ಆರೆಸ್ಸೆಸ್ನಲ್ಲಿ ಹೊಸ ಜವಾಬ್ದಾರಿ: ದತ್ತಾತ್ರೇಯ ಹೊಸಬಾಳೆ ಜೀವನ, ಸಾಧನೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಎರಡನೆಯ ಅತ್ಯುನ್ನತ ಹುದ್ದೆಗೆ ಕರ್ನಾಟಕದವರಾದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆರೆಸ್ಸೆಸ್ಸ ವಾರ್ಷಿಕ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಸರಕಾರ್ಯವಾಹರನ್ನಾಗಿ ನೇಮಿಸಲಾಗಿದೆ. ಸತತ 12 ವರ್ಷ ದಾಖಲೆಯ ಅವಧಿಗೆ ಸರಕಾರ್ಯವಾಹರಾಗಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದ ಸುರೇಶ್ 'ಭಯ್ಯಾಜಿ' ಜೋಶಿ ಅವರ ಹುದ್ದೆಯನ್ನು ಹೊಸಬಾಳೆ ಅಲಂಕರಿಸಿದ್ದಾರೆ. ಅವರ ಅಧಿಕಾರದ ಅವಧಿ ಮೂರು ವರ್ಷ.
ದತ್ತಾತ್ರೇಯ ಹೊಸಬಾಳೆ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಸಬಾಳೆ ಗ್ರಾಮದವರು. ತಂದೆ ಹೊಸಬಾಳೆ ಶೇಷಗಿರಿಯಪ್ಪ, ತಾಯಿ ಮೀನಾಕ್ಷಮ್ಮ. ಸಂಘದ ವಲಯದಲ್ಲಿ ದತ್ತಾಜಿ ಎಂದೇ ಅವರು ಪ್ರಖ್ಯಾತರು. ದತ್ತಾತ್ರೇಯ ಹೊಸಬಾಳೆ ಅವರದು ಆರೆಸ್ಸೆಸ್ ಹಿನ್ನೆಲೆಯ ಕುಟುಂಬ. ಹೀಗಾಗಿ ಬಾಲ್ಯದಿಂದಲೂ ಸಂಘದ ಚಟುವಟಿಕೆಗಳಲ್ಲಿ ಅಸಕ್ತಿ ಹೊಂದಿದ್ದರು. 1954ರ ಡಿಸೆಂಬರ್ 1ರಂದು ಜನಿಸಿದ ಅವರು, ಸಾಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಪಡೆದರು.
ವಿದ್ಯಾರ್ಥಿ ದೆಸೆಯಿಂದಲೇ ಚಳವಳಿ, ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಅವರು, ಕಾಲೇಜು ಶಿಕ್ಷಣಕ್ಕಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಸೇರಿಕೊಂಡಾಗ ಎಚ್. ನರಸಿಂಹಯ್ಯ ಅವರ ಮಾರ್ಗದರ್ಶನ ದೊರಕಿತು. ಬಳಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಗಳಿಸಿದರು. ಮುಂದೆ ಓದಿ.

ಎಬಿವಿಪಿಯಲ್ಲಿ ಚಟುವಟಿಕೆ
1968ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸೇರಿಕೊಂಡ ಹೊಸಬಾಳೆ, 1972ರಲ್ಲಿ ವಿದ್ಯಾರ್ಥಿ ಸಂಘಟನೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಸದಸ್ಯರಾದರು. ನಂತರ ಅದರ 15 ವರ್ಷ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಚಳವಳಿಗಳಲ್ಲಿ ಭಾಗವಹಿಸಿದ್ದರು.

ಮೀಸಾ ಬಂಧನ
ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ನಡೆಸಿದ್ದ ಗುಂಪಿನಲ್ಲಿ ಸಕ್ರಿಯರಾಗಿದ್ದ ಹೊಸಬಾಳೆ, ಒಂದು ವರ್ಷಕ್ಕೂ ಹೆಚ್ಚು ಕಾಲ ಮೀಸಾ ಬಂಧನಕ್ಕೆ ಒಳಗಾಗಿದ್ದರು. ತುರ್ತು ಪರಿಸ್ಥಿತಿ ಕುರಿತಾಗಿ ಮಾಜಿ ಸರಕಾರ್ಯನಿರ್ವಾಹ ಹೋ.ವೆ. ಶೇಷಾದ್ರಿ ಅವರು ಬರೆದ 'ಭುಗಿಲು' ಪುಸ್ತಕದ ಕಾರ್ಯದಲ್ಲಿ ಹೊಸಬಾಳೆ ಅವರು ತೊಡಗಿಸಿಕೊಂಡಿದ್ದರು.

ಅಸೀಮಾ ಮಾಸ ಪತ್ರಿಕೆ
ವೋಸಿ (ವಿದ್ಯಾರ್ಥಿಗಳು ಮತ್ತು ಯುವಜನರ ಜಾಗತಿಕ ಸಂಘಟನೆ) ಎಂಬ ವಿದ್ಯಾರ್ಥಿಗಳ ಅಂತಾರಾಷ್ಟ್ರೀಯ ಸಂಘಟನೆಯ ಜತೆಗೆ ಅನೇಕ ಸಂಘಟನೆಗಳ ಸೃಷ್ಟಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಜತೆಗೆ ಕನ್ನಡದಲ್ಲಿ ರಾಷ್ಟ್ರೀಯ ವಿಚಾರಗಳನ್ನು ಪ್ರಕಟಿಸುವ 'ಅಸೀಮಾ' ಮಾಸಪತ್ರಿಕೆಯನ್ನು ಸ್ಥಾಪಿಸಿದರು.
Recommended Video

2004ರಲ್ಲಿ ಆರೆಸ್ಸೆಸ್ಗೆ ವಾಪಸ್
2004ರಲ್ಲಿ ಆರೆಸ್ಸೆಸ್ಗೆ ಮರಳಿದ ಬಳಿಕ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡರು. ಅಖಿಲ ಭಾರತೀಯ ಸಹ ಬೌದ್ಧಿಕ ಪ್ರಮುಖ್ ಜವಾಬ್ದಾರಿ ನಿಭಾಯಿಸಿದರು. ಆರೆಸ್ಸೆಸ್ನ ಕಾರ್ಯನಿರ್ವಾಹರಾಗುವ ಮೊದಲು ಸಹ ಕಾರ್ಯನಿರ್ವಾಹರಾಗಿ ಸೇವೆ ಸಲ್ಲಿಸಿದ್ದರು. ಸಂಘಟನೆ, ಸಾಹಿತ್ಯ, ಕಲೆ ಮುಂತಾದವು ಅವರ ಆಸಕ್ತಿಯ ಕ್ಷೇತ್ರಗಳು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications