ಪ್ರಧಾನ ಮಂತ್ರಿ ಮೋದಿ ಉದ್ಘಾಟಿಸಿದ ಕಾಶಿ ತಮಿಳು ಸಂಗಮಂ ವಿಶೇಷತೆ ಏನು?
ನವದೆಹಲಿ, ನವೆಂಬರ್ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ನಡೆಯುವ ಕಾಶಿ ತಮಿಳು ಸಂಗಮಂ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಏನಿದು ಕಾಶಿ ತಮಿಳು ಸಂಗಮಂ ಇಲ್ಲಿದೆ ವಿವರ
ದೇಶದ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಸಾರುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ತಮಿಳುನಾಡಿನಿಂದ 2,500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು.
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಯವರು, ''ನದಿಗಳ ಸಂಗಮವೇ ಆಗಿರಲಿ, ಸಿದ್ಧಾಂತವೇ ಆಗಿರಲಿ, ವಿಜ್ಞಾನವೇ ಆಗಿರಲಿ ಅಥವಾ ಜ್ಞಾನವೇ ಆಗಿರಲಿ ದೇಶದಲ್ಲಿ ಸಂಗಮಗಳ ಮಹತ್ವ ಕುರಿತು ಮಾತನಾಡಿದ ಪ್ರಧಾನ ಮಂತ್ರಿಯವರು, ಭಾರತದಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪ್ರತಿಯೊಂದು ಸಂಗಮವನ್ನು ಆಚರಿಸಲಾಗುತ್ತದೆ. ವಾಸ್ತವವಾಗಿ, ಇದು ಭಾರತದ ಶಕ್ತಿ ಮತ್ತು ಗುಣಲಕ್ಷಣಗಳ ಆಚರಣೆಯಾಗಿದೆ. ಇದರಿಂದಾಗಿ ಕಾಶಿ ತಮಿಳು ಸಂಘವನ್ನು ಅನನ್ಯವಾಗಿಸುತ್ತದೆ'' ಎಂದು ಹೇಳಿದರು.
ಕಾಶಿ ಭಾರತದ ಸಾಂಸ್ಕೃತಿಕ ರಾಜಧಾನಿಯಾದರೆ, ತಮಿಳುನಾಡು ಮತ್ತು ತಮಿಳು ಸಂಸ್ಕೃತಿ ಭಾರತದ ಪ್ರಾಚೀನತೆ ಮತ್ತು ಹೆಮ್ಮೆಯ ಕೇಂದ್ರವಾಗಿದೆ. ಗಂಗಾ ಮತ್ತು ಯಮುನಾ ನದಿಗಳ ಸಂಗಮಕ್ಕೆ ಒಂದು ಹೋಲಿಕೆಯನ್ನು ಮಾಡಿದ ಪ್ರಧಾನ ಮಂತ್ರಿಯವರು, ಕಾಶಿ ತಮಿಳು ಸಂಗಮವು ಅಷ್ಟೇ ಪವಿತ್ರವಾಗಿದ್ದು, ಅದು ಅನಂತ ಅವಕಾಶಗಳು ಮತ್ತು ಶಕ್ತಿಯನ್ನು ತನ್ನಲ್ಲಿಯೇ ಆವರಿಸಿಕೊಂಡಿದೆ. ಈ ಮಹತ್ವದ ಸಭೆಗಾಗಿ ಶಿಕ್ಷಣ ಸಚಿವಾಲಯ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಪ್ರಧಾನ ಮಂತ್ರಿಯವರು ಅಭಿನಂದಿಸಿದರು.
ಕಾಶಿ ಮತ್ತು ತಮಿಳುನಾಡು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಕಾಲಾತೀತ ಕೇಂದ್ರಗಳಾಗಿವೆ. ಸಂಸ್ಕೃತ ಮತ್ತು ತಮಿಳು ಎರಡೂ ಅಸ್ತಿತ್ವದಲ್ಲಿರುವ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿವೆ. ಕಾಶಿಯಲ್ಲಿ ನಮಗೆ ಬಾಬಾ ವಿಶ್ವನಾಥನಿದ್ದರೆ, ತಮಿಳುನಾಡಿನಲ್ಲಿ ರಾಮೇಶ್ವರಂನ ಆಶೀರ್ವಾದವಿದೆ. ಕಾಶಿ ಮತ್ತು ತಮಿಳುನಾಡು ಎರಡೂ ಶಿವನಲ್ಲಿ ಮುಳುಗಿವೆ. ಅದು ಸಂಗೀತವೇ ಆಗಿರಲಿ, ಸಾಹಿತ್ಯ ಅಥವಾ ಕಲೆಯೇ ಆಗಿರಲಿ, ಕಾಶಿ ಮತ್ತು ತಮಿಳುನಾಡು ಯಾವಾಗಲೂ ಕಲೆಯ ಮೂಲಗಳಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು.

ಶ್ರೇಷ್ಠ ಭಾರತದ ಭಾವನೆ ಸೂಚಿಸುತ್ತದೆ
ಕಾಶಿ ಹಾಗೂ ತಮಿಳುನಾಡು ಈ ಎರಡೂ ಸ್ಥಳಗಳನ್ನು ಭಾರತದ ಅತ್ಯುತ್ತಮ ಆಚಾರ್ಯರ ಜನ್ಮಸ್ಥಳ ಮತ್ತು ಕಾರ್ಯಸ್ಥಳ ಎಂದು ಗುರುತಿಸಲಾಗಿದೆ. ಕಾಶಿ ಮತ್ತು ತಮಿಳುನಾಡಿನಲ್ಲಿ ಇದೇ ರೀತಿಯ ಚೈತನ್ಯವನ್ನು ಅನುಭವಿಸಬಹುದು. ಇಂದಿಗೂ ಕಾಶಿ ಯಾತ್ರೆಯ ಪ್ರಸ್ತುತತೆಯು ಸಾಂಪ್ರದಾಯಿಕ ತಮಿಳು ವಿವಾಹ ಮೆರವಣಿಗೆಯ ಸಮಯದಲ್ಲಿ ಬರುತ್ತದೆ. ತಮಿಳುನಾಡಿನಿಂದ ಕಾಶಿಯ ಬಗ್ಗೆ ಕೊನೆಯಿಲ್ಲದ ಪ್ರೀತಿಯು ನಮ್ಮ ಪೂರ್ವಜರ ಜೀವನ ವಿಧಾನವಾದ ಏಕ ಭಾರತ ಶ್ರೇಷ್ಠ ಭಾರತದ ಭಾವನೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಪಟ್ಟವೀರಮ್ ಶಾಸ್ತ್ರಿಯವರನ್ನು ಮರೆಯಲ್ಲ
ತಮಿಳುನಾಡು ಮೂಲದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಬಿಎಚ್.ಯುನ ಕುಲಪತಿಯಾಗಿದ್ದರು. ತಮಿಳುನಾಡಿನಲ್ಲಿ ತಮ್ಮ ಬೇರುಗಳನ್ನು ಹೊಂದಿದ್ದರೂ ಕಾಶಿಯಲ್ಲಿ ವಾಸಿಸುತ್ತಿದ್ದ ವೈದಿಕ ವಿದ್ವಾಂಸ ರಾಜೇಶ್ವರ್ ಶಾಸ್ತ್ರಿಯವರನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು. ಕಾಶಿಯ ಹನುಮಾನ್ ಘಾಟ್ ನಲ್ಲಿ ವಾಸಿಸುತ್ತಿದ್ದ ಪಟ್ಟವೀರಮ್ ಶಾಸ್ತ್ರಿ ಅವರನ್ನು ಕಾಶಿಯ ಜನರು ಸಹ ಮರೆಯುವುದಿಲ್ಲ ಎಂದು ಅವರು ಹೇಳಿದರು.

ಹನುಮಾನ್ ಘಾಟ್ ತಮಿಳರ ವಾಸ
ಹರಿಶ್ಚಂದ್ರ ಘಾಟ್ನ ದಡದಲ್ಲಿರುವ ತಮಿಳಿನ ದೇವಾಲಯವಾದ ಕಾಶಿ ಕಾಮ ಕೋಟೇಶ್ವರ ಪಂಚಾಯತ್ ಮಂದಿರ ಮತ್ತು ಕೇದಾರ್ ಘಾಟ್ನಲ್ಲಿರುವ ಇನ್ನೂರು ವರ್ಷಗಳಷ್ಟು ಹಳೆಯದಾದ ಕುಮಾರಸ್ವಾಮಿ ಮಠ ಮತ್ತು ಮಾರ್ಕಂಡೆ ಆಶ್ರಮದ ಬಗ್ಗೆ ಉಲ್ಲೇಖಿಸಿದರು. ತಮಿಳುನಾಡಿನ ಅನೇಕ ಜನರು ಕೇದಾರ್ ಘಾಟ್ ಮತ್ತು ಹನುಮಾನ್ ಘಾಟ್ ದಡದ ಬಳಿ ವಾಸಿಸುತ್ತಿದ್ದಾರೆ. ಹಲವಾರು ತಲೆಮಾರುಗಳಿಂದ ಕಾಶಿಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಮಹಾನ್ ಕವಿ ಮತ್ತು ಕ್ರಾಂತಿಕಾರಿ ಸುಬ್ರಮಣ್ಯ ಭಾರತಿ ಅವರು ತಮಿಳುನಾಡು ಮೂಲದವರಾಗಿದ್ದರೂ ಕಾಶಿಯಲ್ಲಿ ಅನೇಕ ವರ್ಷಗಳ ಕಾಲ ನೆಲೆಸಿದ್ದರು ಎಂದರು.

ನೈಸರ್ಗಿಕ ಸಾಂಸ್ಕೃತಿಕ ಏಕತೆ ಹೊಂದಿರುವ ರಾಷ್ಟ್ರ
ಆಜಾದಿ ಕಾ ಅಮೃತ್ ಕಾಲ್ ಅಮೃತ ಕಾಲದಲ್ಲಿ ನಮ್ಮ ನಿರ್ಣಯಗಳು ಇಡೀ ದೇಶದ ಏಕತೆಗೆ ನೆರವೇರುತ್ತವೆ. ಭಾರತವು ಸಾವಿರಾರು ವರ್ಷಗಳಿಂದ ನೈಸರ್ಗಿಕ ಸಾಂಸ್ಕೃತಿಕ ಏಕತೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಬೆಳಗ್ಗೆ ಎದ್ದು 12 ಜ್ಯೋತಿರ್ಲಿಂಗಗಳನ್ನು ಸ್ಮರಿಸುವ ಸಂಪ್ರದಾಯದ ಮೇಲೆ ಬೆಳಕು ಚೆಲ್ಲಿದ ಪ್ರಧಾನ ಮಂತ್ರಿಯವರು, ದೇಶದ ಆಧ್ಯಾತ್ಮಿಕ ಏಕತೆಯನ್ನು ಸ್ಮರಿಸುವ ಮೂಲಕ ನಾವು ನಮ್ಮ ದಿನವನ್ನು ಪ್ರಾರಂಭಿಸುತ್ತೇವೆ. ಸಾವಿರಾರು ವರ್ಷಗಳ ಈ ಸಂಪ್ರದಾಯ ಮತ್ತು ಪರಂಪರೆಯನ್ನು ಬಲಪಡಿಸುವ ಪ್ರಯತ್ನಗಳ ಕೊರತೆಯ ಬಗ್ಗೆಯೂ ಮೋದಿ ಮಾತನಾಡಿದರು.

ಕೇದಾರೇಶ್ವರ ಮಂದಿರ ನಿರ್ಮಿಸಿದ ಗುರುಪರ್
ಭಾಷೆಯನ್ನು ಎಲ್ಲೆಮೀರಿ ಮತ್ತು ಬೌದ್ಧಿಕ ಅಂತರವನ್ನು ಮೀರಿದ ಈ ಮನೋಭಾವದ ಮೂಲಕವೇ ಸ್ವಾಮಿ ಕುಮಾರ ಗುರುಪರ್ ಅವರು ಕಾಶಿಗೆ ಬಂದು ಅದನ್ನು ತಮ್ಮ ಕರ್ಮಭೂಮಿಯನ್ನಾಗಿಸಿ ಕಾಶಿಯಲ್ಲಿ ಕೇದಾರೇಶ್ವರ ಮಂದಿರವನ್ನು ನಿರ್ಮಿಸಿದರು. ನಂತರ, ಅವರ ಶಿಷ್ಯರು ಕಾವೇರಿ ನದಿಯ ದಡದಲ್ಲಿರುವ ತಂಜಾವೂರಿನಲ್ಲಿ ಕಾಶಿ ವಿಶ್ವನಾಥ ದೇವಾಲಯವನ್ನು ನಿರ್ಮಿಸಿದರು. ತಮಿಳು ರಾಜ್ಯದ ಗೀತೆಯನ್ನು ಬರೆದ ಮನೋನ್ಮಣಿಯಂ ಸುಂದರನಾರ್ ಅವರಂತಹ ವ್ಯಕ್ತಿಗಳನ್ನು ಉಲ್ಲೇಖಿಸುವ ಮೂಲಕ ತಮಿಳು ವಿದ್ವಾಂಸರು ಮತ್ತು ಕಾಶಿ ನಡುವಿನ ಸಂಬಂಧವನ್ನು ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು.

ರಾಧಾಕೃಷ್ಣನ್ವರೆಗೆ ಅರ್ಥಮಾಡಿಕೊಳ್ಳದೆ ತತ್ವಶಾಸ್ತ್ರ ಅರ್ಥವಾಗಲ್ಲ
ಉತ್ತರ ಮತ್ತು ದಕ್ಷಿಣವನ್ನು ಬೆಸೆಯುವಲ್ಲಿ ರಾಜಾಜಿಯವರು ರಚಿಸಿದ ರಾಮಾಯಣ ಮತ್ತು ಮಹಾಭಾರತದ ಪಾತ್ರವನ್ನು ಪ್ರಧಾನ ಮಂತ್ರಿಯವರು ಸ್ಮರಿಸಿದರು. ರಾಮಾನುಜಾಚಾರ್ಯರು, ಶಂಕರಾಚಾರ್ಯರು, ರಾಜಾಜಿ ಅವರಂತಹ ದಕ್ಷಿಣ ಭಾರತದ ವಿದ್ವಾಂಸರನ್ನು ಸರ್ವಪಲ್ಲಿ ರಾಧಾಕೃಷ್ಣನ್ವರೆಗೆ ಅರ್ಥಮಾಡಿಕೊಳ್ಳದೆ, ನಾವು ಭಾರತೀಯ ತತ್ವಶಾಸ್ತ್ರವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದು ನನ್ನ ಅನುಭವ ಎಂದು ಮೋದಿ ಹೇಳಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಸಂಸದರಾದ ಇಳಯರಾಜಾ ಮೊದಲಾದವರು ಉಪಸ್ಥಿತರಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications