Get Updates
Get notified of breaking news, exclusive insights, and must-see stories!

S.A. Ramadas profile: ಬಿಜೆಪಿಯ ಹುರಿಯಾಳು ಶಾಸಕ ರಾಮದಾಸ್‌

ಕರ್ನಾಟಕದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಲ್ಲಿ ಮಾಜಿ ವೈದ್ಯಕೀಯ ಸಚಿವ ಎಸ್‌ಎ ರಾಮದಾಸ್‌ ಅವರು ಕೂಡ ಒಬ್ಬರು. ಬಿಜೆಪಿಯಲ್ಲಿ ತಮ್ಮದೇ ಆದ ಐಡೆಂಟಿಟಿಯನ್ನು ಹೊಂದಿದವರು, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ.

ಬೆಂಗಳೂರು, ಮಾರ್ಚ್‌ 3: ಕರ್ನಾಟಕದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಲ್ಲಿ ಮಾಜಿ ವೈದ್ಯಕೀಯ ಸಚಿವ ಎಸ್‌ಎ ರಾಮದಾಸ್‌ ಅವರು ಕೂಡ ಒಬ್ಬರು. ಬಿಜೆಪಿಯಲ್ಲಿ ತಮ್ಮದೇ ಆದ ಐಡೆಂಟಿಟಿಯನ್ನು ಹೊಂದಿದವರು, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ. ಹೀಗಾಗಿ ಅವರ ರಾಜಕೀಯ ಹಿನ್ನೆಲೆಯ ಬಗ್ಗೆ ತಿಳಿಯುವುದು ಅಗತ್ಯ.

24 ಅಕ್ಟೋಬರ್‌ 1957ರಲ್ಲಿ ಜನಿಸಿದ ಎಸ್‌ಎ ರಾಮದಾಸ್‌ ಅವರ ಪೂರ್ಣ ಹೆಸರು ಎಸ್. ಅಶ್ವಥ್ ನಾರಾಯಣ ರಾವ್ ರಾಮದಾಸ್. ಅವರು ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾಗಿದ್ದಾರೆ. ರಾಮದಾಸ್‌ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಧನಗೂರಿನವರು. ಅವರು ಬಿ.ಎ., ಎಂ.ಬಿ.ಎ., ಎಲ್.ಎಲ್.ಬಿ ಪದವಿಯನ್ನು ಪಡೆದಿದ್ದಾರೆ. ಕೃಷ್ಣರಾಜ ಕ್ಷೇತ್ರದಲ್ಲಿ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ.

S.A. Ramadas Age, Biography, Education, Family, Net Worth & Political Career Details

ಮೇ 2008 ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಐತಿಹಾಸಿಕ ವಿಜಯದ ನಂತರ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡರು. 2010 ರಲ್ಲಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನೇಮಕಗೊಂಡರು ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ವಹಿಸಿಕೊಂಡರು. ಅವರನ್ನು ಮೈಸೂರಿನ ಪ್ರಮುಖ ಹಿಂದೂ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರು 1994 ಮತ್ತು 1999 ರಲ್ಲಿ ಎರಡು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಆದರೆ 2004 ರಲ್ಲಿ ಎಂ. ಕೆ. ಸೋಮಶೇಖರ್ ವಿರುದ್ಧ ಸೋತಿದ್ದರು.

2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅವರು ಮಾಜಿ ಶಾಸಕರಾಗಿದ್ದ ಕಾಂಗ್ರೆಸ್ ನಾಯಕ ಎಂ.ಕೆ.ಸೋಮಶೇಖರ್ ವಿರುದ್ಧ ಸ್ಪರ್ಧಿಸಿ ಸುಮಾರು 20,000 ಮತಗಳ ಅಂತರದಿಂದ ಗೆದಿದ್ದರು. ಮೇ 2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಐತಿಹಾಸಿಕ ವಿಜಯದ ನಂತರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

S.A. Ramadas Age, Biography, Education, Family, Net Worth & Political Career Details

2010ರಲ್ಲಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನೇಮಕಗೊಂಡು ವೈದ್ಯಕೀಯ ಶಿಕ್ಷಣ ಖಾತೆಯನ್ನು ವಹಿಸಿಕೊಂಡರು. ಅದೇ ಹುದ್ದೆಯಲ್ಲಿ ಮುಂದುವರಿದು ಡಿ.ವಿ. ಸದಾನಂದಗೌಡ ಸರ್ಕಾರದಲ್ಲಿಯೂ ಮುಂದುವರೆದರು. 2008-2013ರ ವಿಧಾನಸಭೆಯಲ್ಲಿ ಮೈಸೂರು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. 2013ರಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಿ ಐಎನ್‌ಸಿಯ ಎಂ.ಕೆ.ಸೋಮಶೇಖರ್‌ ಅವರನ್ನು ಸೋಲಿಸಿದ್ದರು. ಮಾಜಿ ಸಚಿವ ರಾಮದಾಸ್ ಮೈಸೂರಿನಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಆಸರೆ ಫೌಂಡೇಶನ್ ಎಂಬ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ.

ರಾಮದಾಸ್‌ರವರ 1994ರಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭವಾಯಿತು. 1993 ರಿಂದ 1995 ರ ಅವಧಿಯಲ್ಲಿ ಮೈಸೂರು ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದರು. ಬಳಿಕ1995ರಿಂದ 1997 ರವರೆಗೆ ಮತ್ತು 1997ರಿಂದ 2000 ವರೆಗೆ ಎರಡು ಬಾರಿಗೆ ಕರ್ನಾಟಕ ರಾಜ್ಯದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲಿಂದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಇವರದ್ದು.

ಈ ರಾಜಕೀಯ ನೆಲೆಗಟ್ಟಿನೊಂದಿಗೆ ನೇರವಾಗಿ ರಾಜಕೀಯ ಅಖಾಡಕ್ಕೆ ಇಳಿದಾಗ ಪ್ರಥಮ ಬಾರಿಗೆ 1994ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕೃಷ್ಣರಾಜ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಮೊದಲ ಬಾರಿಗೆ ಸುಮಾರು 9500 ಮತಗಳ ಅಂತರದಲ್ಲಿ ಜಯಗಳಿಸಿ ಶಾಸಕರಾಗಿ ಆಯ್ಕೆಗೊಂಡರು. ನಂತರ ಕೃಷ್ಣರಾಜ ಕ್ಷೇತ್ರವೇ ಇವರ ತವರು ಮನೆಯಾಯಿತು. 1999 ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಸುಮಾರು 10 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಮೂರನೇ ಬಾರಿಗೆ ಸುಮಾರು 19 ಸಾವಿರ ಮತಗಳ ಭಾರಿ ಅಂತರದಿಂದ ಗೆಲ್ಲತ್ತಾರೆ. ಮತ್ತೆ 2004 ರಲ್ಲಿ ನಾಲ್ಕನೇ ಬಾರಿಗೆ ಸುಮಾರು 26500 ಮತಗಳ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+