Publictv Exit Poll : ಆರ್. ಆರ್. ನಗರದಲ್ಲಿ ಮುನಿರತ್ನ ಗೆಲುವು
ಬೆಂಗಳೂರು, ನವೆಂಬರ್ 07: ಬೆಂಗಳೂರು ನಗರದ ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲವು ಸಾಧಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.
Recommended Video
ನವೆಂಬರ್ 3ರಂದು ಆರ್. ಆರ್. ನಗರ ಕ್ಷೇತ್ರದ ಉಪ ಚುಣಾವಣೆ ನಡೆದಿತ್ತು. ಕೇವಲ ಶೇ 45.24ರಷ್ಟು ಮತದಾನವಾಗಿತ್ತು. ಇದರಿಂದಾಗಿ ಯಾರಿಗೆ ಗೆಲವು ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿಯ ಮುನಿರತ್ನ ಗೆಲುವು ಸಾಧಿಸಲಿದ್ದಾರೆ ಎಂದು ಶನಿವಾರದ ಸಮೀಕ್ಷಾ ವರದಿಗಳು ಹೇಳಿವೆ.
ಸಿ-ವೋಟರ್, ಕನ್ನಡದ ಪಬ್ಲಿಕ್ ಟಿವಿ ಮತ್ತು ರಾಜ್ಯದ ಗುಪ್ತಚರ ಇಲಾಖೆ ನಡೆಸಿದ ಸಮೀಕ್ಷೆಗಳಲ್ಲಿ ಬಿಜೆಪಿ ಪರವಾದ ವರದಿಗಳು ಬಂದಿವೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದರೂ ಅಂತಿಮವಾಗಿ ಬಿಜೆಪಿಗೆ ಜಯ ಎನ್ನುತ್ತಿವೆ ಸಮೀಕ್ಷೆಯ ವರದಿಗಳು.
ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ 9 ವಾರ್ಡ್ಗಳಲ್ಲಿ ಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಯ ವರದಿಗಳು ಶನಿವಾರ ಪ್ರಕಟವಾಗಿವೆ. ಆರ್. ಆರ್. ನಗರದಲ್ಲಿ 4,62,201 ಮತದಾರರು ಇದ್ದರು. ಈ ಪೈಕಿ 2,09,333 ಜನರು ಮತದಾನವನ್ನು ಮಾಡಿದ್ದರು.

ಪಬ್ಲಿಕ್ ಟಿವಿ ಸಮೀಕ್ಷೆ ವರದಿ
ಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 48ರಷ್ಟು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶೇ 40ರಷ್ಟು, ಜೆಡಿಎಸ್ನ ಕೃಷ್ಣಮೂರ್ತಿ ಶೇ 11ರಷ್ಟು ಮತಗಳನ್ನು ಪಡೆಯಲಿದ್ದಾರೆ. ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಇತರ ಅಭ್ಯರ್ಥಿಗಳು ಶೇ 1ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಗುಪ್ತಚರ ಇಲಾಖೆ ವರದಿ
ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 47ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ. ಕಾಂಗ್ರೆಸ್ ಶೇ 37, ಜೆಡಿಎಸ್ ಶೇ 15ರಷ್ಟು ಮತಗಳನ್ನು ಪಡೆಯಲಿದ್ದಾರೆ. ಇತರ ಅಭ್ಯರ್ಥಿಗಳು ಶೇ 1ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಹೇಳಿದೆ.

ಸಿ-ವೋಟರ್ ಸಮೀಕ್ಷೆ ಫಲಿತಾಂಶ
ಆರ್. ಆರ್. ನಗರ ಕ್ಷೇತ್ರದ ಸಿ-ವೋಟರ್ ಫಲಿತಾಂಶವನ್ನು ಟಿವಿ 9 ಪ್ರಕಟಿಸಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಶೇ 37.8ರಷ್ಟು, ಕಾಂಗ್ರೆಸ್ನ ಹೆಚ್. ಕುಸುಮಾ ಶೇ 31.1ರಷ್ಟು, ಜೆಡಿಎಸ್ನ ವಿ. ಕೃಷ್ಣಮೂರ್ತಿ ಶೇ 14ರಷ್ಟು ಮತ ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಇತರ ಅಭ್ಯರ್ಥಿಗಳು ಶೇ 17.2ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಮುನಿರತ್ನರಿಂದ ಗೆಲುವು
ಕ್ಷೇತ್ರ ಪುನರ್ ವಿಂಗಡನೆ ಬಳಿಕ ಆರ್. ಆರ್. ನಗರ ಕ್ಷೇತ್ರದಲ್ಲಿ ನಡೆದ ಎರಡು ಚುನಾವಣೆಯಲ್ಲಿಯೂ ಬಿಜೆಪಿ ಗೆದ್ದಿಲ್ಲ. ಇದಕ್ಕೆ ಕಾರಣ ಮುನಿರತ್ನ, ಕಾಂಗ್ರೆಸ್ನಿಂದ ಮುನಿರತ್ನ ಅವರು 2013, 2018ರಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಅವರು ಬಿಜೆಪಿ ಇಂದ ಕಣಕ್ಕಿಳಿದಿದ್ದಾರೆ. ಬಿಜೆಪಿ ಗೆದ್ದರೆ ಅದಕ್ಕೆ ಕಾರಣವೂ ಮುನಿರತ್ನ ಆಗಲಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications