ನರೇಂದ್ರ ಮೋದಿ ಸನ್ಯಾಸಿಯಾಗದೆ, ಪ್ರಧಾನಿಯಾಗಿದ್ದು ಹೇಗೆ?
Recommended Video
ನವದೆಹಲಿ, ಏಪ್ರಿಲ್ 24: "ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಂದರ್ಶನದಲ್ಲಿ, ಮೋದಿ ಅವರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಬದುಕಿನ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಶನ ಸಂಪೂರ್ಣ ರಾಜಕೀಯವನ್ನು ಹೊರತಾಗಿಸಿದ್ದಾಗಿದ್ದರಿಂದ ಮೋದಿ ಅವರ ಬದುಕಿನ ಬಗ್ಗೆ ಜನಸಾಮಾನ್ಯರಿಗೆ ಗೊತ್ತಿರದಿದ್ದ ಹಲವು ಕುತೂಹಲಕರ ವಿಷಯಗಳು ಹೊರಬಂದವು.
ಈ ಸಂದರ್ಶನವನ್ನು ಎಎನ್ ಐ ನ್ಯೂಸ್ ಏಜೆನ್ಸಿ ಪ್ರಸಾರ ಮಾಡಿದ್ದು, ನರೇಂದ್ರ ಮೋದಿ ಅವರು ಅಕ್ಷ ಕುಮಾರ್ ಅವರ ಜೊತೆ ನಡೆಸಿದ ಸಂದರ್ಶನದ ಮುಖ್ಯಾಂಶಗಳು ಇಲ್ಲಿವೆ.
ಬ್ಯಾಂಕ್ ಖಾತೆಯೇ ಇರಲಿಲ್ಲ!
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗುವವರೆಗೂ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಯೇ ಇರಲಿಲ್ಲ! ಮುಖ್ಯಮಂತ್ರಿಯಾದ ನಂತರ ಖಾತೆ ತೆರೆಯ ಬೇಕಾದ ಅಗತ್ಯ ಬಂದಾಗ ಅವರು ಬ್ಯಾಂಕ್ ಖಾತೆ ತೆರೆದರು. ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

ಮೋದಿಗೆ ಕೋಪ ಬರುತ್ತಾ?
"ನನಗೆ ಹಲವು ಬಾರಿ ಆಶ್ಚರ್ಯವಾಗಿದೆ, ಆದರೆ ಕೋಪ ಬಂದಿಲ್ಲ. ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಅಷ್ಟು ವರ್ಷ ಸೇವೆ ಸಲ್ಲಿಸಿದರೂ, ಪ್ರಧಾನಿಯಾಗಿ ಜವಾಬ್ದಾರಿ ಹೊತ್ತಮೇಲೂ ನನಗೆ ಎಂದಿಗೂ ಕೋಪ ಬರಲಿಲ್ಲ. ನಾನು ಶಿಸ್ತು ಮತ್ತು ಗಂಭೀರವಾಗಿರುವುದನ್ನು ಇಷ್ಟಪಡುತ್ತೇನೆ. ಆದರೆ ಅದು ಕೋಪವಲ್ಲ" ನರೇಂದ್ರ ಮೋದಿ

ಸನ್ಯಾಸಿಯಾಗಲು ಹೋಗಿ ಪ್ರಧಾನಿಯಾದ ಬಗೆ
"ಚಿಕ್ಕ ವಯಸ್ಸಿನಿಂದಲೂ ನನಗೆ ಸೇನೆಯನ್ನು ಕಂಡರೆ ಗೌರವ. ನಂತರ ರಾಮಕೃಷ್ಣ ಮಿಶನ್ ಮತ್ತು ಅಲ್ಲಿನ ಅಧ್ಯಾತ್ಮ ಗುರುಗಳಿಂದ ಸ್ಫೂರ್ತಿ ಪಡೆದು ಅಧ್ಯಾತ್ಮದ ಕಡದೆ ಆಕರ್ಷಿತವಾದೆ. ಸನ್ಯಾಸಿಯಾಗಬೇಕು ಎಂದುಕೊಂದಿದ್ದ ನಾನು, ಎಂದೋ ಒಂದು ದಿನ ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ನಿರೀಕ್ಷಿಸಿಯೇ ಇರಲಿಲ್ಲ. ಆದರೆ ಬದುಕು ತಾನೇ ಹಾಗೆ ಆಕಾರಗೊಂಡು, ನನ್ನನ್ನು ಪ್ರಧಾನಿಯನ್ನಾಗಿ ಮಾಡಿತು"- ನರೇಂದ್ರ ಮೋದಿ

ಮೋದಿಗೆ ಅಲ್ಲಾವುದ್ದಿನ್ ನ ದೀಪ ಸಿಕ್ಕರೇ...
ಅಲ್ಲಾವುದ್ದಿನ್ ನ ಮಾಯಾ ದೀಪ ಸಿಕ್ಕರೆ ನೀವು ಯಾವ ವರ ಬೇಡುತ್ತೀರಿ ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, "ಹಾಗೊಮ್ಮೆ ನನಗೆ ಅಲ್ಲಾವುದ್ದಿನ್ ನ ದೀಪ ಸಿಕ್ಕರೆ, ಇಂದಿನ ತಲಮಾರಿನ ಶಿಕ್ಷಕರು ಮಕ್ಕಳಿಗೆ ಯಾವುದೇ ಕಾರಣಕ್ಕೂ ಅಲ್ಲಾವುದ್ದಿನ್ ನ ಮಾಯಾದೀಪದ ಕತೆ ಹೇಳದಂತೆ ಮಾಡು ಎಂದು ಕೇಳುತ್ತೇನೆ. ಎಲ್ಲರು ಸ್ವಂತ ಪರಿಶ್ರಮದ ಮೂಲಕ ಮೇಲೆ ಬರಬೇಕು, ಇಂಥವುಗಳ ಭ್ರಮೆಯಲ್ಲಿ ಬದುಕಬಾರದು" ಎಂದರು.

ಇತ್ತೀಚೆಗೆ ಹಾಸ್ಯ ಮಾಡಲ್ಲ ಯಾಕೆ?
ನಾನು ಇತ್ತೀಚೆಗೆ ಹಾಸ್ಯ ಮಾಡುವುದನ್ನು ಕಡಿಮೆ ಮಾಡಿದ್ದೇನೆ. ಯಾಕಂದ್ರೆ ನನ್ನ ಹಾಸ್ಯವನ್ನೂ ಟಿಆರ್ ಪಿಗಾಗಿ ತಿರುಚಿಬಿಟ್ಟರೆ ಎಂಬ ಭಯ ನನಗೆ!- ನರೇಂದ್ರ ಮೋದಿ

ಕೇವಲ 4 ಗಂಟೆ ನಿದ್ದೆ ಸಾಕಾ?
ನೀವು ಕೇವಲ ನಾಲ್ಕೇ ನಾಲ್ಕು ತಾಸು ನಿದ್ದೆ ಮಾಡುತ್ತೀರಾ ಎಂದು ಕೇಳಿದ್ದೆ. ಅದು ನಿಜವೇ? ನಿಮಗೆ ಇಷ್ಟೊಂದು ಓಡಾಟದ ನಡುವೆಯೂ ನಾಲ್ಕೇ ತಾಸು ನಿದ್ದೆ ಸಾಕಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ನಾಲ್ಕು ತಾಸಾದ ನಂತರ ನನಗೆ ಮತ್ತೆ ನಿದ್ದೆ ಬರುವುದಿಲ್ಲ. ನನ್ನ ದೇಹಕ್ಕೆ ಅಷ್ಟೇ ನಿದ್ದೆ ಸಾಕು. ಮತ್ತೆ ಮಲಗಬೇಕೆಂದರೂ ನನಗೆ ನಿದ್ದೆ ಬರುವುದಿಲ್ಲ ಎಂದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications