ಪಶ್ಚಿಮ ಬಂಗಾಳದಲ್ಲಿ ಅಚ್ಚರಿ, ಮತದಾರನ ಚಿತ್ತ 'ಎಡದಿಂದ ಬಲ'ಕ್ಕೆ!
ಕೋಲ್ಕತ್ತಾ, ಮೇ 28: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಭವಿಷ್ಯವನ್ನೇ ಕತ್ತಲಾಗಿಸಿದ್ದು, ಪಶ್ಚಿಮ ಬಂಗಾಳದ ಫಲಿತಾಂಶ. ರಾಜ್ಯದಲ್ಲಿ ಬಿಜೆಪಿ ತನಗೊಬ್ಬ ಪ್ರತಿಸ್ಪರ್ಧಿ ಎಂದೇ ಎಣಿಸಿರದ ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳಿಗೆ ಭಾರೀ ಆಘಾತವುಂಟಾಗಿದೆ.
ಅದರಲ್ಲೂ ಮತ ಹಂಚಿಕೆಯ ಪ್ರಮಾಣವನ್ನು ನೋಡಿದರೆ ಇಷ್ಟು ವರ್ಷ ಎಡಪಕ್ಷಕ್ಕೆ ಮತ್ತು ತೃಣಮೂಲ ಕಾಂಗ್ರೆಸ್ ನತ್ತ ಮಾತ್ರ ಒಲವು ತೋರಿದ್ದ ದಲಿತರು, ಒಬಿಸಿ, ಆದಿವಾಸಿಗಳು ಈ ಬಾರಿ ಬಿಜೆಪಿಯತ್ತ ವಾಲಿವೆ. ಅದೂ ಅನೂಹ್ಯ ಸಂಖ್ಯೆಯಲ್ಲಿ!
ದಿ ಹಿಂದು ಸಿಎಸ್ ಡಿಸಿ-ಲೋಕನೀತಿ ಫಲಿತಾಂಶೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದ ಮತದಾರ ಎಡದಿಂದ ಬಲಕ್ಕೆ ವಾಲಿರುವ ಸ್ಪಷ್ಟ ಚಿತ್ರಣ ಈ ಸಮೀಕ್ಷೆಯ ಮೂಲಕ ಸಿಕ್ಕಿದೆ.
2014 ರ ಲೋಕಸಭೆ ಚುನಾವಣೆಯಲ್ಲಿ ಕೇವಲ 2 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ, ಈ ಬಾರಿ 18(42) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅಷ್ಟೇ ಅಲ್ಲ ಬಿಜೆಪಿಯ ಮತಹಂಚಿಕೆಯ ಪ್ರಮಾಣ 2014 ಕ್ಕೆ ಹೋಲಿಸಿದರೆ ಶೇ.40 ರಷ್ಟು ಹೆಚ್ಚಾಗಿದೆ! ಇದು ಎಡಪಕ್ಷ ಮತ್ತು ಟಿಎಂಸಿ ಪಾಲಿಗೆ ದುಃಸ್ವಪ್ನವೇ ಸರಿ.

ಎಡದಿಂದ ಬಲಕ್ಕೆ...
ಲೋಕನೀತಿ ಸಮೀಕ್ಷೆಯ ಪ್ರಕಾರ 2019 ರಲ್ಲಿ ಪಶ್ಚಿಮ ಬಂಗಾಳದ ಟಿಪಿಕಲ್ ಎಡಪಂಥೀಯ ಮತದಾರರಾಗಿದ್ದ ಶೇ.39 ರಷ್ಟು ಜನ ಬಿಜೆಪಿಗೆ ಮತ ಹಾಕಿದ್ದಾರೆ, ಶೇ.31 ರಷ್ಟು ಮತದಾರರು ಟಿಎಂಸಿಗೆ, ಶೇ.30 ರಷ್ಟು ಮತದಾರರು ಮಾತ್ರವೇ ಮತ್ತೆ ಎಡಪಕ್ಷಕ್ಕೆ ಮತಹಾಕಿದ್ದಾರೆ!
ಹಾಗೇ ಕಾಂಗ್ರೆಸ್ ನ ಮತದಾರರಾಗಿದ್ದ ಶೇ 32ರಷ್ಟು ಜನ ಬಿಜೆಪಿಗೆ ಮತಹಾಕಿದ್ದರೆ, ಟಿಎಂಸಿ ಗೆ ಶೇ. 20, ಎಡಪಕ್ಷಗಳಿಗೆ ಶೇ.4, ಕಾಂಗ್ರೆಸ್ ಗೆ ಶೇ.32 ರಷ್ಟು ಜನ ಮತ ಚಲಾಯಿಸಿದ್ದಾರೆ.

ಬಿಜೆಪಿ ಮತದಾರರು
ಬಿಜೆಪಿಯತ್ತ ವಾಲಿದ ಟಿಎಂಸಿ, ಎಡಪಕ್ಷದ ಮತದಾರರು

ಟಿಎಂಸಿ ಮತದಾರರು
ಟಿಎಂಸಿಗೆ ಆಘಾತ ನೀಡಿದ ಮತದಾರರು

ಎಡಪಕ್ಷದ ಮತದಾರರು
ಎಡಪಕ್ಷಕ್ಕೆ ಕೈಕೊಟ್ಟ ಮತಬ್ಯಾಂಕ್ ಗಳು

ಕಾಂಗ್ರೆಸ್ ಮತದಾರರು
ಕಾಂಗ್ರೆಸ್ ಕಡೆ ತಿರುಗಿಯೂ ನೋಡದ ಮತದಾರರು
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications