ಶಾಸಕರ ಮೌಲ್ಯ ಮಾಪನ; ಹಾವೇರಿ ಜಿಲ್ಲೆಯ ಶಾಸಕರಿಗೆ ಅಂಕ ಕೊಡಿ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯನ್ನು ಬಿರುಸಿನಿಂದ ಆರಂಭಿಸಿವೆ. 2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು? ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.
ಈ ಪುಟದಲ್ಲಿ ಜನರು ಹಾವೇರಿ ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು. ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.

ಮುಖ್ಯಮಂತ್ರಿಗಳಿಗೆ ಅಂಕ ನೀಡಿ
ಹಾವೇರಿ ಜಿಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ. ಜಿಲ್ಲೆಯಲ್ಲಿ ಶಿಗ್ಗಾಂವ, ಹಾನಗಲ್, ಹಾವೇರಿ, ಬ್ಯಾಡಗಿ, ಹಿರೇಕೆರೂರು ಮತ್ತು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಿವೆ.
ಶಿಗ್ಗಾಂವ ಕ್ಷೇತ್ರದ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 2018ರ ಚುನಾವಣೆಯಲ್ಲಿ ಅವರು 83,868 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಕಾಂಗ್ರೆಸ್ನ ಶ್ರೀನಿವಾಸ ಮಾನೆ
ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಶ್ರೀನಿವಾಸ ಮಾನೆ. 2018ರ ಚುನಾವಣೆಯಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಜಯಗಳಿಸಿದ್ದರು. ಅವರ ಅಕಾಲಿಕ ಮರಣದ ನಂತರ ಉಪ ಚುನಾವಣೆ ಎದುರಾಯಿತು. 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ಶ್ರೀನಿವಾಸ ಮಾನೆ 7,373 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಹಾವೇರಿ ವಿಧಾನಸಭಾ ಕ್ಷೇತ್ರ
ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ನೆಹರೂ ಓಲೇಕರ್. 2018ರ ಚುನಾವಣೆಯಲ್ಲಿ 86,565 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬ್ಯಾಡಗಿ ವಿಧಾನಸಭಾ ಕ್ಷೇತ್ರ
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿ. 2018ರ ಚುನಾವಣೆಯಲ್ಲಿ ಅವರು 91,721 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯಗಳಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಹಿರೇಕೆರೂರ ವಿಧಾನಸಭಾ ಕ್ಷೇತ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೃಷಿ ಸಚಿವರಾಗಿರುವ ಬಿ. ಸಿ. ಪಾಟೀಲ್ ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಶಾಸಕರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 72,461 ಮತಗಳನ್ನು ಪಡೆದು ಜಯಗಳಿಸಿದ್ದರು. ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.

ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರ
ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿಯ ಅರುಣ್ ಕುಮಾರ್ ಪೂಜಾರಿ. 2018ರ ಚುನಾವಣೆಯಲ್ಲಿ ಕೆಜೆಪಿಯ ಆರ್. ಶಂಕರ್ 63,910 ಮತಗಳನ್ನು ಪಡೆದು ಜಯಗಳಿಸಿದ್ದರು. ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಅರುಣ್ ಕುಮಾರ್ ಪೂಜಾರಿ ಗೆಲುವು ಸಾಧಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications