ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ.ಅಶೋಕ ಸೊನ್ನದ ಪರಿಚಯ
ಬಾಗಲಕೋಟೆ, ಅಕ್ಟೋಬರ್ 28: ಸ್ಥಳೀಯವಾಗಿ ಹುಂಡಿ ಕಾಣಿಕೆ ವೈದ್ಯ ಎಂದೇ ಜನಜನಿತರಾಗಿರುವ ಬಾಗಲಕೋಟೆ ನಗರದ ತಜ್ಞ ವೈದ್ಯ ಡಾ.ಅಶೋಕ ಸೊನ್ನದ ಅವರಿಗೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಸಂದಿದೆ.
ನಮ್ಮ ನಾಡು ಕಂಡ ಅಪರೂಪದ ಅನುಭವಿ ವೈದ್ಯ, ಸೇವೆಗೆ ನಿಂತ ಸಂತ, ಲಕ್ಷಾಂತರ ಜನರ ಆರೋಗ್ಯಕರ ಬದುಕಿನ ಸಂಜೀವಿನಿ ಎನಿಸಿದವರು ಡಾ.ಅಶೋಕ ಸೊನ್ನದ ಅವರು. ಶಿಕ್ಷಣ ಪ್ರೇಮ ಹಾಗೂ ಕೃಷಿ ಕುಟುಂಬದಲ್ಲಿ ಬೆಳೆದ ಇವರು ತವರು ನೆಲದ ಜನರ ಸೇವೆಗಾಗಿ ಉನ್ನತ ಅವಕಾಶ, ವೈಭೋಗದ ಜೀವನ, ಅಷ್ಟೇ ಅಲ್ಲದೆ ವೈಯಕ್ತಿಕ ಕುಟುಂಬವನ್ನು ತೊರೆದು ಬಂದ ತ್ಯಾಗಮೂರ್ತಿ ಎನಿಸಿದವರು.
ಮುಧೋಳ ತಾಲ್ಲೂಕು ಭಂಟನೂರಿನ ಡಾ.ಅಶೋಕ ಸೊನ್ನದ, ಅಮೆರಿಕದ ಮಿಚಿಗನ್ ರಾಜ್ಯದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 38 ವರ್ಷಗಳ ಕಾಲ ತಜ್ಞ ವೈದ್ಯರಾಗಿ ಕೆಲಸ ಮಾಡಿರುವ ಡಾ.ಅಶೋಕ ಸೊನ್ನದ 2010ರಲ್ಲಿ ಭಾರತಕ್ಕೆ ಮರಳಿದ್ದಾರೆ.

ಅಮೆರಿಕದಿಂದ ಬಂದ ನಂತರ ಹಳೇ ಬಾಗಲಕೋಟೆಯಲ್ಲಿ ತಾಯಿ ಪಾರ್ವತಿಬಾಯಿ ಹೆಸರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಡಾ.ಅಶೋಕ ಸೊನ್ನದ ಅವರ ಬಳಿ ಚಿಕಿತ್ಸೆ ಪಡೆದರೆ ಹಣ ಕೊಡುವಂತಿಲ್ಲ. ಅವರ ಸೇವೆ ತೃಪ್ತಿಯಾದರೆ ಮಾತ್ರ ಕ್ಲಿನಿಕ್ನ ಪ್ರವೇಶ ದ್ವಾರದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಗೆ ನಿಮ್ಮ ಕೈಲಾದಷ್ಟು ದುಡ್ಡು ಹಾಕಬಹುದಾಗಿದೆ.
ಹಣ ಹಾಕುವುದು ಕೂಡಾ ಕಡ್ಡಾಯವಲ್ಲ. ನೀವು ಹುಂಡಿಗೆ ಹಾಕಿದ ದುಡ್ಡನ್ನು ಅವರ ಉಪಯೋಗಕ್ಕೆ ಬಳಸುವುದಿಲ್ಲ. ಬದಲಿಗೆ ಮತ್ತೊಬ್ಬ ಬಡ ರೋಗಿಯ ಔಷಧಿ ಖರ್ಚಿಗೆ ಸಂದಾಯವಾಗುತ್ತದೆ.
ಡಾ.ಅಶೋಕ ಅವರ ಕ್ಲಿನಿಕ್ನಲ್ಲಿ ದಿನಕ್ಕೆ 10 ರೋಗಿಗಳಿಗೆ ಮಾತ್ರ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತದೆ. ರೋಗಿಯೊಬ್ಬರ ತಪಾಸಣೆ ಕಾರ್ಯ ಕನಿಷ್ಠ ಒಂದರಿಂದ ಒಂದೂವರೆ ಗಂಟೆ ನಡೆಯುತ್ತದೆ. ರೋಗಿ ಬಡವರಿದ್ದರೆ ಉಚಿತವಾಗಿ ಔಷಧಿ ನೀಡುತ್ತಾರೆ. ಮಧುಮೇಹ ಬಾರದಂತೆ ರೂಢಿಸಿಕೊಳ್ಳಬೇಕಾದ ಜೀವನ ಪದ್ಧತಿ ಬಗ್ಗೆ ಶಾಲಾ-ಕಾಲೇಜುಗಳಿಗೆ ತೆರಳಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಾರೆ.
ಭಂಟನೂರಿನ ರಾಮಪ್ಪ ಸೊನ್ನದ ಹಾಗೂ ಪಾರ್ವತಿ ಬಾಯಿ ದಂಪತಿಯ 12 ಮಕ್ಕಳಲ್ಲಿ ಅಶೋಕ ಎಂಟನೆಯವರು. ಬಾಗಲಕೋಟೆಯ ಸಕ್ರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪಿಯುಸಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ 1965ರಲ್ಲಿ ಎಂ.ಬಿ.ಬಿ.ಎಸ್ ಮುಗಿಸಿದ್ದರು.
ನಂತರ ಅಹಮದಾಬಾದ್ನಲ್ಲಿ ಎಂ.ಡಿ ಮುಗಿಸಿದ ಅಶೋಕ್, 1972ರಲ್ಲಿ ಅಮೆರಿಕಗೆ ತೆರಳಿ ಅಲ್ಲಿಯೇ ನೆಲೆ ನಿಂತಿದ್ದರು. ಅಮೆರಿಕ ಪ್ರಜೆ ಐಲಿನ್ ಅವರನ್ನು ಮದುವೆಯಾಗಿದ್ದು, ದಂಪತಿಗೆ ನಾಲ್ವರು ಮಕ್ಕಳಿದ್ದಾರೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications