ಅತ್ಯಪರೂಪದ ರಾಜಕಾರಣಿ ಅಟಲ್ ಜೀ ಅವರ ಅಪರೂಪದ ಚಿತ್ರಗಳು
ಮೂರು ಬಾರಿ ಭಾರತದ ಪ್ರಧಾನಿಯಾಗಿದ್ದರೂ, ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಪಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಜಾತ ಶತ್ರು ಎಂದೇ ಹೆಸರಾದವರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಮ್ಮನ್ನಗಲಿದ್ದಾರೆ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ. ಅವರ ಆರೋಗ್ಯ ಸುಧಾರಿಸಲಿ ಎಂದು ಇಡೀ ದೇಶವೂ ಕಂಬನಿ ಮಿಡಿಯುತ್ತ ಮಾಡಿದ ಪ್ರಾರ್ಥನೆ ಕೈಗೂಡಲಿಲ್ಲ. ಭೌತಿಕವಾಗಿ ದೂರವಾದರೂ ಅವರ ಕೋಟ್ಯಂತರ ಅಭಿಮಾನಿಗಳ ಮನಸ್ಸಿನಲ್ಲಿ ಅವರು ಭದ್ರ.
ದೇಶಕಂಡ ಅಪರೂಪದ ರಾಜಕಾರಣಿ, ಸಹೃದಯ ಸಾಹಿತಿ, ಹಾಸ್ಯಪ್ರಜ್ಞೆಯ ಖನಿ, ಪ್ರಖರ ವಾಗ್ಮಿ, ಅಪ್ರತಿಮ ದೇಶಭಕ್ತ ವಾಜಪೇಯಿ ಅವರ ಅಗಲಿಕೆ ಭಾರತಕ್ಕೆ ತುಂಬಲಾರದ ನಷ್ಟ. ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ವಾಜಪೇಯಿ ಅವರ ಅಪರೂಪದ ಚಿತ್ರಗಳಲ್ಲಿ ಕೆಲವು ನಿಮಗಾಗಿ ಇಲ್ಲಿವೆ.(ಪಿಟಿಐ ಸಂಗ್ರಹ)

ನೆಲ್ಸನ್ ಮಂಡೇಲಾ ಅವರೊಂದಿಗೆ
1998 ರ ಸೆಪ್ಟೆಂಬರ್ ನಲ್ಲಿ ಡರ್ಬನ್ ನಲ್ಲಿ ನಡೆದ ಸಭೆಯೊಂದರಲ್ಲಿ ದಕ್ಷಿಣ ಆಫ್ರಿಕದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರನ್ನು ಅಟಲ್ ಬಿಹಾರಿ ವಾಜಪೇಯಿ ಆವರು ಭೇಟಿಯಾದ ಕ್ಷಣ.

ಅಬ್ದುಲ್ ಕಲಾಂ ಜೊತೆ
2003 ರಲ್ಲಿ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಅಬ್ದುಲ್ ಕಲಾಂ ಅವರೊಂದಿಗೆ ಅಜಾತಶತ್ರು ವಾಜಪೇಯಿ.

ಸಿತಾರ್ ಮಾಂತ್ರಿಕ ರವಿಶಂಕರ್ ಅವರೊಂದಿಗೆ
2002 ರಲ್ಲಿ ನವದೆಹಲಿಯಲ್ಲಿ ವಾಜಪೇಯಿ ಅವರ 'ಸಂವೇದನ' ಎಂಬ ಮ್ಯೂಸಿಕ್ ಆಲ್ಬಂ ಬಿಡುಗಡೆ ಸಮಾರಂಭದಲ್ಲಿ ಸಿತಾರ್ ಮಾಂತ್ರಿಕ ರವಿಶಂಕರ್ ಅವರೊಂದಿಗೆ.

ಭಾರತ ರತ್ನ ಸ್ವೀಕರಿಸಿದ ಕ್ಷಣ
2015 ರಲ್ಲಿ ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ'ವನ್ನು ಆಗಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರದಾನ ಮಾಡಿದರು. ವಾಜಪೇಯಿ ಅವರು ಅನಾರೋಗ್ಯದ ಕಾರಣ ಅಜ್ಞಾತರಾಗಿ ಉಳಿದ ಮೇಲೆ ಸಿಕ್ಕಿದ ಅವರ ಏಕೈಕ ಚಿತ್ರ ಇದಾಗಿತ್ತು. ಆ ನಂತರವಾಗಲೀ, ಅನಾರೋಗ್ಯದ ನಂತರವಾಗಲೀ ಅವರ ಒಂದೂ ಚಿತ್ರವೂ ಸಾರ್ವಜನಿಕರಿಗೆ ಲಭ್ಯವಾಗಿರಲಿಲ್ಲ.

ಶಿವಸೇನಾ ಮುಖಂಡ ಬಾಳ್ ಠಾಕ್ರೆ ಅವರೊಂದಿಗೆ
ಶಿವಸೇನಾ ಮುಖಂಡ ಬಾಳ್ ಠಾಕ್ರೆ ಅವರೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಕ್ಷಣ.

ಮಾಜಿ ಪ್ರಧಾನಿಗಳ ಸಮಾಗಮ
ಮಾಜಿ ಪ್ರಧಾನಿ ಐಕೆ ಗುಜರಾಲ್ ಅವರೊಂದಿಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ.

ವಿ ಸಿ ಶುಕ್ಲಾ ಅವರೊಂದಿಗೆ
ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ವಿ ಸಿ ಶುಕ್ಲಾ ಅವರೊಂದಿಗೆ 2004 ರಲ್ಲಿ ಆಗಿನ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ.

ಮೋದಿ, ಅಡ್ವಾಣಿ ಜೊತೆ
ಗುಜರಾತಿನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ವಾಜಪೇಯಿ, ಎಲ್ ಕೆ ಅಡ್ವಾಣಿ ಅವರೊಂದಿಗೆ ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರ ಅಪರೂಪದ ಚಿತ್ರವನ್ನು ಕ್ಲಿಕ್ಕಿಸಿದ್ದು ಬಿಜೆಪಿ ಮುಖಂಡ ತರುಣ್ ವಿಜಯ್. ಈ ಚಿತ್ರ ಕ್ಲಿಕ್ಕಿಸಿದ್ದು 2001 ರಲ್ಲಿ.

ವಾಜಪೇಯಿ ಮತ್ತು ಮೋದಿ
ನವದೆಹಲಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನರೇಂದ್ರ ಮೊದಿಯವರ ಹಳೆಯ ಚಿತ್ರವಿದು.

ಮೂರು ದಿಗ್ಗಜರು ಒಂದು ವೇದಿಕೆಯಲ್ಲಿ
2004 ರಲ್ಲಿ ಅಹ್ಮದಾಬಾದಿನಲ್ಲಿ ವೇದಿಕೆಯೊಂದರಲ್ಲಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿ ಮೂವರೂ ಕಂಡುಬಂಡಿದ್ದು ಹೀಗೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications