ಪಂಜಾಬ್ ನೂತನ ಸಚಿವ ಸಂಪುಟ: ಯಾರಿಗೆ, ಯಾವ ಖಾತೆ? ಸಂಪೂರ್ಣ ಪಟ್ಟಿ
ಚಂಡೀಗಢ, ಮಾರ್ಚ್ 11: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಅವರ ಸಂಪುಟ ಸಚಿವರುಗಳು ಮಾರ್ಚ್ 16 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಶುಕ್ರವಾರ ಘೋಷಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಭರ್ಜರಿ ಗೆಲುವು ದಾಖಲಿಸಿದೆ. ಆಡಳಿತಾರೂಢ ಕಾಂಗ್ರೆಸ್ 18 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದು 2017 ರಲ್ಲಿ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಈ ಭಾರಿ ಕುಸಿತವನ್ನು ಕಂಡಿದೆ. ಆದರೆ ಶಿರೋಮಣಿ ಅಕಾಲಿದಳ (ಎಸ್ಎಡಿ) ಕೇವಲ ಮೂರು ಸ್ಥಾನಗಳನ್ನು ಮಾತ್ರ ಪಡೆಯುವಲ್ಲಿ ಸಫಲವಾಗಿದೆ.
ಪಂಜಾಬ್ನ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಧುರಿ ಕ್ಷೇತ್ರದಲ್ಲಿ 58,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದಕ್ಕೂ ಮುನ್ನ ಶುಕ್ರವಾರ, ಭಗವಂತ್ ಮಾನ್ ರಾಷ್ಟ್ರ ರಾಜಧಾನಿಯಲ್ಲಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭೇಟಿಯಾದರು. ಅರವಿಂದ್ ಕೇಜ್ರಿವಾಲ್ ಕಾಲಿಗೆರಗಿ ಆಶೀರ್ವಾದವನ್ನು ಪಡೆದಿದ್ದಾರೆ.

ಎಎಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾತನಾಡಿದ್ದ ಭಗವಂತ್ ಮಾನ್, ಹೊಸ ಕ್ಯಾಬಿನೆಟ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್ನಲ್ಲಿ ಪ್ರಮಾಣವಚನ ಸ್ವೀಕರಿಸಲಿದೆ. ರಾಜಭವನದಲ್ಲಿ ಅಲ್ಲ ಎಂದು ಘೋಷಿಸಿದ್ದರು. ಹಾಗಾದರೆ ಹೊಸ ಸಚಿವ ಸಂಪುಟದಲ್ಲಿ ಯಾರಿಗೆ, ಯಾವ ಸ್ಥಾನ ಲಭಿಸಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ....
ಪಂಜಾಬ್ನ ನೂತನ ಸಚಿವ ಸಂಪುಟ
ಭಗವಂತ್ ಮಾನ್: ಪಂಜಾಬ್ ನೂತನ ಮುಖ್ಯಮಂತ್ರಿ, ಗೃಹ ಖಾತೆ
ಕುಲ್ತಾರ್ ಸಿಂಗ್ ಸಂದ್ವಾ: ಉಪಮುಖ್ಯಮಂತ್ರಿ
ಅಮಾನ್ ಅರೋರಾ: ಹಣಕಾಸು ಸಚಿವ
ಬುಧ್ ರಾಮ್: ಶಿಕ್ಷಣ ಸಚಿವ
ಜಗದೀಪ್ ಸಿಂಗ್ ಕಾಕ ಬ್ರಾರ್: ಕೃಷಿ ಸಚಿವ
ಗುರ್ಮಿತ್ ಸಿಂಗ್ ಮೀತ್ ಹಯೇರ್: ಲೋಕಪಯೋಗಿ ಸಚಿವ
ಡಾ. ಬಲ್ವೀರ್ ಸಿಂಗ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
ಜೈ ಕಿಶಾನ್ ರೌದಿ: ಆಹಾರ ಮತ್ತು ಪಡಿತರ ಖಾತೆ
ಫ್ರೋ. ಬಲ್ಜೀಂದರ್ ಕೌರ್: ಸ್ಥಳೀಯ ಸಂಸದೀಯ ವ್ಯವಹಾರ ಖಾತೆ
ಕುನ್ವಾರ್ ವಿಜಯ್ ಪ್ರತಾಪ್: ವಾಣಿಜ್ಯ ಸಚಿವ
ಕುಲ್ವಾಂತ್ ಸಿಂಗ್ ಪಂಡೋರಿ: ತಾಂತ್ರಿಕ ಶಿಕ್ಷಣ ಸಚಿವ
ಸವರ್ಜೀತ್ ಕೌರ್ ಮನೋಕೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ
ಗುರ್ಮಿತ್ ಸಿಂಗ್ ಕುಡಿಯಾಣ: ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ಖಾತೆ
ಲಾಭ್ ಸಿಂಗ್ ಉಗೋಕೆ: ವಸತಿ ಮತ್ತು ನಗರಾಭಿವೃದ್ಧಿ ಪಂಚಾಯತ್ ಸಚಿವ
ಜೀವನ್ಜೋತ್ ಕೌರ್: ಕಂದಾಯ ಸಚಿವ
ನರೀಂದರ್ ಕೌರ್ ಭಾರಜ್: ಜಲ ಖಾತೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications