದಿನ್ ನ ಮಾಯಾದೀಪದ ಕತೆ ಹೇಳದಂತೆ ಮಾಡು ಎಂದು ಕೇಳುತ್ತೇನೆ. ಎಲ್ಲರು ಸ್ವಂತ ಪರಿಶ್ರಮದ ಮೂಲಕ ಮೇಲೆ ಬರಬೇಕು, ಇಂಥವುಗಳ ಭ್ರಮೆಯಲ್ಲಿ ಬದುಕಬಾರದು" ಎಂದರು.

ಇತ್ತೀಚೆಗೆ ಹಾಸ್ಯ ಮಾಡಲ್ಲ ಯಾಕೆ?
ನಾನು ಇತ್ತೀಚೆಗೆ ಹಾಸ್ಯ ಮಾಡುವುದನ್ನು ಕಡಿಮೆ ಮಾಡಿದ್ದೇನೆ. ಯಾಕಂದ್ರೆ ನನ್ನ ಹಾಸ್ಯವನ್ನೂ ಟಿಆರ್ ಪಿಗಾಗಿ ತಿರುಚಿಬಿಟ್ಟರೆ ಎಂಬ ಭಯ ನನಗೆ!- ನರೇಂದ್ರ ಮೋದಿ

ಕೇವಲ 4 ಗಂಟೆ ನಿದ್ದೆ ಸಾಕಾ?
ನೀವು ಕೇವಲ ನಾಲ್ಕೇ ನಾಲ್ಕು ತಾಸು ನಿದ್ದೆ ಮಾಡುತ್ತೀರಾ ಎಂದು ಕೇಳಿದ್ದೆ. ಅದು ನಿಜವೇ? ನಿಮಗೆ ಇಷ್ಟೊಂದು ಓಡಾಟದ ನಡುವೆಯೂ ನಾಲ್ಕೇ ತಾಸು ನಿದ್ದೆ ಸಾಕಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ನಾಲ್ಕು ತಾಸಾದ ನಂತರ ನನಗೆ ಮತ್ತೆ ನಿದ್ದೆ ಬರುವುದಿಲ್ಲ. ನನ್ನ ದೇಹಕ್ಕೆ ಅಷ್ಟೇ ನಿದ್ದೆ ಸಾಕು. ಮತ್ತೆ ಮಲಗಬೇಕೆಂದರೂ ನನಗೆ ನಿದ್ದೆ ಬರುವುದಿಲ್ಲ ಎಂದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications