ಪಿಎಂ ಪೋಷಣ್ ವ್ಯಾಪ್ತಿಗೆ 11.20 ಲಕ್ಷ ಶಾಲೆ, 11.80 ಕೋಟಿ ಮಕ್ಕಳು
ನವದೆಹಲಿ, ಸೆಪ್ಟೆಂಬರ್ 29: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಐದು ವರ್ಷಗಳ ಅವಧಿಗೆ ಶಾಲೆಗಳಲ್ಲಿ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಮುಂದುವರಿಸಲು ನಿರ್ಧರಿಸಿದೆ.
ಕೇಂದ್ರ ಸರಕಾರದಿಂದ 54061.73 ಕೋಟಿ ರೂ. ಮತ್ತು ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಂದ 31,733.17 ಕೋಟಿ ರೂ. ಹಣಕಾಸು ಹಂಚಿಕೆಯೊಂದಿಗೆ 2021-22ರಿಂದ 2025-26ರ ವರೆಗಿನ ಐದು ವರ್ಷಗಳ ಅವಧಿಗೆ ಶಾಲೆಗಳಲ್ಲಿ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಮುಂದುವರಿಸಲು ಅನುಮೋದನೆ ನೀಡಿದೆ. ಆಹಾರ ಧಾನ್ಯಗಳ ಮೇಲೆ ಸುಮಾರು 45,000 ಕೋಟಿ ರೂ. ಹೆಚ್ಚುವರಿ ವೆಚ್ಚವನ್ನು ಕೇಂದ್ರ ಸರಕಾರ ಭರಿಸಲಿದೆ. ಆದ್ದರಿಂದ, ಒಟ್ಟು ಯೋಜನಾ ಆಯವ್ಯಯ 1,30,794.90 ಕೋಟಿ ರೂ. ಆಗಲಿದೆ.
2021-22 ರಿಂದ 2025-26ರವರೆಗೆ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ಊಟ ಒದಗಿಸುವ ʻಪಿಎಂ ಪೋಷಣ್ʼ ಯೋಜನೆಯನ್ನು ಸಿಸಿಇಎ ಇಂದು ಅನುಮೋದಿಸಿದೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಸರಕಾರಿ, ಅನುದಾನಿತ ಶಾಲೆಗಳ 1-8ನೇ ತರಗತಿಗಳಲ್ಲಿ ಓದುತ್ತಿರುವ ಎಲ್ಲಾ ಶಾಲಾ ಮಕ್ಕಳನ್ನು ಒಳಗೊಂಡಿದೆ.

ಮಧ್ಯಾಹ್ನದ ಬಿಸಿಯೂಟದ ಯೋಜನೆ
ಈ ಯೋಜನೆಯ ಹಿಂದಿನ ಹೆಸರು 'ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ರಾಷ್ಟ್ರೀಯ ಯೋಜನೆ' ಎಂದಾಗಿತ್ತು. ಇದನ್ನು ಜನಪ್ರಿಯವಾಗಿ ಮಧ್ಯಾಹ್ನದ ಬಿಸಿಯೂಟದ ಯೋಜನೆ ಎಂದು ಕರೆಯಲಾಗುತ್ತಿತ್ತು.
ಈ ಯೋಜನೆಯು ದೇಶಾದ್ಯಂತ 11.80 ಲಕ್ಷ ಶಾಲೆಗಳಲ್ಲಿ ಓದುತ್ತಿರುವ ಸುಮಾರು 11.80 ಕೋಟಿ ಮಕ್ಕಳನ್ನು ಒಳಗೊಂಡಿದೆ. 2020-21ರ ಅವಧಿಯಲ್ಲಿ ಭಾರತ ಸರಕಾರವು ಈ ಯೋಜನೆಯಲ್ಲಿ 24,400 ಕೋಟಿ ರೂ. ಹೂಡಿಕೆ ಮಾಡಿದೆ, ಇದರಲ್ಲಿ ಆಹಾರ ಧಾನ್ಯಗಳ ಮೇಲೆ ಮಾಡಲಾದ ಸುಮಾರು 11,500 ಕೋಟಿ ರೂ. ವೆಚ್ಚವೂ ಸೇರಿವೆ.

ಯೋಜನೆ ಮುಖ್ಯಾಂಶಗಳು ಈ ಕೆಳಗಿನಂತಿವೆ
ಯೋಜನೆಯ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಸುಧಾರಿಸುವ ನಿರ್ಧಾರದ ಮುಖ್ಯಾಂಶಗಳು ಈ ಕೆಳಗಿನಂತಿವೆ:
1) ಪ್ರಾಥಮಿಕ ತರಗತಿಗಳ ಓದುತ್ತಿರುವ ಎಲ್ಲಾ 11.80 ಕೋಟಿ ಮಕ್ಕಳು ಮಾತ್ರವಲ್ಲದೆ, ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ ಅಥವಾ ಬಾಲವಾಡಿಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ಪ್ರಸ್ತಾಪಿಸಲಾಗಿದೆ.
2) ʻಸಮುದಾಯಭೋಜನʼ ಪರಿಕಲ್ಪನೆಯನ್ನು ವ್ಯಾಪಕವಾಗಿ ಪ್ರೋತ್ಸಾಹಿಸಲಾಗುವುದು. ʻಸಮುದಾಯಭೋಜನʼ ಎಂಬುದು ಸಮುದಾಯ ಪಾಲ್ಗೊಳ್ಳುವಿಕೆ ಕಾರ್ಯಕ್ರಮವಾಗಿದ್ದು, ಇದರಲ್ಲಿ ಜನರು ವಿಶೇಷ ಸಂದರ್ಭಗಳಲ್ಲಿ/ ಹಬ್ಬಗಳಲ್ಲಿ ಮಕ್ಕಳಿಗೆ ವಿಶೇಷ ಆಹಾರವನ್ನು ಒದಗಿಸುತ್ತಾರೆ.

ಶಾಲಾ ಪೌಷ್ಟಿಕಾಂಶ ಉದ್ಯಾನ
3) ಮಕ್ಕಳಿಗೆ ಪ್ರಕೃತಿ ಮತ್ತು ತೋಟಗಾರಿಕೆಯ ಬಗ್ಗೆ ಪ್ರಾಥಮಿಕ ಅನುಭವ ನೀಡಲು ಶಾಲೆಗಳಲ್ಲಿ ʻಶಾಲಾ ಪೌಷ್ಟಿಕಾಂಶ ಉದ್ಯಾನʼಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತಿದೆ. ಈ ಉದ್ಯಾನಗಳ ಫಸಲನ್ನು ಹೆಚ್ಚುವರಿ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುವ ಯೋಜನೆಯಲ್ಲಿ ಬಳಸಲಾಗುತ್ತದೆ. ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ʻಶಾಲಾ ಪೋಷಕಾಂಶ ಉದ್ಯಾನʼಗಳನ್ನು ಅಭಿವೃದ್ಧಿಪಡಿಸಲಾಗಿದೆ.
4) ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ.
5) ರಕ್ತಹೀನತೆಯ ಪ್ರಕರಣಗಳನ್ನು ಹೆಚ್ಚಾಗಿ ಹೊಂದಿರುವ ಜಿಲ್ಲೆಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ಪದಾರ್ಥಗಳನ್ನು ಒದಗಿಸಲು ವಿಶೇಷ ಅವಕಾಶವನ್ನು ಈ ಯೋಜನೆಯಡಿ ಕಲ್ಪಿಸಲಾಗಿದೆ.

ಸ್ಥಳೀಯವಾಗಿ ಲಭ್ಯವಿರುವ ಆಹಾರ ಪದಾರ್ಥ
6) ಸ್ಥಳೀಯವಾಗಿ ಲಭ್ಯವಿರುವ ಆಹಾರ ಪದಾರ್ಥಗಳು ಮತ್ತು ತರಕಾರಿಗಳನ್ನು ಆಧರಿಸಿ ಸಾಂಪ್ರದಾಯಿಕ ಪಾಕಪದ್ಧತಿ ಮತ್ತು ವಿನತೂನ ತಿನಿಸುಗಳ ತಯಾರಿಕೆಯನ್ನು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಎಲ್ಲಾ ಹಂತಗಳಲ್ಲಿ ಅಡುಗೆ ಸ್ಪರ್ಧೆಗಳನ್ನು ಪ್ರೋತ್ಸಾಹಿಸಲಾಗುವುದು.
7) ʻಆತ್ಮನಿರ್ಭರ ಭಾರತ್ʼಗಾಗಿ ವೋಕಲ್ ಫಾರ್ ಲೋಕಲ್: ಯೋಜನೆಯ ಅನುಷ್ಠಾನದಲ್ಲಿ ರೈತರ ಉತ್ಪಾದಕ ಸಂಸ್ಥೆಗಳು (ಎಫ್ಪಿಒ) ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸಲಾಗುವುದು. ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಸ್ಥಳೀಯವಾಗಿ ಬೆಳೆದ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಬಳಸುವುದನ್ನು ಪ್ರೋತ್ಸಾಹಿಸಲಾಗುವುದು.
8) ಪ್ರತಿಷ್ಠಿತ ವಿಶ್ವವಿದ್ಯಾಲಯಗಳು/ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಮತ್ತು ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳು (ಆರ್ಐಇ) ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ (ಡಿಇಟಿ) ತರಬೇತಿ ಹಂತದ ಶಿಕ್ಷಕರಿಂದ ಪ್ರಗತಿ ಮೇಲ್ವಿಚಾರಣೆ ಮತ್ತು ತಪಾಸಣೆಗಾಗಿ ಕ್ಷೇತ್ರ ಭೇಟಿಗೆ ವ್ಯವಸ್ಥೆ ಮಾಡಲಾಗುವುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications