ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹಿನ್ನೆಲೆ ಏನು?
ಸರಳ ವಾಸ್ತು ಸಂಶೋಧಕ ಎನಿಸಿಕೊಂಡಿದ್ದ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯಾಗಿದೆ. ಇಂಜಿನಿಯರ್ ಆಗಿದ್ದ ಚಂದ್ರಶೇಖರ್ ವಾಸ್ತುತಜ್ಞರಾಗಿ ಜನಪ್ರಿಯರಾದರು.
Recommended Video
ಸರಳವಾಸ್ತು ಸಂಸ್ಥೆ ಅಧಿಕೃತವಾಗಿ ಹೇಳಿಕೊಂಡಿರುವಂತೆ, ಚಿಕ್ಕಂದಿನಿಂದಲೇ ಜನರ ನೋವು, ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಚಂದ್ರಶೇಖರ್ ರೂಢಿಸಿಕೊಂಡಿದ್ದರು. ಬಾಗಲಕೋಟೆ ಮೂಲದವರಾದ ಚಂದ್ರಶೇಖರ್ ತಮ್ಮ 8ನೇ ವಯಸ್ಸಿನಲ್ಲಿ ದೇವಸ್ಥಾನವೊಂದರದ ಜೀರ್ಣೋದ್ಧಾರಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಕೈಜೋಡಿಸಿದ್ದರು.
14ನೇ ವಯಸ್ಸಿನಲ್ಲಿ ಜೀವನ ಸಾರ್ಥಕತೆಗಾಗಿ ಭಾರತೀಯ ಸೇನೆ ಸೇರಲು ಯತ್ನಿಸಿದ್ದರು. ಆದರೆ, ಸೇನೆಗೆ ಆಯ್ಕೆಯಾಗಲು ಸಾಧ್ಯವಾಗಲಿಲ್ಲ. ಆದರೆ, ಉತ್ತಮ ಶಿಕ್ಷಣ ಪಡೆಯುವ ಗುರಿಯನ್ನು ಮುಂದುವರೆಸಿದರು.

ಬಾಗಲಕೋಟೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ಮುಂಬೈನಲ್ಲಿ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುವ ಹಂಬಲ ಕಡಿಮೆಯಾಗಿರಲಿಲ್ಲ.
ಚಂದ್ರಶೇಖರ್ ಗುರೂಜಿ ಹತ್ಯೆ ನಡೆದ ನಾಲ್ಕು ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ಹಾಗೂ ಅಂತ್ಯಕ್ರಿಯೆ ಜುಲೈ 6ರಂದು ನಡೆಯಲಿದ್ದು, ಹುಬ್ಬಳ್ಳಿ ಬಳಿಯ ಗ್ರಾಮವೊಂದರ ಜಮೀನಿನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

ಉತ್ತಮ ಶಿಕ್ಷಣ ಪಡೆಯುವ ಗುರಿ
ಬಾಗಲಕೋಟೆ ಮೂಲದ ಚಂದ್ರಶೇಖರ್ ಗುರೂಜಿ ಮೂಲ ಹೆಸರು ವಿರುಪಾಕ್ಷಪ್ಪ ಅಂಗಡಿ. ಚಂದ್ರಶೇಖರ್ ಗುರೂಜಿ ಅವರು ಇಬ್ಬರು ಸೋದರರು, ಇಬ್ಬರು ಪತ್ನಿಯರು, ಮೂವರು ಸಹೋದರಿಯರು ಇದ್ದರು. ಸದ್ಯ ಒಬ್ಬ ಸೋದರಿ ನಿಧನರಾಗಿದ್ದಾರೆ.
14ನೇ ವಯಸ್ಸಿನಲ್ಲಿ ಜೀವನ ಸಾರ್ಥಕತೆಗಾಗಿ ಭಾರತೀಯ ಸೇನೆ ಸೇರಲು ಯತ್ನಿಸಿದ್ದರು. ಆದರೆ, ಸೇನೆಗೆ ಆಯ್ಕೆಯಾಗಲು ಸಾಧ್ಯವಾಗಲಿಲ್ಲ. ಆದರೆ, ಉತ್ತಮ ಶಿಕ್ಷಣ ಪಡೆಯುವ ಗುರಿಯನ್ನು ಮುಂದುವರೆಸಿದರು.

1995ರಲ್ಲಿ ಶರಣ ಸಂಕುಲ ಟ್ರಸ್ಟ್
ಬಾಗಲಕೋಟೆಯ ಬಸವೇಶ್ವರ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ಮುಂಬೈನಲ್ಲಿ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುವ ಹಂಬಲ ಕಡಿಮೆಯಾಗಿರಲಿಲ್ಲ.
1995ರಲ್ಲಿ ಶರಣ ಸಂಕುಲ ಟ್ರಸ್ಟ್ ಸ್ಥಾಪಿಸಿ ,ಟ್ರಸ್ಟಿಯಾಗಿ ಸಮಾಜಮುಖಿ ಕಾರ್ಯಗಳಿಗೆ ಚಲನೆ ನೀಡಿದರು. 1998ರಲ್ಲಿ ಮೊದಲ ಬಾರಿಗೆ ಮನೆ, ವಾಸ್ತು ಬಗ್ಗೆ ಕನಸು ಕಾಣಲಾರಂಭಿಸಿದರು. ಈ ಜೀವನದಲ್ಲಿ ಜನರ ಸಮಸ್ಯೆ ಬಗೆಹರಿಸಲು ಮನೆ ವಾಸ್ತು ಅಗತ್ಯದ ಬಗ್ಗೆ ಆಲೋಚಿಸಿ ಸರಳ ವಾಸ್ತು ರೂಪಿಸುವ ಬಗ್ಗೆ ಚಿಂತಿಸಿದರು.

ಜನರ ಕಷ್ಟಗಳಿಗೆ ಸರಳ ಪರಿಹಾರ
ಭಾರತದ ಪುರಾತನ ವಾಸ್ತುಶಾಸ್ತ್ರದ ಆಧಾರದ ಮೇಲೆ ಸರಳ ವಾಸ್ತು ರೂಪಿಸಿದರು. ಮಾಗದರ್ಶಕ, ಸಲಹೆಗಾರರಾಗಿ ಗುರುತಿಸಿಕೊಂಡರು. ಜನರ ಕಷ್ಟಗಳಿಗೆ ಸರಳ ಪರಿಹಾರಗಳನ್ನು ಸೂಚಿಸುತ್ತಾ ಬಂದರು. ಅವರು ಪಾಲಿಸುತ್ತಾ ಬಂದಿದ್ದ ಐದು ತತ್ವಗಳು ಆಥವಾ ಸೂತ್ರಗಳು
-ಯಾರಿಗೂ ಮೋಸ ಮಾಡಬಾರದು
-ಜೀವನದಲ್ಲಿ ಮೇಲಿನ ಸ್ತರಕ್ಕೇರಿದರೂ ಸೌಜನ್ಯದಿಂದಿರಬೇಕು
-ಹೆತ್ತವರ ಆಶೀರ್ವಾದ, ಆರೈಕೆಯಿಂದ ದೂರಾಗಬಾರದು
-ಸಂತ್ರಸ್ತರಿಗೆ ಸದಾ ಕಾಲ ನೆರವು ನೀಡಬೇಕು
-ಸದಾಕಾಲ ಸಂತೋಷದಿಂದರಬೇಕು ಹಾಗೂ ಇತರರ ಸಂತೋಷಕ್ಕಾಗಿ ದುಡಿಯಬೇಕು ಎಂಬ ಸರಳ ಸಲಹೆ ಸೂಚನೆ ನೀಡುತ್ತಿದ್ದರು.

ಸರಳ ವಾಸ್ತು ಎಂಬ ವಾಹಿನಿ
ಜನಪ್ರಿಯತೆಯ ತುತ್ತತುದಿ ಮುಟ್ಟಿದ್ದ ಡಾ ಚಂದ್ರಶೇಖರ್ ಗುರೂಜಿ ಸರಳ ವಾಸ್ತು ಎಂಬ ವಾಹಿನಿಯನ್ನೇ ಆರಂಭಿಸಿದ್ದರು. ಚಂದ್ರಶೇಖರ್ ಸಲಹೆ ಪಡೆದು ವಾಸ್ತು ಬದಲಾಯಿಸಿಕೊಂಡು ಅನೇಕರು ಏಳಿಗೆ ಕಂಡಿದ್ದರು. ಅನೇಕ ಖಾಸಗಿ ವಾಹಿನಿಗಳಲ್ಲಿ ತಮ್ಮ ಸಲಹೆ ಸೂಚನೆ ನೀಡುತ್ತಿದ್ದರು. ತಮ್ಮ ಕಚೇರಿಗೆ ಬರುವವರಿಂದ ಇಂತಿಷ್ಟು ಮೊತ್ತ ಸಂಭಾವನೆ ಪಡೆದುಕೊಳ್ಳುತ್ತಿದ್ದರು. ವಾಸ್ತು ಪ್ರಕಾರ ಪರಿಹಾರ ಪಡೆದ ಬಳಿಕ ಏಳಿಗೆ ಕಾಣದಿದ್ದಾಗ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ
ಚಂದ್ರಶೇಖರ್ ಗುರೂಜಿ ಸರಳವಾಸ್ತು ಹೆಸರಿನಲ್ಲಿ ವಾಸ್ತು ಶಾಸ್ತ್ರದ ನೈಜತೆ ಅಪಮೌಲ್ಯಗೊಳಿಸಿದ್ದಾರೆ ಎಂದು ಆರೋಪಿಸಿರುವ ಶೈಲೇಶ್ ಜೈನ್, ಸರಳವಾಸ್ತು ಹೆಸರಿನಲ್ಲಿ ಚಂದ್ರಶೇಖರ್ ಗುರೂಜಿ ತಮ್ಮ ಸಿಬ್ಬಂದಿ ಮೂಲಕ ಚೀನಾ ಆಟಿಕೆ ವಸ್ತುಗಳನ್ನು ಪರಿಹಾರ ಎಂಬಂತೆ ಜನರಿಗೆ ಮಾರಾಟ ಮಾಡಿ ಮೋಸ ಮಾಡುತ್ತಿದ್ದಾರೆ, ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಮಂಗಳೂರು ಮೂಲದ ಶೈಲೇಶ್ ಜೈನ್ ಆರೋಪಿಸಿದ್ದರು. ಆದರೆ, ಈ ಬಗ್ಗೆ ಚಂದ್ರಶೇಖರ್ ಯಾವುದೇ ರೀತಿ ಖಾರವಾಗಿ ಪ್ರತಿಕ್ರಿಯಿಸಿರಲಿಲ್ಲ.

ತಂತ್ರಜ್ಞಾನ ಜೊತೆಗೆ ವಾಸ್ತು
ಅಂಗಡಿ, ಹೋಟೆಲ್, ಮನೆ, ಕಚೇರಿ, ಕಾರ್ಖಾನೆ, ಆಸ್ಪತ್ರೆ, ಕೈಗಾರಿಕೆ, ಕಾರ್ಪೊರೇಟ್ ಸಂಸ್ಥೆ,ಶಿಕ್ಷಣ ಸಂಸ್ಥೆ ಹೀಗೆ ಎಲ್ಲಾ ಕಟ್ಟಡಗಳಿಗೂ ಸರಳ ವಾಸ್ತುವನ್ನು ತಂತ್ರಜ್ಞಾನ ಜೊತೆಗೆ ಅಳವಡಿಸಿಕೊಳ್ಳುವುದನ್ನು ಚಂದ್ರಶೇಖರ್ ಗುರೂಜಿ ತಿಳಿಸುತ್ತಿದ್ದರು. ಮುಂಬೈ, ಬೆಂಗಳೂರು ಸೇರಿದಂತೆ ವಿವಿಧೆಡೆ ಕಚೇರಿ ಹೊಂದಿದ್ದರು. ಬಾಗಲಕೋಟೆಯ ಹುಂಡೇಕಾರ ಓಣಿಯಲ್ಲಿ ಮನೆಯಲ್ಲಿ ಹೊಂದಿದ್ದಾರೆ. ಅಂದ ಹಾಗೆ, ಚಂದ್ರಶೇಖರ್ ಗುರೂಜಿ ವಾಸ್ತು ಅಧ್ಯಯನ ಮಾಡಿದ್ದು ಸಿಂಗಪುರದಲ್ಲಿ ಎಂಬುದು ವಿಶೇಷ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ!











Click it and Unblock the Notifications