ಶಾಸಕರ ಮೌಲ್ಯ ಮಾಪನ; ಡಿಕೆ ಶಿವಕುಮಾರ್ ಕಾರ್ಯ ವೈಖರಿಗೆ ಅಂಕ ನೀಡಿ
ರಾಮನಗರ, ಆಗಸ್ಟ್ 26; ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿದೆ. 2018ರ ಚುನಾವಣೆಯಲ್ಲಿ ಜನರು ಮತದಾನ ಮಾಡಿ ಆಯ್ಕೆ ಮಾಡಿದ ಶಾಸಕರು ನಾಲ್ಕೂವರೆ ವರ್ಷಗಳಲ್ಲಿ ಮಾಡಿದ್ದೇನು? ಎಂಬುದನ್ನು ಈಗ ಮೌಲ್ಯ ಮಾಪನ ಮಾಡುವ ಸಮಯ ಬಂದಿದೆ.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ಆರಂಭಿಸಿದೆ. ಇಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್ಗಳನ್ನು ನೀಡುವ ಮೂಲಕ ಅಂಕ ನೀಡಬಹುದು. ಆನ್ಲೈನ್ ಮೂಲಕ ಮತದಾನ ಮಾಡಲು ಇದು ಒಂದು ವೇದಿಕೆ.
ಒಟ್ಟು 9 ಅಂಶಗಳ ಆಧಾರದ ಮೇಲೆ ನೀವು ನಿಮ್ಮ ಶಾಸಕರ ಮೌಲ್ಯ ಮಾಪನ ಮಾಡಬಹುದು. ಇದರಲ್ಲಿ ನೀವು ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ನೀವು ವೋಟ್ ಮಾಡಿದ ಬಳಿಕ ಈ ಪುಟವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದು. ವಾಟ್ಸಪ್, ಟೆಲಿಗ್ರಾಮ್ ಮೂಲಕ ಈ ಪುಟವನ್ನು ಶೇರ್ ಮಾಡಿ ಹೆಚ್ಚು ಜನರನ್ನು ತಲುಪುವಂತೆ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಬೇಕು.
ಈ ಪುಟದಲ್ಲಿ ನೀವು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರ ಡಿ. ಕೆ. ಶಿವಕುಮಾರ್ಗೆ ವೋಟ್ ಮಾಡಬಹುದಾಗಿದೆ. ವೋಟ್ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ನೀವು ನೀಡಿದ ಸರಾಸರಿ ಅಂಕ ತೋರಿಸುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲು ಲಿಂಕ್ ಸಿಗುತ್ತದೆ.
ಇದು ಚುನಾವಣಾ ಪುಟವಾಗಿದೆ. ಕನಕಪುರ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಹಿಂದಿನ ಹಲವು ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳು, ಪಡೆದ ಮತಗಳು ಸೇರಿದಂತೆ ಇತರ ವಿವರವಿದೆ. ಚುನಾವಣೆ ಹತ್ತಿರವಾಗುತ್ತಿರುವಾಗ ನೀವು ಶಾಸಕರ ಮೌಲ್ಯ ಮಾಪನ ಮಾಡಿ, ಶಾಸಕರಿಗೆ ಮತ ನೀಡಿ.
2018ರ ಚುನಾವಣೆಯಲ್ಲಿ ಡಿ. ಕೆ. ಶಿವಕುಮಾರ್ 1,27,552 ಮತಗಳನ್ನು ಪಡೆಯು ಮೂಲಕ ಕನಕಪುರ ಕ್ಷೇತ್ರದಲ್ಲಿ ಸುಮಾರು 79 ಸಾವಿರ ಮತಗಳ ಅಂತರದಲ್ಲಿ ಜೆಡಿಎಸ್ನ ನಾರಾಯಣ ಗೌಡರನ್ನು ಸೋಲಿಸಿದ್ದಾರೆ. 2013ರ ಚುನಾವಣೆಯಲ್ಲಿಯೂ ಇದೇ ಕ್ಷೇತ್ರದಿಂದ ಡಿ. ಕೆ. ಶಿವಕುಮಾರ್ ಆಯ್ಕೆಯಾಗಿದ್ದರು.
ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಸ್ತಿತ್ವಕ್ಕೆ ಬಂದಿತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಡಿ. ಕೆ. ಶಿವಕುಮಾರ್ ಸಚಿವರಾದರು. ಜಲಸಂಪನ್ಮೂಲ ಖಾತೆ ಸಿಕ್ಕಿತು. ಆದರೆ ಶಾಸಕರ ರಾಜೀನಾಮೆ ಬಳಿಕ 2019ರಲ್ಲಿ ಬಹುಮತ ಕಳೆದುಕೊಂಡು ಎಚ್. ಡಿ. ಕುಮಾರಸ್ವಾಮಿ ಸರ್ಕಾರ ಪತನಗೊಂಡಿತು.
ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಡಿ. ಕೆ. ಶಿವಕುಮಾರ್ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. 2008ರಿಂದ ಸತತ ಮೂರು ಚುನಾವಣೆಗಳಲ್ಲಿ ಅವರು ಕನಕಪುರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಿದ್ದಾರೆ. ಅದಕ್ಕೂ ಮೊದಲು ಅವರು ಸಾತನೂರು ಕ್ಷೇತ್ರದಿಂದ ಶಾಸಕರಾಗಿದ್ದರು.
ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ. ಕೆ. ಶಿವಕುಮಾರ್ 2023ರ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಜೊತೆಗೆ ರಾಜ್ಯದ ಇತರ ಕ್ಷೇತ್ರಗಳ ಉಸ್ತುವಾರಿ ನೋಡಿಕೊಳ್ಳಬೇಕು. ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡಬೇಕು, ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಅವರು ಗೆದ್ದರೆ ಮುಖ್ಯಮಂತ್ರಿಯೂ ಆಗಬಹುದು.
ಕನಕಪುರ ಕ್ಷೇತ್ರದಲ್ಲಿ ಡಿ. ಕೆ. ಶಿವಕುಮಾರ್ ಮಾಡಿರುವ ಅಭಿವೃದ್ಧಿ ಕೆಲಸಗಳು ಏನು?. ಕೋವಿಡ್ ಸಮಯದಲ್ಲಿ ಶಾಸಕರು ಕ್ಷೇತ್ರದ ಜನರಿಗೆ ಹೇಗೆ ಸ್ಪಂದಿಸಿದ್ದಾರೆ?. ಸತತ ಮೂರು ಬಾರಿ ಗೆಲ್ಲಿಸಿರುವ ಕನಕಪುರದ ಜನರು ಶಾಸಕರಿಗೆ ನೀಡುವ ಅಂಕಗಳು ಎಷ್ಟು?.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು













Click it and Unblock the Notifications