ಜೀವವೈವಿಧ್ಯ ವನ ಭಾಗ 9; ಸಲೀಂ ಅಲಿ ಅವರಿಗೊಂದು ಸಲಾಂ…
ಜ್ಞಾನಭಾರತಿ ಆವರಣದ ಜೀವವೈವಿಧ್ಯ ವನ ಹಲವು ಪಕ್ಷಿಗಳಿಗೆ ಆಸರೆಯಾಗಿದೆ. ಪಕ್ಷಿ ಪ್ರಿಯರು ಇಲ್ಲಿ ಬಂದು ಪಕ್ಷಿ ವೀಕ್ಷಣೆಯಲ್ಲಿ ತೊಡಗುತ್ತಾರೆ. ಪಕ್ಷಿಗಳ ಫೋಟೊ ಕ್ಲಿಕ್ಕಿಸುತ್ತಾರೆ. ಅವರು ಕಾಣುವ ವಿಶೇಷಣಗಳನ್ನು ದಾಖಲಿಸುತ್ತಾರೆ. ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದು 'ವನಸಿರಿ'ಯನ್ನು ಕಣ್ತುಂಬಿಕೊಂಡು ಹೋಗುತ್ತಾರೆ, ಕಲಿಯುತ್ತಾರೆ, ಕಲಿಸುತ್ತಾರೆ.
ಈಗಾಗಲೇ ಸುಮಾರು ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿಗೆ ಬಂದು ಹೋಗಿರುವುದನ್ನು ಸ್ಮರಿಸಬಹುದು. ಈ ಬಗ್ಗೆ ಇನ್ನೊಂದಿಷ್ಟು ಮಾಹಿತಿಯಿದೆ, ಮುಂದೆ ಓದಿ...

ಇದೆಲ್ಲಾ ಆದದ್ದಾದರೂ ಹೇಗೆ?
ಈಗ್ಗೆ ಇಪ್ಪತ್ತು ವರ್ಷಗಳ ಹಿಂದೆ ಜ್ಞಾನಭಾರತಿ ಆವರಣದಲ್ಲಿ ಜೀವವೈವಿಧ್ಯ ವನ ನಿರ್ಮಾಣ ಕಾರ್ಯ ಆರಂಭವಾಯಿತು. ಹಲವು ಜಾತಿಯ ಗಿಡ ಮರಗಳನ್ನು ಬೆಳೆಸುವ ಕೆಲಸ ನಡೆಯಿತು. ಕಲ್ಯಾಣಿ, ಚೆಕ್ ಡ್ಯಾಂಗಳನ್ನು ನಿರ್ಮಿಸಲಾಯಿತು. ಇದರಿಂದ ಒಂದು ಸಹಜ ಕಾಡಿನಲ್ಲಿ ಇರಬಹುದಾದ ವಾತಾವರಣ ಜ್ಞಾನಭಾರತಿ ಆವರಣಕ್ಕೆ ಪ್ರಾಪ್ತವಾಯಿತು. ಹಲವು ಜಾತಿಯ ಪಕ್ಷಿಗಳು ಇಲ್ಲಿ ನೆಲೆ ಕಂಡುಕೊಂಡವು.

ಸಲೀಂ ಅಲಿ ಹೇಳಿರುವ ಮಾತು...
Bird Man of Inida ಸಲೀಂ ಅಲಿ ಹೇಳುವಂತೆ "ಜನರು ಪಕ್ಷಿಧಾಮವೆಂದರೆ ಅದೊಂದು glorified zoo ಎಂದು ಭಾವಿಸಿದ್ದಾರೆ. ಆದರೆ ಅವರಿಗೆ ಅರ್ಥವಾಗದ ವಿಷಯವೇನೆಂದರೆ, ಒಂದು ಸಂರಕ್ಷಿತ ಪರಿಸರವಿದ್ದಾಗ ಹಕ್ಕಿ ಪಕ್ಷಿಗಳು ತಂತಾನೆ ಬರುತ್ತವೆ. ಅಲ್ಲಿ ಅವುಗಳಿಗೆ ಆಹಾರ ನೀರು ಸಿಕ್ಕರೆ, ಆ ಪ್ರದೇಶ ಗೂಡು ಕಟ್ಟಲು ಸುರಕ್ಷಿತ ಸ್ಥಳವೆನಿಸಿದರೆ ಅಲ್ಲಿಯೇ ಬದುಕುತ್ತವೆ"...
ಇದೀಗ ಜ್ಞಾನ ಭಾರತಿ ಆವರಣದಲ್ಲಿ ಆಗಿರುವುದು ಇದೇ. ಇಲ್ಲಿ ಕಾಡು ನಿರ್ಮಾಣಗೊಂಡಿದೆ. ಹಕ್ಕಿ ಪಕ್ಷಿಗಳಿಗೆ ತಂಗಲು ಸುರಕ್ಷಿತ ಪ್ರದೇಶವಾಗಿದೆ. ಅವುಗಳಿಗೆ ಆಹಾರವಿದೆ, ನೀರಿದೆ. So ಸಲೀಂ ಅಲಿ ಹೇಳಿದಂತೆ ನೈಸರ್ಗಿಕವಾದ ಪಕ್ಷಿಧಾಮವಾಗಿ ರೂಪುಗೊಂಡಿದೆ.

ಪಕ್ಷಿತಜ್ಞರಿಗೆ ಪ್ರಿಯವಾದ ತಾಣ
ಇಲ್ಲಿಗೆ ಬಂದು ಹೋಗುವ ಅನೇಕ ಪಕ್ಷಿ ತಜ್ಞರು ಅಳಿವಿನಂಚಿನಲ್ಲಿರುವ ಪಕ್ಷಿಗಳನ್ನೂ ಗುರುತಿಸಿ ಸಂಭ್ರಮಿಸಿದ್ದಾರೆ. ಡಾ.ಗಿರೀಶ್ ಮತ್ತು ಡಾ. ಕುಮಾರ್ ಜ್ಞಾನಭಾರತಿ ಆವರಣದ ಪಕ್ಷಿಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಅವರು ಕಂಡದ್ದು, ನೋಡಿದ್ದು ತಿಳಿದದ್ದನ್ನು ಇತರರೊಂದಿಗೆ ಹಂಚಿಕೊಳ್ಳುತ್ತಾರೆ. ಪಕ್ಷಿಗಳ ಫೋಟೊಗಳನ್ನೂ ಕೂಡ.
ನಿತ್ಯ ಬೆಳಿಗ್ಗೆ ಇಲ್ಲಿ ಸೇರುವ ವಾಕರ್ಸ್ ಜಾಗರ್ಸ್ ಹಕ್ಕಿಗಳ ಚಿಲಿಪಿಲಿ ನಾದದೊಂದಿಗೆ ತಮ್ಮ ದಿನ ಆರಂಭಿಸುತ್ತೀರಲ್ಲವೇ?.
Recommended Video

ನ.12 ಸಲೀಂ ಅಲಿ 125ನೇ ಜನ್ಮದಿನ
ನಾಳೆ ದಿನಾಂಕ 12 ನವೆಂಬರ್. ಹಕ್ಕಿಗಳ ಚಿಲಿಪಿಲಿಯನ್ನು ಧ್ಯಾನವಿಟ್ಟು ಕೇಳಿಸಿಕೊಳ್ಳಿ. ಅವೆಲ್ಲವೂ BIRD MAN OF INDIA ಸಲೀಂ ಅಲಿ ಅವರಿಗೆ 125ನೇ ಜನ್ಮದಿನದ ಶುಭಾಶಗಳನ್ನು ಕೋರಬಹುದು. ಇಂಥದೊಂದು ಮಾನವ ನಿರ್ಮಿತ ವನ ನಮ್ಮ ಮುಂದಿನ ಪೀಳಿಗೆಗೆ ಉಳಿಸಬೇಕಾದ್ದು ಎಲ್ಲಾ ಜವಾಬ್ದಾರಿಯುತ ನಾಗರೀಕರ, ಸಂಸ್ಥೆಗಳ, ಸರ್ಕಾರಗಳ ಕರ್ತವ್ಯವಾಗಬೇಕು. ಅದು ಬಿಟ್ಟು ಈ ವನಕ್ಕೆ ಕೊಡಲಿ ಹಾಕುವುದೆಂದರೆ ಮುಂದಿನ ಪೀಳಿಗೆಯ ಕತ್ತು ಹಿಚುಕಿದಂತೆ.
ಬೆಂಗಳೂರಿನಂಥ ಬರಗೆಟ್ಟ ನಾಡಿನಲ್ಲಿ ಜೀವ ತುಂಬಿಕೊಂಡಿರುವ ಜೀವವೈವಿಧ್ಯ ವನ ಉಳಿಸಿಕೊಳ್ಳುತ್ತೇವೆಂದು ಪ್ರತಿಜ್ಞೆಗೈಯುತ್ತಾ ಮತ್ತೊಮ್ಮೆ ಸಲೀಂ ಅಲಿ ಅವರ 125ನೇ ಜನ್ಮದಿನದಂದು ಅವರಿಗೆ BIRDS SALAM... NATURE SALAAM... ಹೇಳೋಣ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ











Click it and Unblock the Notifications