ಶಿಕ್ಷಕಿಯನ್ನ ಥಳಿಸಿದ ಪ್ರಾಂಶುಪಾಲರು, ಬೆತ್ತಲೆಯಾಗಿ ಓಡಾಡಿದ ವೈದ್ಯ- ವಿಡಿಯೋ ವೈರಲ್
ಉತ್ತರಪ್ರದೇಶದಲ್ಲಿ ಮಹಿಳಾ ಶಿಕ್ಷಕಿಯನ್ನ ಪ್ರಾಂಶುಪಾಲರು ಥಳಿಸಿದ ಘಟನೆ ನಡೆದರೆ, ಮಹಾರಾಷ್ಟ್ರದಲ್ಲಿ ವೈದ್ಯನೊಬ್ಬ ಬೆತ್ತಲೆಯಾಗಿ ಓಡಾಡಿದ ವಿಡಿಯೋ ವೈರಲ್ ಆಗಿದೆ. ಗಾಜಿಯಾಬಾದ್ನ ಶಾಲೆಯ ಪ್ರಾಂಶುಪಾಲರೊಬ್ಬರು ಮಹಿಳಾ ಶಿಕ್ಷಕಿಯನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಘಾತಕಾರಿ ವಿಡಿಯೋ ಇಂಟರ್ನೆಟ್ನಲ್ಲಿ ಭಾರೀ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಮಹಿಳಾ ಶಿಕ್ಷಕಿಯ ಮೇಲೆ ಶಾಲೆಯ ಪ್ರಾಂಶುಪಾಲರು ಹಲ್ಲೆ ಮಾಡುವುದು ಕಂಡು ಬಂದಿದೆ. ಶಿಕ್ಷಕಿಯ ಕೂದಲನ್ನು ಎಳೆದಾಡಿದ್ದಾರೆ ಮತ್ತು ಅವಳ ಮೇಲೆ ಜಾತಿ ನಿಂದನೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆಯನ್ನು ಅಂಶಿಕಾ ಎಂದು ಗುರುತಿಸಲಾಗಿದ್ದು, ಈ ಸಂಸ್ಥೆಯಲ್ಲಿ ಕಂಪ್ಯೂಟ್ ಶಿಕ್ಷಕಿಯಾಗಿದ್ದಾರೆ. ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡ ನಂತರ ಶಾಲೆಯ ಪ್ರಾಂಶುಪಾಲರ ಆಘಾತಕಾರಿ ಕೃತ್ಯವು ಬೆಳಕಿಗೆ ಬಂದಿದೆ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನದಂದು ಈ ವಿಡಿಯೋ ವೈರಲ್ ಆಗಿದೆ.
ಆರೋಪಿ ಪ್ರಾಂಶುಪಾಲರಾದ ಪೂನಂ ಕುಶ್ವಾಹಾ ಅವರು ಗಾಜಿಯಾಬಾದ್ನ ಮಸೂರಿಯಲ್ಲಿರುವ ಜೈಪ್ರಕಾಶ್ ನಾರಾಯಣ್ ಸರ್ವೋದಯ ವಿದ್ಯಾಲಯದ ಶಿಕ್ಷಕಿ ಅಂಶಿಕಾ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಕುಶ್ವಾಹಾ ಅವರು ಶಿಕ್ಷಕಿ ಮೇಲೆ ಜಾತಿ ನಿಂದನೆಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.
देखिए विद्यालय में मारपीट करती दो महिलाओं का वीडियो वायरल हुआ
— Lavely Bakshi (@lavelybakshi) March 8, 2024
बताया जा रहा है गाज़ियाबाद जय प्रकाश नारायण सर्वोदय विद्यालय की प्रधानाचार्या पर कंप्यूटर ऑपरेटर ने मारपीट का आरोप लगाया,विवाद कंप्यूटर क्लास लेने को लेकर हुआ था #वायरलवीडियो #up pic.twitter.com/yZVSF89via
ಆಘಾತಕಾರಿ ಘಟನೆ ಬಳಿಕ ಪ್ರಾಂಶುಪಾಲರು ಅಂಶಿಕಾ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ಅಂಶಿಕಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಪೊಲೀಸರು ಆರೋಪಿಯ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಂಶಿಕಾ, ಹೊರಗುತ್ತಿಗೆ ಏಜೆನ್ಸಿ ಮೂಲಕ ತನಗೆ ಕೆಲಸ ಸಿಕ್ಕಿದ್ದು, ಇದೀಗ ಪ್ರಾಂಶುಪಾಲರ ದೂರಿನ ಮೇರೆಗೆ ತನ್ನನ್ನು ವಜಾಗೊಳಿಸಲಾಗಿದೆ ಎಂದಿದ್ದಾರೆ.

ಏನಿದು ಪ್ರಕರಣ?
ಪೊಲೀಸರ ಪ್ರಕಾರ, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿರುವ ಅಂಶಿಕಾ ಅವರು ಪ್ರಾಂಶುಪಾಲ ಕುಶ್ವಾಹಾ ವಿರುದ್ಧ ದೂರು ದಾಖಲಿಸಿದ್ದಾರೆ. ಮಾರ್ಚ್ 4 ರಂದು ಕುಶ್ವಾಹಾ ತಮ್ಮ ಬದಲಿಗೆ ತರಗತಿಗೆ ಕಲಿಸಲು ಕೇಳಿದರು. ಈ ವಿಷಯವನ್ನು ಬೋಧಿಸಲು ಅರ್ಹತೆ ಇಲ್ಲದ ಕಾರಣ ತರಗತಿಯನ್ನು ತೆಗೆದುಕೊಳ್ಳಲು ನಾನು ನಿರಾಕರಿಸಿದ್ದೇನೆ. ನಂತರ ಅವಳು ತನ್ನ ಆಫೀಸ್ ಬೂತ್ಗೆ ಹೋಗಿ ತನ್ನ ಕಂಪ್ಯೂಟರ್ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದಳು. ಇದ್ದಕ್ಕಿದ್ದಂತೆ ಕುಶ್ವಾಹ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ. ನಂತರ ಈ ಗಲಾಟೆ ನಡೆದಿದೆ. ಹೀಗಾಗಿ ನಾನು ಪೂನಂ ಕುಶ್ವಾಹಾ ವಿರುದ್ಧ ಉನ್ನತ ಅಧಿಕಾರಿಗೆ ದೂರು ನೀಡಿದ್ದೇನೆ ಎಂದು ಅಂಶಿಕಾ ಹೇಳಿದರು.
ಪ್ರಾಂಶುಪಾಲರ ಆದೇಶಗಳನ್ನು ಪಾಲನೆ ಮಾಡದಿದ್ದಕ್ಕಾಗಿ ಅಂಶಿಕಾ ಅವರನ್ನು ನಿಂದಿಸಿದರು. ಪ್ರಾಂಶುಪಾಲರು ಆಕೆಗೆ ಥಳಿಸಿದ್ದಾರೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತೆ ಅಂಶಿಕಾ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯನ್ನು ಯಾರೋ ಚಿತ್ರೀಕರಿಸಿದ್ದು, ಆ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅದು ವೈರಲ್ ಆಗಿದೆ. ಇದು ಆರೋಪಿ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರನ್ನು ಪ್ರೇರೇಪಿಸಿದೆ.
ಪ್ರಿನ್ಸಿಪಾಲ್ ವಿರುದ್ಧ ಎಫ್ಐಆರ್
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಕುಶ್ವಾಹಾ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಶಿಕ್ಷಕರ ದೂರಿನ ಆಧಾರದ ಮೇಲೆ ನಾವು ಶಾಲೆಯ ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ'' ಎಂದು ಮಸೂರಿ ಸಹಾಯಕ ಪೊಲೀಸ್ ಆಯುಕ್ತ ನರೇಶ್ ಕುಮಾರ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಆಸ್ಪತ್ರೆಯೊಳಗೆ ಬೆತ್ತಲೆಯಾಗಿ ಓಡಾಡಿದ ವೈದ್ಯ
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಬೆತ್ತಲೆಯಾಗಿ ಸುತ್ತಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೈದ್ಯರು ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ವೈದ್ಯರು ಮಾದಕ ವ್ಯಸನಿಯಾಗಿದ್ದು, ಬಿಡ್ಕಿನ್ನ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವೈದ್ಯರು ತಮ್ಮ ದೇಹದ ಮೇಲೆ ಯಾವುದೇ ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಅವನು ಶೌಚಾಲಯದ ಒಳಗೆ ಹೋಗುವ ಮೊದಲು ಕಾರಿಡಾರ್ನಲ್ಲಿ ಬಟ್ಟೆಯನ್ನು ಬೀಸುವುದನ್ನು ಸಹ ಕಾಣಬಹುದು.
ವಿಲಕ್ಷಣ ಘಟನೆಯ ಕುರಿತು ಪ್ರತಿಕ್ರಿಯಿಸಿದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥ ಡಾ ದಯಾನಂದ ಮೋತಿಪಾವ್ಲೆ, ಈ ವಿಷಯವು ತನಿಖೆಯಲ್ಲಿದೆ ಮತ್ತು ವೈದ್ಯರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಲಾಗಿದೆ ಎಂದು ಇಂಡಿಯಾ ಟುಡೇ ಟಿವಿಗೆ ತಿಳಿಸಿದರು. ಈ ಕುರಿತು ವೈದ್ಯಕೀಯ ಅಧೀಕ್ಷಕರಿಗೆ ವರದಿ ಸಲ್ಲಿಸಿರುವುದಾಗಿಯೂ ಮೋತಿಪಾವ್ಲೆ ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications