ಶಾಲಾ ಕಪ್ಪುಹಲಗೆಗೆ ಹೊಳಪು ನೀಡುವ ರಂಗಸ್ವಾಮಿಗೆ ಸಲ್ಯೂಟ್
ಸಮಾಜದ ಒಳಿತಿಗಾಗಿ ತಮ್ಮ ಕೈಲಾದ ಅಳಿಲು ಸೇವೆ ಮಾಡುತ್ತಾ ಬರುತ್ತಿರುವವರ ಸಂಖ್ಯೆ ದೊಡ್ಡ ಮಟ್ಟದಲ್ಲಿದೆ. ಅವರು ಎಲೆ ಮರೆಯ ಕಾಯಿಯಂತೆ ತಮ್ಮ ಪಾಡಿಗೆ ಸೇವೆ ಮಾಡುತ್ತಾ ಅದರಲ್ಲಿಯೇ ತೃಪ್ತಿ ಪಡುತ್ತಿರುತ್ತಾರೆ.
ಇಂತಹವರನ್ನು ಗುರುತಿಸದ ಕಾರಣ ಅವರ ಕಾರ್ಯಗಳು ಬೆಳಕಿಗೆ ಬರುವುದೇ ಇಲ್ಲ. ಇಂತಹವರ ಪೈಕಿ ಮೈಸೂರಿನ ನಿವಾಸಿ ರಂಗಸ್ವಾಮಿ ಎಂಬುವರು ಒಬ್ಬರು.
ಮೈಸೂರಿನಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಇವರು ಸರ್ಕಾರಿ ಶಾಲೆಗಳಿಗೆ ತೆರಳಿ ಅಲ್ಲಿನ ಕಪ್ಪು ಹಲಗೆಯನ್ನು ಶಿಕ್ಷಕರು ಬರೆಯಲು ಅನುಕೂಲವಾಗುವಂತೆ ಬಣ್ಣ ಹಚ್ಚಿ ಬರುವ ಕಾಯಕವನ್ನು ಮಾಡುತ್ತಿದ್ದಾರೆ. ಇದುವರೆಗೆ ಇವರು ಮೈಸೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಿಗೂ ತೆರಳಿ ಕಪ್ಪು ಹಲಗೆಗೆ ಬಣ್ಣ ಹಚ್ಚುವ ಕೆಲಸ ಮಾಡಿದ್ದಾರೆ. ಮುಂದೆ ಓದಿ...

3854 ಸರ್ಕಾರಿ ಶಾಲೆಗಳಲ್ಲಿ ಕಪ್ಪು ಹಲಗೆಗೆ ಬಣ್ಣ
ಇದುವರೆಗೂ 3854 ಸರ್ಕಾರಿ ಶಾಲೆಗಳಲ್ಲಿ ಕಪ್ಪು ಹಲಗೆ (ಬೋರ್ಡ್)ಗೆ ಬಣ್ಣ ಹಚ್ಚಿ ಶಿಕ್ಷಕರು ಉತ್ತಮವಾಗಿ ಬರೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ ಇವರು. ಇವತ್ತಿಗೂ ಸೈಕಲ್ನಲ್ಲಿಯೇ ಓಡಾಡುವ ಅವರು, ಬಡತನದ ನಡುವೆಯೂ ಸಮಾಜ ಸೇವೆ ಮಾಡುತ್ತಿರುವುದು ಮೆಚ್ಚಲೇಬೇಕಾದ ಸಂಗತಿ. ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ಮಸುಕಾಗಿದ್ದ ಶಾಲಾ ತರಗತಿಯ ಕಪ್ಪು ಹಲಗೆಗೆ ಇದ್ದಿಲು ಹಾಗೂ ತುಂಬೆ ಸೊಪ್ಪನ್ನು ಅರೆದು ಅದಕ್ಕೆ ಹಚ್ಚುವ ಕೆಲಸವನ್ನು ಶಿಕ್ಷಕರು ಅವರಿಗೆ ವಹಿಸುತ್ತಿದರಂತೆ. ಇದರಿಂದ ಪ್ರೇರಿತರಾದ ಅವರು ಈಗಲೂ ಸರ್ಕಾರಿ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲಗೆಗೆ ಬಣ್ಣ ಹಚ್ಚುತ್ತಿದ್ದಾರೆ.

ರಂಗಸ್ವಾಮಿಯವರ ಅವರ ಅಭಿಮಾನದ ಮಾತು
ಇದರಿಂದ ಯಾವ ಲಾಭವೂ ಅವರಿಗಿಲ್ಲವಾದರೂ "ಇದು ನನಗೆ ಖುಷಿ ಕೊಡುತ್ತದೆ. ಆ ಮೂಲಕ ಸಮಾಜಸೇವೆ ಮಾಡಿದ ತೃಪ್ತಿ ಸಿಗುತ್ತದೆ" ಎಂದು ಹೇಳುವ ಅವರು, ನಮ್ಮಂತಹ ಬಡವರಿಂದ ದೊಡ್ಡದಾದ ಯಾವ ಕೊಡುಗೆಯನ್ನು ಸಮಾಜಕ್ಕೆ ಕೊಡಲು ಸಾಧ್ಯವಿಲ್ಲ. ಆದರೆ ಕನ್ನಡಕ್ಕೆ ಸಣ್ಣದಾದ ಅಳಿಲು ಸೇವೆಯನ್ನು ಕಪ್ಪು ಹಲಗೆಯನ್ನು ಹೊಳಪು ಮಾಡಿ ಅದರಿಂದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅನುಕೂಲ ಮಾಡಿಕೊಡುತ್ತಿರುವುದಾಗಿ ಅಭಿಮಾನದಿಂದ ನುಡಿಯುತ್ತಾರೆ.

ಸೈಕಲ್ ನಲ್ಲಿಯೇ ಎಲ್ಲೆಡೆಗೂ ಪಯಣ
ಪರಿಸರ ಪ್ರೇಮಿ ಆಗಿರುವ ಇವರು ಸೈಕಲ್ ನಲ್ಲಿಯೇ ಎಲ್ಲೆಡೆಗೂ ಪ್ರಯಾಣ ಮಾಡುತ್ತಾರೆ. ಸೈಕಲ್ ಮೂಲಕವೇ ರಾಜ್ಯದ ಹಲವು ಜಿಲ್ಲೆಗಳ ಶಾಲೆಗಳಿಗೆ ತೆರಳಿ ಸೇವೆ ಮಾಡಿರುವುದು ವಿಶೇಷ. ಬಿಳಿಯ ಉಡುಪು ಹಳೆಯ ಸೈಕಲ್ ಇವರ ಆಸ್ತಿ. ಸೈಕಲ್ ನಲ್ಲಿ ಅಳವಡಿಸಿರುವ ಚಿಕ್ಕ ನಾಮಫಲಕದಲ್ಲಿ ಬರೆದಿರುವ, ವಿದ್ಯೆ ಕಡಿಮೆ ಇದ್ದರೂ ಪರವಾಗಿಲ್ಲ ನಮ್ಮ ನಡತೆ ಶುದ್ಧವಾಗಿರಬೇಕು ಎಂಬ ಸಾಲು ಎಲ್ಲರ ಗಮನಸೆಳೆಯುತ್ತದೆ.

ಇವರ ಕಾಯಕ ಮೆಚ್ಚಲೇಬೇಕು
ದೊಡ್ಡ ದೊಡ್ಡ ಸಮಾಜ ಸೇವಕರ ನಡುವೆ ಶಾಲೆಯನ್ನೇ ದೇವಾಲಯವೆಂದು, ಅಲ್ಲಿ ಕಲಿಯುವ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿದ್ದು ಅವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಪ್ಪುಹಲಗೆಗೆ ಇದ್ದಿಲು ಹಾಗೂ ತುಂಬೆ ಸೊಪ್ಪನ್ನು ಅರೆದು ಬಣ್ಣ ಬಳಿಯುವ ಕೆಲಸ ಮಾಡುತ್ತಾ ಬಂದಿರುವ ರಂಗಸ್ವಾಮಿ ಕಾಯಕ ನಿಜಕ್ಕೂ ಮೆಚ್ಚಲೇ ಬೇಕಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications