ಗಣರಾಜ್ಯೋತ್ಸವ 2026: 77 ಅಥವಾ 78? ಶುಭಾಶಯ ಕೋರುವ ಮುನ್ನ ಈ ಗೊಂದಲ ಬಗೆಹರಿಸಿಕೊಳ್ಳಿ!
ಭಾರತೀಯರ ಪಾಲಿಗೆ ಅತ್ಯಂತ ಹೆಮ್ಮೆಯ ಹಬ್ಬವಾದ ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದೇಶದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದಿನ ರಾಜಪಥ) ನಡೆಯಲಿರುವ ಅದ್ಧೂರಿ ಪರೇಡ್ಗೆ ಭರ್ಜರಿ ತಯಾರಿಗಳು ನಡೆಯುತ್ತಿವೆ. ಆದರೆ, ಪ್ರತಿಯೊಬ್ಬರಲ್ಲೂ ಕಾಡುವ ಸಾಮಾನ್ಯ ಪ್ರಶ್ನೆಯೆಂದರೆ, ಈ ಬಾರಿ ಭಾರತ ಆಚರಿಸುತ್ತಿರುವುದು 77ನೇ ಗಣರಾಜ್ಯೋತ್ಸವವೇ ಅಥವಾ 78ನೇಯದ್ದೇ ಎಂಬುದು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
2026ರ ಜನವರಿ 26ರಂದು ಭಾರತವು ಅಧಿಕೃತವಾಗಿ ತನ್ನ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಿದೆ. ಭಾರತೀಯ ಸಂವಿಧಾನವು 1950ರ ಜನವರಿ 26ರಂದು ಜಾರಿಗೆ ಬಂದಿತು. ಅಂದು ದೇಶದ ಮೊದಲ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಅಂದಿನಿಂದ ಇಂದಿನವರೆಗೆ ಲೆಕ್ಕ ಹಾಕಿದರೆ, ಈ ವರ್ಷ ನಾವು 77ನೇ ವಾರ್ಷಿಕೋತ್ಸವವನ್ನು ಪೂರೈಸುತ್ತಿದ್ದೇವೆ.

1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ, ದೇಶವು ತನ್ನದೇ ಆದ ಸಂವಿಧಾನದ ಅಡಿಯಲ್ಲಿ ಆಡಳಿತ ನಡೆಸಲು ಪ್ರಾರಂಭಿಸಿದ್ದು 1950ರ ಜನವರಿ 26ರಿಂದ. ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರೂಪಿಸಲಾದ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಕುತೂಹಲಕಾರಿ ವಿಷಯವೆಂದರೆ, 1930ರ ಜನವರಿ 26ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ ವಿರುದ್ಧ 'ಪೂರ್ಣ ಸ್ವರಾಜ್ಯ'ದ ಘೋಷಣೆ ಮಾಡಿತ್ತು. ಆ ಐತಿಹಾಸಿಕ ದಿನದ ಗೌರವಾರ್ಥವಾಗಿಯೇ ಸಂವಿಧಾನ ಜಾರಿಗೊಳಿಸಲು ಇದೇ ದಿನಾಂಕವನ್ನು ಆಯ್ಕೆ ಮಾಡಲಾಯಿತು.
2026ರ ಗಣರಾಜ್ಯೋತ್ಸವದ ಥೀಮ್ 'ವಂದೇ ಮಾತರಂ' ಮತ್ತು 'ಆತ್ಮನಿರ್ಭರ ಭಾರತ' ಎಂಬುದಾಗಿದೆ. ಇದು ಸ್ವಾವಲಂಬನೆಯತ್ತ ಭಾರತದ ದಾಪುಗಾಲನ್ನು ಪ್ರತಿಬಿಂಬಿಸುತ್ತದೆ.
ಮುಖ್ಯ ಅತಿಥಿಗಳು ಯಾರು?
ಈ ಬಾರಿಯ ಸಮಾರಂಭಕ್ಕೆ ಐರೋಪ್ಯ ಒಕ್ಕೂಟದ (EU) ಇಬ್ಬರು ಪ್ರಮುಖ ನಾಯಕರು, ಅಂದರೆ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಲೂಯಿಸ್ ಸ್ಯಾಂಟೋಸ್ ಡಾ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಗಣರಾಜ್ಯೋತ್ಸವದಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಂತರ ರಾಷ್ಟ್ರಪತಿಗಳು ಧ್ವಜಾರೋಹಣ ನೆರವೇರಿಸಲಿದ್ದು, 21 ಕುಶಾಲತೋಪುಗಳ ಗೌರವ ನೀಡಲಾಗುತ್ತದೆ.
ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ನಲ್ಲಿ ಭಾರತದ ಸೇನಾ ಬಲ, ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ವಿವಿಧ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಜನವರಿ 29ರಂದು ವಿಜಯ ಚೌಕ್ನಲ್ಲಿ ನಡೆಯುವ 'ಬೀಟಿಂಗ್ ದಿ ರಿಟ್ರೀಟ್' ಸಮಾರಂಭದೊಂದಿಗೆ ಈ ಸಂಭ್ರಮಾಚರಣೆ ಮುಕ್ತಾಯಗೊಳ್ಳಲಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications