ಕನ್ನಡ ಪರ ಹೋರಾಟದ ಶಕ್ತಿ ಎಂ ಚಿದಾನಂದ ಮೂರ್ತಿ
ಕನ್ನಡ ಪರ ಹೋರಾಟದ ಶಕ್ತಿಯಾಗಿದ್ದ ಸಾಹಿತಿ, ಹಿರಿಯ ಲೇಖಕ, ವಿದ್ವಾಂಸ, ಸಂಶೋಧಕ ಎಂ ಚಿದಾನಂದ ಮೂರ್ತಿ ಅವರ ನಿಧನದಿಂದ ಕನ್ನಡದ ದನಿ ಸ್ತಬ್ಧವಾಗಿದೆ. ಕನ್ನಡ ನೆಲ, ಜಲ, ಭಾಷೆ ಉಳಿಸಿ, ಬೆಳೆಸಿಕೊಂಡು ಬಂದಿದ್ದ ಪರಂಪರೆಯ ಕೊಂಡಿ ಕಳಚಿದೆ. ಶ್ವಾಸಕೋಶದ ಸೋಂಕು ಸಮಸ್ಯೆಯಿಂದ ಬಳಲುತ್ತಿದ್ದ ಎಂ.ಚಿದಾನಂದಮೂರ್ತಿ ತಮ್ಮ 88ನೇ ವರ್ಷದಲ್ಲಿ ಇಅಹಲೋಕ ಯಾತ್ರೆ ಮುಗಿಸಿದ್ದಾರೆ. ಮಗ ವಿನಯ್ ಕುಮಾರ್, ಮಗಳು ಶೋಭಾ ಸೇರಿದಂತೆ ಅಪಾರ ಶಿಷ್ಯ ಬಳಗ, ಅಭಿಮಾನಿಗಳನ್ನು ತೊರೆದಿದ್ದಾರೆ.
ಹಂಪಿಯ ಸ್ಮಾರಕಗಳನ್ನು ಉಳಿಸಲು ಹಾಗು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಗಳಿಸಲು ನಡೆಸಿದ ಹೋರಾಟ ಸದಾ ಸ್ಮರಣೀಯ.ಎಂ ಚಿದಾನಂದ ಮೂರ್ತಿ ಅವರ ವ್ಯಕ್ತಿಚಿತ್ರದ ಸಂಕ್ಷಿಪ್ತ ಪರಿಚಯ.
ಚಿದಾನಂದಮೂರ್ತಿಗಳು 1931ನೇ ಮೇ 10ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ(ಈಗ ದಾವಣಗೆರೆಯಲ್ಲಿದೆ) ತಾಲ್ಲೂಕಿನ ಹಿರೆಕೋಗಲೂರಿನಲ್ಲಿ ಹುಟ್ಟಿದರು. ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಭ್ಯಾಸ ಕೋಗಲೂರು, ಸಂತೆಬೆನ್ನೂರುಗಳಲ್ಲಿ ನಡೆಸಿದರು. ಇಂಟರ್ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಅವರು ಹತ್ತನೆಯ ಸ್ಥಾನಗಳಿಸಿದರು. ಆದರೆ ಮೆಡಿಕಲ್ ಇಂಜಿನಿಯರಿಂಗ್ ಸೇರದೆ ಕನ್ನಡ ಆನರ್ಸ್ ಸೇರಿದರು.
ಸುತ್ತೂರು ಸಂಸ್ಥಾನದ ಉಚಿತ ವಿದ್ಯಾರ್ಥಿನಿಲಯದ ಪೋಷಣೆಯಲ್ಲಿ ಪ್ರಥಮ ವರ್ಗ, ಪ್ರಥಮ ಶ್ರೇಣಿ ಅಲ್ಲದೆ ಆಲ್ ಆನರ್ಸ್ ಚಿನ್ನದ ಪದಕ ಸಹಾ ಪಡೆದರು.

ವ್ಯಾಸಂಗದ ಜೊತೆಗೆ ವೃತ್ತಿ ಬದುಕು
ವ್ಯಾಸಂಗದ ಜೊತೆಗೆ ವೃತ್ತಿ ಬದುಕು: ಆನರ್ಸ್ ಪದವಿ ಪಡೆದ ಬಳಿಕ ಎರಡು ವರ್ಷಗಳ ಕಾಲ ಬೆಂಗಳೂರು, ತುಮಕೂರು, ಕೋಲಾರದ ಪದವಿ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರಾದರು. ನಂತರ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿಯನ್ನು ಪ್ರಥಮ ಸ್ಥಾನದೊಂದಿಗೆ 1957ರಲ್ಲಿ ಗಳಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಇವರು ಕುವೆಂಪು ಪುತೀನ ಹಾಗು ರಾಘವಾಚಾರಂತ ಕನ್ನಡದ ಮಹಾ ಸಾಹಿತಿಗಳ ಪ್ರಭಾವಕ್ಕೊಳಗಾದವರು. ಎಂ.ಎ ಓದುವಾಗಲೇ ಡಿ.ಎಲ್. ನರಸಿಂಹಾಚಾರ್ಯರ ಸೂಚನೆಯ ಮೇರೆಗೆ ಪಂಪನಿಗೆ ಹಿನ್ನೆಲೆಯಾಗಿದ್ದ ಸಾಮಾಜಿಕ ಬದುಕನ್ನು ಶಾಸನಗಳನ್ನು ಆಧರಿಸಿ ಪುನಃರಚಿಸುವ ಪ್ರಯತ್ನಕ್ಕೆ ಮೂರ್ತಿಗಳು ತೊಡಗಿದರು. ಮುಂದೆ ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ‘ಪಂಪಕವಿ ಮತ್ತು ಮೌಲ್ಯಪ್ರಸಾರ'. ಆ ಮೂಲಕ ಶಾಸನಕ್ಷೇತ್ರದೆಡೆಗೆ ಹೊರಳಿದ ಮೂರ್ತಿಗಳು ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ನಿಬಂಧ ಸಿದ್ಧಪಡಿಸಿದರು. 1964ರಲ್ಲಿ ಇದೇ ವಿಷಯದ ಮೇಲೆ ಪಿ.ಎಚ್.ಡಿ ಪದವಿ ಪಡೆದರು.
* 1957ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಅಧ್ಯಾಪಕರಾದರು.
* 1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಅಧ್ಯಾಪಕರಾದರು.
* 1968ರವರೆಗೆ ಅಲ್ಲಿ ಅಧ್ಯಾಪಕರಾಗಿ, ಕನ್ನಡ ರೀಡರ್ ಆಗಿದ್ದು ಬಳಿಕ ಬೆಂಗಳೂರು ವಿಶ್ವವಿದ್ಯಾಲಯವನ್ನು ಸೇರಿದರು. ಚಿದಾನಂದ ಮೂರ್ತಿ ಅವರು ಬೆಂಗಳೂರು ವಿಶ್ವವಿದ್ಯಾಲದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದರು.
* 1990ರ ಅಕ್ಟೋಬರ್ 10ರಂದು ಸ್ವಯಂಸೇವಾ ನಿವೃತ್ತಿ ಪಡೆದರು.

ಸಂಶೋಧನೆಗಾಗಿ ನಿರಂತರ ಹುಡುಕಾಟ
* ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಇಟಲಿ, ಗ್ರೀಸ್, ಈಜಿಪ್ಟ್, ಥೈಲಾಂಡ್, ಜಪಾನ್, ಹವಾಯ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳನ್ನು ಅವರು ಸುತ್ತಿದ್ದಾರೆ. ಸಂಶೋಧನೆಗೆ, ಕನ್ನಡದ ಕಾರಣಕ್ಕೆ ಕರ್ನಾಟಕದ ಬೇರೆ ಬೇರೆ ಪ್ರಾಂತ್ಯಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು.
* ಬರ್ಕ್ಲಿ, ಫಿಲಡೆಲ್ಫಿಯ, ಸ್ಟಾನ್ಫೋರ್ಡ್ ಮುಂತಾದ ಹಲವಾರು ವಿಶ್ವವಿದ್ಯಾಲಯಗಳು ಮತ್ತು ವಿಶ್ವಮಟ್ಟದ ಐತಿಹಾಸಿಕ ಬಾಷಾವಿಜ್ಞಾನ ಸಮ್ಮೇಳನಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಇವರು ಕನ್ನಡ ಶಕ್ತಿ ಕೇಂದ್ರದೊಂದಿಗೆ ಸಹ ಕೆಲಸ ಮಾಡಿದ್ದಾರೆ. ಚಿ. ಮೂ ರವರು ಕನ್ನಡ ಭಾಷೆ ಹಾಗು ಕರ್ನಾಟಕದ ಇತಿಹಾಸದ ಕುರಿತು ಹಲವಾರು ಪುಸ್ತಕಗಳನು ಪ್ರಕಟಿಸಿದ್ದಾರೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ಸಂಶೋಧನದಲ್ಲಿ ಮಾರ್ಗದರ್ಶನ ನೀಡಿದ್ದಾರೆ.

ಹಲವು ಸಂಶೋಧನಾ ಕೃತಿ ರಚಿಸಿದ್ದಾರೆ
ಕೃತಿ: ಚಿದಾನಂದಮೂರ್ತಿಗಳು ಇಪ್ಪತ್ತೈದಕ್ಕೂ ಹೆಚ್ಚು ಪುಸ್ತಕಗಳನ್ನೂ, ನಾನೂರಕ್ಕೂ ಹೆಚ್ಚು ಸಂಪ್ರಬಂಧಗಳನ್ನೂ ಪ್ರಕಟಿಸಿದ್ದಾರೆ. ಭಾಷೆ, ವ್ಯಾಕರಣ, ಸ್ಥಳನಾಮ, ಛಂದಸ್ಸು, ಗ್ರಂಥ ಸಂಪಾದನೆ, ಸಾಹಿತ್ಯ ಚರಿತ್ರೆ, ಜಾನಪದ, ಶಾಸನ, ಕರ್ಣಾಟಕ ಇತಿಹಾಸ -ಸಂಸ್ಕೃತಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಂಶೋಧನೆ ಕೈಗೊಂಡಿದ್ದಾರೆ.
ತೀ. ನಂ. ಶ್ರೀಕಂಠಯ್ಯ ಅವರು ಚಿದಾನಂದಮೂರ್ತಿಗಳನ್ನು "ಕನ್ನಡ ಭಾಷಾ ಸಾಹಿತ್ಯಗಳ ನೈಷ್ಠಿಕ ವಿದ್ಯಾರ್ಥಿ" ಎಂದು ಮೆಚ್ಚಿದ್ದಾರೆ. ಅದರ ಸಮರ್ಥನೆ ಎಂಬಂತೆ ಮೂರ್ತಿಗಳು ಕನ್ನಡ ಸಾಹಿತ್ಯ ಚರಿತ್ರೆಯ ಕ್ಷೇತ್ರದಲ್ಲಿ ವಿಫುಲವಾಗಿ ಕೆಲಸಮಾಡಿದ್ದಾರೆ. ಕವಿರಾಜಮಾರ್ಗ ಕಾಲದ ಕನ್ನಡ ಸಾಹಿತ್ಯದಿಂದ ಹಿಡಿದು ಮುದ್ದಣ್ಣನವರೆಗೆ ಅವರ ಬರವಣಿಗೆ ವ್ಯಾಪಿಸಿದೆ.
1960ರ ದಶಕಗಳಲ್ಲಿ ತಾವು ಪ್ರಕಟಿಸಿದ ಹಲವಾರು ಲೇಖನಗಳಲ್ಲೇ ಉಂಬರಿ, ಇರ್, ಡುಂಡುಚಿ, ಅಮ್ಮ, ಅಬ್ಬೆ, ಅಲ್ಲಮ, ಬಾಮಬ್ಬೆ, ಶಬ್ದಗಳನ್ನು ಕನ್ನಡ ಭಾಷೆ, ವ್ಯಾಕರಣ, ಅವಸ್ಥಾಂತರಗಳ ಹಿನ್ನೆಲೆಯಲ್ಲಿ ಮೂರ್ತಿಗಳು ಪರಿಶೀಲಿಸಿದ್ದಾರೆ. ಅನಂತರ ''ಭಾಷಾ ವಿಜ್ಞಾನದ ಮೂಲತತ್ವಗಳು'' (1965), ''ವಾಗಾರ್ಥ'' (1981) ಎಂಬ ಎರಡು ಮುಖ್ಯವಾದ ಅವರ ಭಾಷಾಸಂಬಂಧವಾದ ಕೃತಿಗಳು ಪ್ರಕಟವಾದವು.

ಕೃತಿಗಳ ಪಟ್ಟಿ
ವೀರಶೈವ ಧರ್ಮ, ಭಾರತೀಯ ಸಂಸ್ಕ್ರತಿ ಪ್ರಕಾಶನ, 2000
ವಾಗರ್ಥ, ಬಪ್ಕೋ ಪ್ರಕಾಶನ, 1981
ವಕಾನ ಸಾಹಿತ್ಯ 1975
Sweetness and light Sahithigala Kalavidara Balaga, 1989 [microform]
ಸಂಶೋಧನೆ, 1967
ಸಂಶೋಧನಾ ತರಂಗ ಸರಸ, ಸಾಹಿತ್ಯ ಪ್ರಕಾಶನ, 1966
ಪುರಾಣ ಸೂರ್ಯಗ್ರಹಣ, ಐಬಿಎಚ್ ಪ್ರಕಾಶನ, 1982
ಪಾಂಡಿತ್ಯ ರಸ, ಕನ್ನಡ ವಿಶ್ವವಿದ್ಯಾಲಯ, 2000
ಸೂನ್ಯ ಸಂಪಾದನೆಯನ್ನು ಕುರಿತು. 1962
ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪ್ರಶ್ಯತೆ, ಕರ್ನಾಟಕ ವಿಶ್ವವಿದ್ಯಾಲಯ ಪ್ರಸಾರಾಂಗ, 1985
ಲಿಂಗಾಯತ ಅಧ್ಯಯನಗಳು, ವಾಗ್ದೇವಿ ಪುಸ್ತಕಗಳು, 1986
ಕವಿರಾಜಮಾರ್ಗಕ್ಕೆ ಹಿಂದಿನ ಕನ್ನಡ ಸಾಹಿತ್ಯ. 1973
ಕರ್ನಾಟಕ ಸಂಸ್ಕ್ರತಿ, ಕನ್ನಡ ಸಾಹಿತ್ಯ ಪರಿಷತ್ತು, 1991
ಕರ್ನಾಟಕ-ನೇಪಾಳ ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ, 2003
ಕನ್ನಡಾಯಣ, ಪ್ರಿಯದರ್ಶಿನಿ ಪ್ರಕಾಶನ, 1999
ಕನ್ನಡ ಶಾಸನಗಳ ಸಾಂಸ್ಕ್ರತಿಕ ಅಧ್ಯಯನ. 1966
ಹೊಸತು ಹೊಸತು, ಕನ್ನಡ ವಿಶ್ವವಿದ್ಯಾಲಯ,1993
ಗ್ರಾಮೀಣ, ಬಪ್ಕೋ ಪ್ರಕಾಶನ, 1977
ಚಿದಾನಂದ ಸಮಗ್ರ ಸಂಪುಟ, ಸಪ್ನಾ ಬುಕ್ ಹೌಸ್, 2002
ಬಸವಣ್ಣ, National Book Trust, India, 1972

ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯ
ಕನ್ನಡದ ಬಗೆಗಿನ ಚಿದಾನಂದಮೂರ್ತಿಗಳ ಚರಿತ್ರಾರ್ಹ ಸಾಧನೆ ಎಂದರೆ ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆ. 1985ರಲ್ಲಿ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡುವಾಗ ಮೂರ್ತಿಗಳಿಗೆ ಕನ್ನಡಕ್ಕೆ ಏಕೆ ಒಂದು ಪ್ರತ್ಯೇಕ ವಿಶ್ವವಿದ್ಯಾನಿಲಯ ಅಸ್ತಿತ್ವಕ್ಕೆ ಬರಬಾರದು ಎನಿಸಿತು. ಸಾಹಿತಿಗಳ, ಕಲಾವಿದರ ಬಳಗದ ಮೂಲಕ ಆಗಿನ ಮುಖ್ಯಮಂತ್ರಿ, ಸಚಿವಸಂಪುಟ, ಶಾಸಕರ ಮೇಲೆ ಒತ್ತಾಯ ತಂದು ಅದರ ಸ್ಥಾಪನೆಗೆ ಓಡಾಡಿ ಮುಂದಿನ ಒಂದೆರಡು ವರ್ಷಗಳಲ್ಲಿ ಅದರ ಕಾರ್ಯಾರಂಭಕ್ಕೆ ಕಾರಣರಾದರು. ಕರ್ನಾಟಕದ ಭಾಷೆ, ಸಾಹಿತ್ಯ, ಇತಿಹಾಸ, ಭೂಶೋಧ, ಲಲಿತಕಲೆ, ಸಮಾಜಶಾಸ್ತ್ರ, ಜಾನಪದ, ಅರ್ಥಶಾಸ್ತ್ರ, ವಿಜ್ಞಾನ, ಸಮೂಹ ಮಾಧ್ಯಮ ಮುಂತಾದವುಗಳ ಅಧ್ಯಯನ ನಡೆಯಲು ಪೂರ್ಣಪ್ರಮಾಣದ ಉನ್ನತ ವಿಶ್ವವಿದ್ಯಾನಿಲಯವನ್ನು ಅಸ್ತಿತ್ವಕ್ಕೆ ತಂದು ಕನ್ನಡದ ಕೆಲಸಗಳಿಗೆ ಹೊಸ ಚಾಲನೆ ಕೊಟ್ಟರು.
ಚಿದಾನಂದಮೂರ್ತಿ ಜಾನಪದ ಕ್ಷೇತ್ರದಲ್ಲೂ ಕೆಲಸ ಮಾಡಿದ್ದಾರೆ. ‘ಗ್ರಾಮೀಣ' ಹಾಗೂ ‘ಪಗರಣ ಮತ್ತು ಇತರ ಸಂಪ್ರಯದಾಯಗಳು' ಎಂಬ ಎರಡು ಪುಸ್ತಕಗಳಲ್ಲಿ ಅವರ ಈ ಸಂಬಂಧವಾದ ಸಂಪ್ರಬಂಧಗಳು ಸಂಗ್ರಹಗೊಂಡಿವೆ
-
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ












Click it and Unblock the Notifications