ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕರ ಮೌಲ್ಯ ಮಾಪನ; ಕೊಡಗು ಜಿಲ್ಲೆಯ ಶಾಸಕರಿಗೆ ಅಂಕ ನೀಡಿ

|
Google Oneindia Kannada News

ವಿಧಾನಸಭೆ ಚುನಾವಣೆಗೆ ಕರ್ನಾಟಕ ಸಿದ್ಧವಾಗುತ್ತಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿ ಆರಂಭಿಸಿವೆ. 2023ರ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಜನರಿಗೆ ಅವಕಾಶ ನೀಡಲಾಗಿದೆ.

ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು?, ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡದ ಈ ಮೂಲಕ ಶಾಸಕರಿಗೆ ಅಂಕ ನೀಡಲು ಅವಕಾಶ ನೀಡಿದೆ.

ಶಾಸಕರ ಮೌಲ್ಯ ಮಾಪನ; ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ

ಚುನಾವಣೆ ಹಿನ್ನಲೆಯಲ್ಲಿ ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಈ ಪುಟವನ್ನು ಶೇರ್ ಮಾಡಬಹುದಾಗಿದೆ.

ಶಾಸಕರ ಮೌಲ್ಯ ಮಾಪನ; ಸತೀಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ಸತೀಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ

Rate Your MLA Rate Kodagu District MLAs Performance In Oneindia Kannada

Vote ಮಾಡಲು

ಈ ಪುಟದಲ್ಲಿ ಜನರು ಕೊಡಗು ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪುಟ ಶೇರ್ ಮಾಡಬಹುದು.

ಶಾಸಕರ ಮೌಲ್ಯ ಮಾಪನ; ಡಾ. ಜಿ. ಪರಮೇಶ್ವರ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ಡಾ. ಜಿ. ಪರಮೇಶ್ವರ ಕಾರ್ಯ ವೈಖರಿಗೆ ಅಂಕ ನೀಡಿ

ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು.

ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ. ಮತ್ತೇಕೆ ತಡ ಈಗಲೇ ವೋಟ್ ಮಾಡಿ.

ಕೊಡಗು ಜಿಲ್ಲೆ ರಾಜ್ಯದಲ್ಲಿಯೇ ಅತಿ ಕಡಿಮೆ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ. ಈ ಜಿಲ್ಲೆ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ. ಜಿಲ್ಲೆಯಲ್ಲಿ ಕೇವಲ ಎರಡು ವಿಧಾನಸಭಾ ಕ್ಷೇತ್ರಗಳಿವೆ. ಮಡಿಕೇರಿ ಮತ್ತು ವಿರಾಜಪೇಟೆ ಎರಡು ಕ್ಷೇತ್ರಗಳಾಗಿದ್ದು, ಎರಡೂ ಕ್ಷೇತ್ರಗಳು ಸದ್ಯ ಬಿಜೆಪಿಯ ವಶದಲ್ಲಿವೆ.

ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕರು ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕರು ಕೆ. ಜಿ. ಬೋಪಯ್ಯ.

ಈ ಇಬ್ಬರೂ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾದರೆ 2018ರಲ್ಲಿ ನೀವು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳು ಏನು? ಎಂದು ಜನರು ಈಗ ಮೌಲ್ಯ ಮಾಪನ ಮಾಡಬಹುದಾಗಿದೆ.

ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಮಡಿಕೇರಿ, ವಿರಾಜಪೇಟೆ ಕ್ಷೇತ್ರದ ಚುನಾವಣಾ ಪುಟ ತೆರೆದುಕೊಳ್ಳುತ್ತದೆ. ಅದರ ಮೂಲಕ ನೀವು ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದಾಗಿದೆ. ಬಳಿಕ ಆ ಪುಟವನ್ನು ಶೇರ್ ಮಾಡಿ, ಜನರು ಸಹ ಮತದಾನ ಮಾಡುವಂತೆ ಮನವಿ ಮಾಡಬಹುದಾಗಿದೆ.

ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಸಕರು ಹೇಗೆ ಸ್ಪಂದಿಸಿದ್ದಾರೆ. ಕೋವಿಡ್, ಮಳೆ, ಪ್ರವಾಹದ ಸಂದರ್ಭದಲ್ಲಿ ಶಾಸಕರು ಹೇಗೆ ಕೆಲಸ ಮಾಡಿದರು? ಎಂದು ಜನರು ಆಲೋಚಿಸಿ ಮತದಾನ ಮಾಡಬಹುದಾಗಿದೆ. ನಿಮ್ಮ ಶಾಸಕರ ಕಾರ್ಯ ವೈಖರಿ ಗಮನಿಸಿ, ನೀವು ಅಂಕ ನೀಡಿ...

English summary
Rate Your MLA - Here you can rate Rate Kodagu district MLA's performance in the last 4.5 years. What are the changes did, grants released and development works has done in constituency;
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X