ಶಾಸಕರ ಮೌಲ್ಯ ಮಾಪನ; ಕೊಪ್ಪಳ ಜಿಲ್ಲೆಯ ಶಾಸಕರಿಗೆ ಅಂಕ ಕೊಡಿ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು, ನಾಯಕರು ಚುನಾವಣೆಯ ತಯಾರಿಯನ್ನು ಆರಂಭಿಸಿದ್ದಾರೆ. 2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು? ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.
ಶಾಸಕರ ಮೌಲ್ಯ ಮಾಪನ; ಗದಗ ಜಿಲ್ಲೆಯ ಶಾಸಕರಿಗೆ ಅಂಕ ನೀಡಿ
ಈ ಪುಟದಲ್ಲಿ ಜನರು ಕೊಪ್ಪಳ ಜಿಲ್ಲೆಯ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪುಟವನ್ನು ಶೇರ್ ಮಾಡಬಹುದು.
ಶಾಸಕರ ಮೌಲ್ಯ ಮಾಪನ; ಕೊಡಗು ಜಿಲ್ಲೆಯ ಶಾಸಕರಿಗೆ ಅಂಕ ನೀಡಿ
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕರ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು. ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.
ಶಾಸಕರ ಮೌಲ್ಯ ಮಾಪನ; ಶಿವಮೊಗ್ಗ ಜಿಲ್ಲೆಯ ಶಾಸಕರಿಗೆ ಅಂಕ ಕೊಡಿ
ಕೊಪ್ಪಳ ಜಿಲ್ಲೆಯಲ್ಲಿ ಕನಕಗಿರಿ, ಗಂಗಾವತಿ, ಯಲಬುರ್ಗಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಕೊಪ್ಪಳ ಮತ್ತು ಕುಷ್ಟಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ.
ಕುಷ್ಟಗಿ ಕ್ಷೇತ್ರದ ಶಾಸಕರು
ಕೊಪ್ಪಳ ಜಿಲ್ಲೆಯಲ್ಲಿ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿವೆ.
ಕುಷ್ಟಗಿ ಕ್ಷೇತ್ರದ ಶಾಸಕರು ಕಾಂಗ್ರೆಸ್ನ ಅಮರೇಗೌಡ ಪಾಟೀಲ್ ಬಯ್ಯಾಪುರ. 2018ರ ಚುನಾವಣೆಯಲ್ಲಿ 87,567 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.
ಕನಕಗಿರಿ ಕ್ಷೇತ್ರದ ಶಾಸಕರು
ಕನಕಗಿರಿ ಕ್ಷೇತ್ರದ ಶಾಸಕರು ಬಿಜೆಪಿಯ ಬಸವರಾಜ ದಡೇಸುಗೂರು. 2018ರ ಚುನಾವಣೆಯಲ್ಲಿ 87,735 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.
ಗಂಗಾವತಿ ಕ್ಷೇತ್ರ
ಗಂಗಾವತಿ ಕ್ಷೇತ್ರದ ಶಾಸಕರು ಬಿಜೆಪಿಯ ಪರಣ್ಣ ಮುನವಳ್ಳಿ. 2018ರ ಚುನಾವಣೆಯಲ್ಲಿ 67,617 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರ ಕಾರ್ಯ ವೈಖರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.
ಯಲಬುರ್ಗಾ ಕ್ಷೇತ್ರದ ಶಾಸಕರು
ಬಿಜೆಪಿಯ ಹಾಲಪ್ಪ ಬಸಪ್ಪ ಆಚಾರ್ ಯಲಬುರ್ಗಾ ಕ್ಷೇತ್ರದ ಶಾಸಕರು. ಮೊದಲ ಬಾರಿಗೆ ಸಚಿವರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು. 2018ರ ಚುನಾವಣೆಯಲ್ಲಿ 79,072 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕರಿಗೆ ಅಂಕ ನೀಡಲು ಕ್ಲಿಕ್ ಮಾಡಿ.
ಕೆ. ರಾಘವೇಂದ್ರ ಹಿಟ್ನಾಳ್
ಕೊಪ್ಪಳ ಕ್ಷೇತ್ರದ ಶಾಸಕರು ಕೆ. ರಾಘವೇಂದ್ರ ಹಿಟ್ನಾಳ್. 2018ರ ಚುನಾವಣೆಯಲ್ಲಿ 98,783 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಮ್ಮ ಶಾಸಕರಿಗೆ ಅಂಕ ನೀಡಲು ಇಲ್ಲಿ ಕ್ಲಿಕ್ ಮಾಡಿ.