ರಾಷ್ಟ್ರಪತಿಗಳ ಪೊಲೀಸ್ ಪದಕ ವಿಜೇತೆ ಸೋನಿಯಾ ನಾರಂಗ್
ಕರ್ನಾಟಕದ ಕೆಡರ್ನ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಅವರು ಸದ್ಯ ಕೇಂದ್ರ ಸೇವೆಯಲ್ಲಿದ್ದಾರೆ. 72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಸೋನಿಯಾ ನಾರಂಗ್ ಅವರಿಗೆ ನೀಡಿ ಗೌರವಿಸಲಾಗಿದೆ.
ಸೋನಿಯಾ ನಾರಂಗ್ ಸೇರಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ 6 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ ಲಭಿಸಿದೆ. ಸೋನಿಯಾ ನಾರಂಗ್ ಅವರು ಸದ್ಯ ಜಾರಿ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕಿಯಾಗಿದ್ದಾರೆ. ಇದಕ್ಕೂ ಮುನ್ನ ಎನ್ಐಎ ಡಿಐಜಿಯಾಗಿದ್ದರು.
ಸೋನಿಯಾ ನಾರಂಗ್ ಸಂಕ್ಷಿಪ್ತ ಪರಿಚಯ:
ಸೋನಿಯಾ ನಾರಂಗ್ ಅವರು ಮೂಲತಃ ಚಂಡೀಗಢದವರು. ಬಿಎ ಪದವಿ ಪಡೆದ ಬಳಿಕ ಅವರು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2002ರಲ್ಲಿ ಕರ್ನಾಟಕ ಕೆಡರ್ನ ಅಧಿಕಾರಿಯಾಗಿ ನೇಮಕವಾದರು. ರಾಜ್ಯದಲ್ಲಿ ಸೋನಿಯಾ ನಾರಂಗ್ ಅವರು ಕಲಬುರಗಿಯಲ್ಲಿ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಆರಂಭಿಸಿದರು.

ನಂತರ ಅವರು ಬೈಲಹೊಂಗಲದಲ್ಲಿ ಎಎಸ್ಪಿಯಾಗಿ ಕೆಲಸ ಮಾಡಿದರು. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡುವಾಗ ಸೋನಿಯಾ ನಾರಂಗ್ ಅವರ ಹೆಸರು ರಾಜ್ಯಕ್ಕೆ ಪರಿಚಯವಾಯಿತು. ನಂತರ ಬೆಳಗಾವಿಗೆ ವರ್ಗಾವಣೆಯಾದ ಅವರು ಅನಂತರ ಬೆಂಗಳೂರಿಗೆ ಬಂದರು.
ಕೆಎಸ್ಆರ್ಪಿಯಲ್ಲಿಯೂ ಕೆಲಸ ನಿರ್ವಹಿಸಿದ ನಾರಂಗ್ ಅವರು, ನಂತರ ಲೋಕಾಯುಕ್ತಕ್ಕೆ ವರ್ಗಾವಣೆಯಾದರು. 2015ರಿಂದ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೋನಿಯಾ ನಾರಂಗ್ ಅವರಿಗೆ ನಂತರ ಡಿಐಜಿಯಾಗಿ ಬಡ್ತಿ ಸಿಕ್ಕಿತ್ತು. ನಂತರ ಸಿಐಡಿಯ ಡಿಐಜಿಯಾಗಿ ನೇಮಕವಾದರು. ಅವರ ನೇತೃತ್ವದಲ್ಲಿಯೇ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸಲಾಯಿತು.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಲೋಕಾಯುಕ್ತ ಹಗರಣ ಬೆಳಕಿಗೆ ತಂದರು : ಕರ್ನಾಟಕ ಲೋಕಾಯುಕ್ತದಲ್ಲಿ ಭ್ರಷ್ಟಾಚಾರದ ನಡೆದಿದೆ ಎಂದು ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು 2015ರ ಮೇ 11ರಂದು ಲೋಕಾಯುಕ್ತ ರಿಜಿಸ್ಟ್ರಾರ್ಗೆ ಪತ್ರ ಬರೆದಿದ್ದರು. ಆನಂತರ ನಡೆದ ಹಲವು ಬೆಳವಣಿಗೆಗಳ ಬಳಿಕ ಲೋಕಾಯುಕ್ತ ವೈ. ಭಾಸ್ಕರ ರಾವ್ ಅವರು ಡಿಸೆಂಬರ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸೋನಿಯಾ ನಾರಂಗ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನವದೆಹಲಿ ವಿಭಾಗದ ಎಸ್ಪಿಯಾಗಿ ನೇಮಕ ಮಾಡಲಾಯಿತು. ನಂತರ ಎನ್ಐಎ ಡಿಐಜಿಯಾಗಿ ಅಧಿಕಾರ ಅವಧಿ ಪೂರೈಸಿದ ಬಳಿಕ ಜಾರಿ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications