ಪ್ರವಾಸಿ ಭಾರತೀಯ ದಿನ 2023: ಇತಿಹಾಸ, ಮಹತ್ವ, ಥೀಮ್ ತಿಳಿಯಿರಿ
ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಅಥವಾ ಎನ್ಆರ್ಐ ದಿನವನ್ನು ಆಚರಿಸಲಾಗುತ್ತದೆ. ದೇಶದ ಪ್ರತಿಯೊಂದು ಹಬ್ಬ, ಆಚರಣೆಗೆ ವಿವಿಧ ಹಿನ್ನೆಲೆ ಇರುವಂತೆ ಪ್ರವಾಸಿ ಭಾರತೀಯ ದಿನಕ್ಕೂ ತನ್ನದೇ ಆದ ಇತಿಹಾಸ ಇದೆ. ಮಹಾತ್ಮಾ ಗಾಂಧಿಯವರು ದಕ್ಷಿಣ ಆಫ್ರಿಕಾದಿಂದ ಭಾರತದ ಮುಂಬೈಗೆ ಹಿಂದಿರುಗಿದ ದಿನವನ್ನು ಆಚರಿಸಲು ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಅಥವಾ ಎನ್ಆರ್ಐ ದಿನವನ್ನು ಆಚರಿಸಲಾಗುತ್ತದೆ. ಈ ಘಟನೆಯು 1915 ರಲ್ಲಿ ನಡೆಯಿತು. ಭಾರತದ ಅಭಿವೃದ್ಧಿಗೆ ಅನಿವಾಸಿ ಭಾರತೀಯ ಸಮುದಾಯದ ಕೊಡುಗೆಯನ್ನು ಎತ್ತಿ ಹಿಡಿಯಲು ಈ ದಿನವನ್ನು ಆಚರಿಸಲಾಗುತ್ತದೆ. ಅನಿವಾಸಿ ಭಾರತೀಯ ದಿನವನ್ನು ಮೊದಲು 2003 ರಲ್ಲಿ ಭಾರತ ಗಣರಾಜ್ಯದ ಜನರು ಆಚರಿಸಿದರು. ಆಯ್ದ ಭಾರತೀಯ ನಗರದಲ್ಲಿ ಫೋರಂ ಮತ್ತು ಪ್ರಶಸ್ತಿ ಸಮಾರಂಭವನ್ನು ಈ ದಿನ ಆಯೋಜಿಸಲಾಗಿದೆ.
ಪ್ರವಾಸಿ ಭಾರತೀಯ ದಿನ 2023: ಥೀಮ್
ದೇಶದ ಅಭಿವೃದ್ಧಿಯಲ್ಲಿ ಭಾರತೀಯ ಡಯಾಸ್ಪೊರಾ ಪ್ರಾಮುಖ್ಯತೆಯ ಮೇಲೆ ಥೀಮ್ ಕೇಂದ್ರೀಕರಿಸುತ್ತದೆ. ಈ ದಿನವನ್ನು ಆಚರಿಸಲು ಪ್ರತಿ ವರ್ಷ ಹೊಸ ಥೀಮ್ ಅನ್ನು ಆಯ್ಕೆ ಮಾಡಲಾಗುತ್ತದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಪ್ರವಾಸಿ ಭಾರತೀಯ ದಿವಸ್ 2023 ರ ಅಧಿಕೃತ ಥೀಮ್ "ಡಯಾಸ್ಪೊರಾ: ಅಮೃತ್ ಕಾಲದಲ್ಲಿ ಭಾರತದ ಪ್ರಗತಿಗಾಗಿ ಶ್ರಮಸಿದ ವಿಶ್ವಾಸಾರ್ಹ ಪಾಲುದಾರರು"
ಪ್ರವಾಸಿ ಭಾರತೀಯ ದಿವಸ್ 2023 ಅನ್ನು ಮಧ್ಯಪ್ರದೇಶದ ಇಂದೋರ್ನಲ್ಲಿ 8-10 ಜನವರಿ, 2023 ರಿಂದ ನಡೆಸಲಾಗುವುದು. ಇದು 17 ನೇ ಪ್ರವಾಸಿ ಭಾರತೀಯ ದಿವಸ್ ಅಥವಾ NRI ದಿನವಾಗಿದೆ.

ಭಾರತದಲ್ಲಿ ಹುಟ್ಟಿ ಉದ್ಯೋಗ ಅರಸಿಕೊಂಡು ಕೋಟ್ಯಾಂತರ ಮಂದಿ ಸಾಗರ ದಾಟಿ ವಿವಿಧ ದೇಶಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೊಟ್ಟೆಪಾಡಿಗಾಗಿ ತಾವು ಹುಟ್ಟೂರು ಬಿಟ್ಟು ತೆರಳಿದ್ದರೂ, ಭಾರತಕ್ಕೆ ಏನಾದರೂ ಸಂಕಷ್ಟ ಎದುರಾದಾಗ ಮೊದಲು ನೆರವಿಗೆ ಧಾವಿಸುವುದು ಅನಿವಾಸಿಗಳೇ. ತಮ್ಮ ಸಂಪಾದನೆಯ ಒಂದಿಷ್ಟು ಭಾಗವನ್ನು ಹುಟ್ಟೂರಿನ ಏಳಿಗೆಗಾಗಿಯೇ ಮೀಸಲಿಡುವ ಅನಿವಾಸಿ ಭಾರತೀಯರು ದೇಶದ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಎನ್ಆರ್ಐಗಳಿಗಾಗಿಯೇ ಭಾರತ ಸರ್ಕಾರ 'ಪ್ರವಾಸಿ ಭಾರತೀಯ ದಿವಸ್' ಎಂದು ವರ್ಷದಲ್ಲಿ ಒಂದು ದಿನ ಮೀಸಲಿಟ್ಟಿದೆ.
ಪ್ರವಾಸಿ ಭಾರತೀಯ ದಿನ ಆಚರಣೆ ಏಕೆ?
ಭಾರತದ ಅಭಿವೃದ್ಧಿಯಲ್ಲಿ ಪ್ರವಾಸಿ ಭಾರತೀಯ ಸಮುದಾಯದ (ಎನ್.ಆರ್.ಐ) ಕೊಡುಗೆ ಅಪಾರ. ಪ್ರಪಂಚದ ವಿವಿಧ ಮೂಲೆಗಳಲ್ಲಿ ಇದ್ದುಕೊಂಡು ಭಾರತವನ್ನು ಪ್ರತಿನಿಧಿಸುವ ಅವರ ಕೊಡುಗೆಯನ್ನು ಗುರುತಿಸಲು ಹಾಗೂ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷದ ಜನವರಿ 9 ರಂದು ಪ್ರವಾಸಿ ಭಾರತೀಯ ದಿನವನ್ನು ಆಚರಿಸಲಾಗುತ್ತಿದೆ.

2003 ರಲ್ಲಿ ಆರಂಭವಾದ ಈ ದಿನಾಚರಣೆಯನ್ನು, ದೇಶದ ಯಾವುದಾದರೊಂದು ಪ್ರಮುಖ ನಗರದಲ್ಲಿ ಸಮಾವೇಶ ನಡೆಸುವ ಮೂಲಕ ಆಚರಿಸಲಾಗುತ್ತದೆ. 2003ರ ಸಮಾವೇಶ ದೆಹಲಿಯಲ್ಲಿ ನಡೆದಿದ್ದರೇ, 2019ರ ಸಮಾವೇಶ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ನಡೆದಿತ್ತು. 2017ರಲ್ಲಿ ಬೆಂಗೂರಿನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈವರಗೆ ಒಟ್ಟು 16 ಸಮಾವೇಶಗಳು ನಡೆದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications