ಮೇಣದ ದೀಪಗಳಿಗೆ ಸೆಡ್ಡು ಹೊಡೆಯುತ್ತಿವೆ ಜಾನಪದ ಲೋಕದ ಮಣ್ಣಿನ ಹಣತೆ
ರಾಮನಗರ, ನವೆಂಬರ್ 14: ಮನಸ್ಸಿನ ಕತ್ತಲೆಯನ್ನು ಕಳೆದು ಅರಿವಿನ ಬೆಳಕನ್ನು ಹೊತ್ತಿಸುವ ವಿಶೇಷ ಹಬ್ಬವಾದ ದೀಪಾವಳಿ ದಿನದಂದು "ಪ್ರತಿ ಮನೆಗಳಲ್ಲಿ ಬೆಳಕು ಚೆಲ್ಲುವ ಸಾಂಪ್ರದಾಯಿಕ ಹಣತೆಗಳನ್ನು ತಲತಲಾಂತರದಿಂದ ತಯಾರಿಸುತ್ತಿದ್ದಾರೆ. ದೀಪಾವಳಿ ಹಬ್ಬಕ್ಕೆಂದೇ ಹಲವು ಬಗೆಯ ವಿಶೇಷ ಮಣ್ಣಿನ ದೀಪಗಳು ರಾಮನಗರದ ಜಾನಪದ ಲೋಕದಲ್ಲಿ ತಯಾರುಗುತ್ತಿವೆ.
ನಾಡಿಗೆ ಜನಪದರ ಸಂಸ್ಕೃತಿಯನ್ನು ಸಾರುತ್ತಿರುವ ಜಾನಪದ ಲೋಕದಲ್ಲಿ ಅನುಸೂಯಮ್ಮ ತಯಾರು ಮಾಡುವ ಮಣ್ಣಿನ ದೀಪಗಳಿಗೆ ದೀಪಾವಳಿ ಬಂದರೆ ಎಲ್ಲಿಲ್ಲದ ಬೇಡಿಕೆ ಶುರುವಾಗುತ್ತದೆ. ಇವರು ಬಗೆಬಗೆಯ ಮಣ್ಣಿನ ಹಣತೆಗಳನ್ನು ಸುಲಲಿತವಾಗಿ ತಯಾರು ಮಾಡುತ್ತಾರೆ. ಪೂರ್ವಿಕರಿಂದ ಬಳುವಳಿವಾಗಿ ಬಂದ ಈ ಕುಂಬಾರಿಕೆ ಕಲೆಯನ್ನು ಇವರು 42 ವರ್ಷಗಳಿಂದಲೂ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ.

ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ
ಬೆಳಕಿನ ಹಬ್ಬ ದೀಪಾವಳಿ ಬಂದಾಗ ಇಲ್ಲಿನ ನೈಸರ್ಗಿಕ ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ ಬರುತ್ತದೆ. ರಾಜ್ಯದ ವಿವಿದೆಡೆಯಿಂದ ಜಾನಪದ ಲೋಕಕ್ಕೆ ಬರುವ ಪ್ರವಾಸಿಗರು ಅನುಸೂಯಮ್ಮ ತಯಾರು ಮಾಡುವ ಹಣತೆಗಳನ್ನು ಕೊಂಡುಕೊಳ್ಳುತ್ತಾರೆ. ಇದಲ್ಲದೆ ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ವಿವಿದ ರಾಜ್ಯಗಳಿಂದ ಬರುವ ಪ್ರವಾಸಿಗರ ಮನೆಯಲ್ಲಿ ಇಂದಿಗೂ ಇವರು ತಯಾರು ಮಾಡುವ ಹಣತೆಗಳು ಉರಿಯುತ್ತಿವೆ ಎಂದರೆ ಅತಿಶಯೋಕ್ತಿಯಲ್ಲ.

ಬಗೆಬಗೆಯ ಹಣತೆಗಳು ಪ್ರವಾಸಿಗರ ಮನ ಗೆಲ್ಲುತ್ತಿವೆ
ಅನುಸೂಯಮ್ಮ ಅವರ ಕೈಯಲ್ಲಿ ಅರಳುವ ಮ್ಯಾಜೀಕ್ ದೀಪ, ಅಂಬಾರಿ ದೀಪ, ನವಿಲು ದೀಪ, ಗಣೇಶ ದೀಪ, ಆನೆ ದೀಪ, ನವ ದೀಪ, ಮಡಿಲು ದೀಪ, ಲಕ್ಷ್ಮಿ ದೀಪ ಹೀಗೆ ಹಲವಾರು ಬಗೆಬಗೆಯ ಹಣತೆಗಳು ಪ್ರವಾಸಿಗರ ಮನ ಸೂರೆಗೊಳಿಸುತ್ತಿವೆ, ಅಲ್ಲದೇ ಅವರ ಮನೆ ಬೆಳಗುತ್ತಿವೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ
ಇತ್ತೀಚಿನ ಜಾಗತಿಕರಣಕ್ಕೆ ಸಿಲುಕಿ ಮಣ್ಣಿನ ಹಣತೆಗಳಿಗೆ ಬೇಡಿಕೆ ಕಡಿಮೆಯಾಗಿದೆ. ಪಿಂಗಾಣಿ, ಸ್ಟೀಲ್, ಮೇಣದಬತ್ತಿ ಮತ್ತಿತರ ಹಣತೆಗಳು ಮಾರುಕಟ್ಟೆ ಪ್ರವೇಶ ಮಾಡಿದ್ದರಿಂದ, ಮಣ್ಣಿನ ಸಾಂಪ್ರದಾಯಿಕ ಹಣತೆಗಳಿಗೆ ಬೇಡಿಕೆ ಕಸಿದಿವೆ. ಕೊರೊನಾ ಬಂದಾಗಿನಿಂದ ಹಣತೆಯನ್ನು ಕೇಳುವವರೆ ಇಲ್ಲದಾಗಿದೆ. ಈ ನಡುವೆ ಅನುಸೂಯಮ್ಮ ತಯಾರು ಮಾಡುವ ವಿವಿಧ ಮಣ್ಣಿನ ದೀಪಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.

ದೇಶೀ ಹಣತೆಗಳನ್ನು ಕೊಂಡುಕೊಳ್ಳೋಣ
ಒಟ್ಟಾರೆ ನಾಡಿಗೆ ಜಾನಪದ ಸಂಸ್ಕೃತಿ ಸಾರುತ್ತಿರುವ ಜಾನಪದ ಲೋಕ ದೇಶೀ ವಸ್ತುಗಳಿಗೆ ಪ್ರೋತ್ಸಾಹಿಸುತ್ತಿದೆ. ಸ್ಥಳೀಯ ಕಲಾವಿದೆ ಅನುಸೂಯಮ್ಮ ಮಣ್ಣಿನಿಂದ ತಯಾರು ಮಾಡಿದ ದೇಶೀ ಹಣತೆಗಳನ್ನು ಕೊಂಡು ಪ್ರತಿ ಮನೆಯಲ್ಲೂ ದೀಪಾವಳಿ ಹಬ್ಬವನ್ನು ಆಚರಿಸೋಣ ಎನ್ನುತ್ತಾರೆ ಹಣತೆ ಖರೀದಿಸಿದ ಪ್ರವಾಸಿಗರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications