ಮೇಣದ ದೀಪಗಳಿಗೆ ಸೆಡ್ಡು ಹೊಡೆಯುತ್ತಿವೆ ಜಾನಪದ ಲೋಕದ ಮಣ್ಣಿನ ಹಣತೆ
ರಾಮನಗರ, ನವೆಂಬರ್ 14: ಮನಸ್ಸಿನ ಕತ್ತಲೆಯನ್ನು ಕಳೆದು ಅರಿವಿನ ಬೆಳಕನ್ನು ಹೊತ್ತಿಸುವ ವಿಶೇಷ ಹಬ್ಬವಾದ ದೀಪಾವಳಿ ದಿನದಂದು "ಪ್ರತಿ ಮನೆಗಳಲ್ಲಿ ಬೆಳಕು ಚೆಲ್ಲುವ ಸಾಂಪ್ರದಾಯಿಕ ಹಣತೆಗಳನ್ನು ತಲತಲಾಂತರದಿಂದ ತಯಾರಿಸುತ್ತಿದ್ದಾರೆ. ದೀಪಾವಳಿ ಹಬ್ಬಕ್ಕೆಂದೇ ಹಲವು ಬಗೆಯ ವಿಶೇಷ ಮಣ್ಣಿನ ದೀಪಗಳು ರಾಮನಗರದ ಜಾನಪದ ಲೋಕದಲ್ಲಿ ತಯಾರುಗುತ್ತಿವೆ.
ನಾಡಿಗೆ ಜನಪದರ ಸಂಸ್ಕೃತಿಯನ್ನು ಸಾರುತ್ತಿರುವ ಜಾನಪದ ಲೋಕದಲ್ಲಿ ಅನುಸೂಯಮ್ಮ ತಯಾರು ಮಾಡುವ ಮಣ್ಣಿನ ದೀಪಗಳಿಗೆ ದೀಪಾವಳಿ ಬಂದರೆ ಎಲ್ಲಿಲ್ಲದ ಬೇಡಿಕೆ ಶುರುವಾಗುತ್ತದೆ. ಇವರು ಬಗೆಬಗೆಯ ಮಣ್ಣಿನ ಹಣತೆಗಳನ್ನು ಸುಲಲಿತವಾಗಿ ತಯಾರು ಮಾಡುತ್ತಾರೆ. ಪೂರ್ವಿಕರಿಂದ ಬಳುವಳಿವಾಗಿ ಬಂದ ಈ ಕುಂಬಾರಿಕೆ ಕಲೆಯನ್ನು ಇವರು 42 ವರ್ಷಗಳಿಂದಲೂ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ.

ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ
ಬೆಳಕಿನ ಹಬ್ಬ ದೀಪಾವಳಿ ಬಂದಾಗ ಇಲ್ಲಿನ ನೈಸರ್ಗಿಕ ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ ಬರುತ್ತದೆ. ರಾಜ್ಯದ ವಿವಿದೆಡೆಯಿಂದ ಜಾನಪದ ಲೋಕಕ್ಕೆ ಬರುವ ಪ್ರವಾಸಿಗರು ಅನುಸೂಯಮ್ಮ ತಯಾರು ಮಾಡುವ ಹಣತೆಗಳನ್ನು ಕೊಂಡುಕೊಳ್ಳುತ್ತಾರೆ. ಇದಲ್ಲದೆ ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ವಿವಿದ ರಾಜ್ಯಗಳಿಂದ ಬರುವ ಪ್ರವಾಸಿಗರ ಮನೆಯಲ್ಲಿ ಇಂದಿಗೂ ಇವರು ತಯಾರು ಮಾಡುವ ಹಣತೆಗಳು ಉರಿಯುತ್ತಿವೆ ಎಂದರೆ ಅತಿಶಯೋಕ್ತಿಯಲ್ಲ.

ಬಗೆಬಗೆಯ ಹಣತೆಗಳು ಪ್ರವಾಸಿಗರ ಮನ ಗೆಲ್ಲುತ್ತಿವೆ
ಅನುಸೂಯಮ್ಮ ಅವರ ಕೈಯಲ್ಲಿ ಅರಳುವ ಮ್ಯಾಜೀಕ್ ದೀಪ, ಅಂಬಾರಿ ದೀಪ, ನವಿಲು ದೀಪ, ಗಣೇಶ ದೀಪ, ಆನೆ ದೀಪ, ನವ ದೀಪ, ಮಡಿಲು ದೀಪ, ಲಕ್ಷ್ಮಿ ದೀಪ ಹೀಗೆ ಹಲವಾರು ಬಗೆಬಗೆಯ ಹಣತೆಗಳು ಪ್ರವಾಸಿಗರ ಮನ ಸೂರೆಗೊಳಿಸುತ್ತಿವೆ, ಅಲ್ಲದೇ ಅವರ ಮನೆ ಬೆಳಗುತ್ತಿವೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ
ಇತ್ತೀಚಿನ ಜಾಗತಿಕರಣಕ್ಕೆ ಸಿಲುಕಿ ಮಣ್ಣಿನ ಹಣತೆಗಳಿಗೆ ಬೇಡಿಕೆ ಕಡಿಮೆಯಾಗಿದೆ. ಪಿಂಗಾಣಿ, ಸ್ಟೀಲ್, ಮೇಣದಬತ್ತಿ ಮತ್ತಿತರ ಹಣತೆಗಳು ಮಾರುಕಟ್ಟೆ ಪ್ರವೇಶ ಮಾಡಿದ್ದರಿಂದ, ಮಣ್ಣಿನ ಸಾಂಪ್ರದಾಯಿಕ ಹಣತೆಗಳಿಗೆ ಬೇಡಿಕೆ ಕಸಿದಿವೆ. ಕೊರೊನಾ ಬಂದಾಗಿನಿಂದ ಹಣತೆಯನ್ನು ಕೇಳುವವರೆ ಇಲ್ಲದಾಗಿದೆ. ಈ ನಡುವೆ ಅನುಸೂಯಮ್ಮ ತಯಾರು ಮಾಡುವ ವಿವಿಧ ಮಣ್ಣಿನ ದೀಪಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.

ದೇಶೀ ಹಣತೆಗಳನ್ನು ಕೊಂಡುಕೊಳ್ಳೋಣ
ಒಟ್ಟಾರೆ ನಾಡಿಗೆ ಜಾನಪದ ಸಂಸ್ಕೃತಿ ಸಾರುತ್ತಿರುವ ಜಾನಪದ ಲೋಕ ದೇಶೀ ವಸ್ತುಗಳಿಗೆ ಪ್ರೋತ್ಸಾಹಿಸುತ್ತಿದೆ. ಸ್ಥಳೀಯ ಕಲಾವಿದೆ ಅನುಸೂಯಮ್ಮ ಮಣ್ಣಿನಿಂದ ತಯಾರು ಮಾಡಿದ ದೇಶೀ ಹಣತೆಗಳನ್ನು ಕೊಂಡು ಪ್ರತಿ ಮನೆಯಲ್ಲೂ ದೀಪಾವಳಿ ಹಬ್ಬವನ್ನು ಆಚರಿಸೋಣ ಎನ್ನುತ್ತಾರೆ ಹಣತೆ ಖರೀದಿಸಿದ ಪ್ರವಾಸಿಗರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications