Publictv Exit Poll : ಆರ್. ಆರ್. ನಗರದಲ್ಲಿ ಮುನಿರತ್ನ ಗೆಲುವು
ಬೆಂಗಳೂರು, ನವೆಂಬರ್ 07: ಬೆಂಗಳೂರು ನಗರದ ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲವು ಸಾಧಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.
Recommended Video
ನವೆಂಬರ್ 3ರಂದು ಆರ್. ಆರ್. ನಗರ ಕ್ಷೇತ್ರದ ಉಪ ಚುಣಾವಣೆ ನಡೆದಿತ್ತು. ಕೇವಲ ಶೇ 45.24ರಷ್ಟು ಮತದಾನವಾಗಿತ್ತು. ಇದರಿಂದಾಗಿ ಯಾರಿಗೆ ಗೆಲವು ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿಯ ಮುನಿರತ್ನ ಗೆಲುವು ಸಾಧಿಸಲಿದ್ದಾರೆ ಎಂದು ಶನಿವಾರದ ಸಮೀಕ್ಷಾ ವರದಿಗಳು ಹೇಳಿವೆ.
ಸಿ-ವೋಟರ್, ಕನ್ನಡದ ಪಬ್ಲಿಕ್ ಟಿವಿ ಮತ್ತು ರಾಜ್ಯದ ಗುಪ್ತಚರ ಇಲಾಖೆ ನಡೆಸಿದ ಸಮೀಕ್ಷೆಗಳಲ್ಲಿ ಬಿಜೆಪಿ ಪರವಾದ ವರದಿಗಳು ಬಂದಿವೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದರೂ ಅಂತಿಮವಾಗಿ ಬಿಜೆಪಿಗೆ ಜಯ ಎನ್ನುತ್ತಿವೆ ಸಮೀಕ್ಷೆಯ ವರದಿಗಳು.
ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ 9 ವಾರ್ಡ್ಗಳಲ್ಲಿ ಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಯ ವರದಿಗಳು ಶನಿವಾರ ಪ್ರಕಟವಾಗಿವೆ. ಆರ್. ಆರ್. ನಗರದಲ್ಲಿ 4,62,201 ಮತದಾರರು ಇದ್ದರು. ಈ ಪೈಕಿ 2,09,333 ಜನರು ಮತದಾನವನ್ನು ಮಾಡಿದ್ದರು.

ಪಬ್ಲಿಕ್ ಟಿವಿ ಸಮೀಕ್ಷೆ ವರದಿ
ಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 48ರಷ್ಟು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶೇ 40ರಷ್ಟು, ಜೆಡಿಎಸ್ನ ಕೃಷ್ಣಮೂರ್ತಿ ಶೇ 11ರಷ್ಟು ಮತಗಳನ್ನು ಪಡೆಯಲಿದ್ದಾರೆ. ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಇತರ ಅಭ್ಯರ್ಥಿಗಳು ಶೇ 1ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಗುಪ್ತಚರ ಇಲಾಖೆ ವರದಿ
ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 47ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ. ಕಾಂಗ್ರೆಸ್ ಶೇ 37, ಜೆಡಿಎಸ್ ಶೇ 15ರಷ್ಟು ಮತಗಳನ್ನು ಪಡೆಯಲಿದ್ದಾರೆ. ಇತರ ಅಭ್ಯರ್ಥಿಗಳು ಶೇ 1ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಹೇಳಿದೆ.

ಸಿ-ವೋಟರ್ ಸಮೀಕ್ಷೆ ಫಲಿತಾಂಶ
ಆರ್. ಆರ್. ನಗರ ಕ್ಷೇತ್ರದ ಸಿ-ವೋಟರ್ ಫಲಿತಾಂಶವನ್ನು ಟಿವಿ 9 ಪ್ರಕಟಿಸಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 37.8ರಷ್ಟು, ಕಾಂಗ್ರೆಸ್ನ ಹೆಚ್. ಕುಸುಮಾ ಶೇ 31.1ರಷ್ಟು, ಜೆಡಿಎಸ್ನ ವಿ. ಕೃಷ್ಣಮೂರ್ತಿ ಶೇ 14ರಷ್ಟು ಮತ ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಇತರ ಅಭ್ಯರ್ಥಿಗಳು ಶೇ 17.2ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಮುನಿರತ್ನರಿಂದ ಗೆಲುವು
ಕ್ಷೇತ್ರ ಪುನರ್ ವಿಂಗಡನೆ ಬಳಿಕ ಆರ್. ಆರ್. ನಗರ ಕ್ಷೇತ್ರದಲ್ಲಿ ನಡೆದ ಎರಡು ಚುನಾವಣೆಯಲ್ಲಿಯೂ ಬಿಜೆಪಿ ಗೆದ್ದಿಲ್ಲ. ಇದಕ್ಕೆ ಕಾರಣ ಮುನಿರತ್ನ, ಕಾಂಗ್ರೆಸ್ನಿಂದ ಮುನಿರತ್ನ ಅವರು 2013, 2018ರಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಅವರು ಬಿಜೆಪಿ ಇಂದ ಕಣಕ್ಕಿಳಿದಿದ್ದಾರೆ. ಬಿಜೆಪಿ ಗೆದ್ದರೆ ಅದಕ್ಕೆ ಕಾರಣವೂ ಮುನಿರತ್ನ ಆಗಲಿದ್ದಾರೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು









Click it and Unblock the Notifications