ಗಣರಾಜ್ಯೋತ್ಸವ 2026: 77 ಅಥವಾ 78? ಶುಭಾಶಯ ಕೋರುವ ಮುನ್ನ ಈ ಗೊಂದಲ ಬಗೆಹರಿಸಿಕೊಳ್ಳಿ!
ಭಾರತೀಯರ ಪಾಲಿಗೆ ಅತ್ಯಂತ ಹೆಮ್ಮೆಯ ಹಬ್ಬವಾದ ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದೇಶದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದಿನ ರಾಜಪಥ) ನಡೆಯಲಿರುವ ಅದ್ಧೂರಿ ಪರೇಡ್ಗೆ ಭರ್ಜರಿ ತಯಾರಿಗಳು ನಡೆಯುತ್ತಿವೆ. ಆದರೆ, ಪ್ರತಿಯೊಬ್ಬರಲ್ಲೂ ಕಾಡುವ ಸಾಮಾನ್ಯ ಪ್ರಶ್ನೆಯೆಂದರೆ, ಈ ಬಾರಿ ಭಾರತ ಆಚರಿಸುತ್ತಿರುವುದು 77ನೇ ಗಣರಾಜ್ಯೋತ್ಸವವೇ ಅಥವಾ 78ನೇಯದ್ದೇ ಎಂಬುದು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
2026ರ ಜನವರಿ 26ರಂದು ಭಾರತವು ಅಧಿಕೃತವಾಗಿ ತನ್ನ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಿದೆ. ಭಾರತೀಯ ಸಂವಿಧಾನವು 1950ರ ಜನವರಿ 26ರಂದು ಜಾರಿಗೆ ಬಂದಿತು. ಅಂದು ದೇಶದ ಮೊದಲ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಅಂದಿನಿಂದ ಇಂದಿನವರೆಗೆ ಲೆಕ್ಕ ಹಾಕಿದರೆ, ಈ ವರ್ಷ ನಾವು 77ನೇ ವಾರ್ಷಿಕೋತ್ಸವವನ್ನು ಪೂರೈಸುತ್ತಿದ್ದೇವೆ.

1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ, ದೇಶವು ತನ್ನದೇ ಆದ ಸಂವಿಧಾನದ ಅಡಿಯಲ್ಲಿ ಆಡಳಿತ ನಡೆಸಲು ಪ್ರಾರಂಭಿಸಿದ್ದು 1950ರ ಜನವರಿ 26ರಿಂದ. ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರೂಪಿಸಲಾದ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಕುತೂಹಲಕಾರಿ ವಿಷಯವೆಂದರೆ, 1930ರ ಜನವರಿ 26ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ ವಿರುದ್ಧ 'ಪೂರ್ಣ ಸ್ವರಾಜ್ಯ'ದ ಘೋಷಣೆ ಮಾಡಿತ್ತು. ಆ ಐತಿಹಾಸಿಕ ದಿನದ ಗೌರವಾರ್ಥವಾಗಿಯೇ ಸಂವಿಧಾನ ಜಾರಿಗೊಳಿಸಲು ಇದೇ ದಿನಾಂಕವನ್ನು ಆಯ್ಕೆ ಮಾಡಲಾಯಿತು.
2026ರ ಗಣರಾಜ್ಯೋತ್ಸವದ ಥೀಮ್ 'ವಂದೇ ಮಾತರಂ' ಮತ್ತು 'ಆತ್ಮನಿರ್ಭರ ಭಾರತ' ಎಂಬುದಾಗಿದೆ. ಇದು ಸ್ವಾವಲಂಬನೆಯತ್ತ ಭಾರತದ ದಾಪುಗಾಲನ್ನು ಪ್ರತಿಬಿಂಬಿಸುತ್ತದೆ.
ಮುಖ್ಯ ಅತಿಥಿಗಳು ಯಾರು?
ಈ ಬಾರಿಯ ಸಮಾರಂಭಕ್ಕೆ ಐರೋಪ್ಯ ಒಕ್ಕೂಟದ (EU) ಇಬ್ಬರು ಪ್ರಮುಖ ನಾಯಕರು, ಅಂದರೆ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಲೂಯಿಸ್ ಸ್ಯಾಂಟೋಸ್ ಡಾ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಗಣರಾಜ್ಯೋತ್ಸವದಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಂತರ ರಾಷ್ಟ್ರಪತಿಗಳು ಧ್ವಜಾರೋಹಣ ನೆರವೇರಿಸಲಿದ್ದು, 21 ಕುಶಾಲತೋಪುಗಳ ಗೌರವ ನೀಡಲಾಗುತ್ತದೆ.
ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ನಲ್ಲಿ ಭಾರತದ ಸೇನಾ ಬಲ, ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ವಿವಿಧ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಜನವರಿ 29ರಂದು ವಿಜಯ ಚೌಕ್ನಲ್ಲಿ ನಡೆಯುವ 'ಬೀಟಿಂಗ್ ದಿ ರಿಟ್ರೀಟ್' ಸಮಾರಂಭದೊಂದಿಗೆ ಈ ಸಂಭ್ರಮಾಚರಣೆ ಮುಕ್ತಾಯಗೊಳ್ಳಲಿದೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications