Jaggesh: ಮತ್ತೆ ನೋಡಲಾಗದ ಮಹಾಕುಂಭದ ಬಗ್ಗೆ ಜಗ್ಗೇಶ್ ವರ್ಣನೆ ಹೇಗಿತ್ತು?
ಬೆಂಗಳೂರು, ಫೆಬ್ರವರಿ 20: ಭಾರತದಲ್ಲಿ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಪ್ರಮುಖವಾದ ಮಹಾ ಕುಂಭಮೇಳಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಜನವರಿ 13ರಿಂದ ಚಾಲನೆ ಸಿಕ್ಕಿದ್ದು, ಈವರೆಗೂ ಸುಮಾರು ಐವತ್ತು ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇನ್ನೂ ಆರು ದಿನಗಳ ಕಾಲ ನಡೆಯಲಿರುವ ಮಹಾ ಕುಂಭಮೇಳದಲ್ಲಿ ಆರವತ್ತು ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ.
ಕರ್ನಾಟಕದಿಂದಲೂ ಸಾವಿರಾರು ಭಕ್ತರು ಹಾಗೂ ಗಣ್ಯರು ಕೂಡ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದು, ಇದೀಗ ರಾಜ್ಯ ಸಭಾ ಸದಸ್ಯ ಹಾಗೂ ಹಿರಿಯ ನಟ ಜಗ್ಗೇಶ್ ಪ್ರಯಾಗ್ ರಾಜ್ಗೆ ತೆರಳಿ ಗಂಗಾ, ಯಮುನಾ ಮತ್ತು ಸರಸ್ವತಿ ಮಹಾ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರಾ ಸ್ನಾನ ಕೈಗೊಂಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರು ಅವರು, ಮಹಾ ಕುಂಭಮೇಳಕ್ಕೆ ಹೋಗಿ ನಾನು ಭಾವುಕನಾದೆ ನನ್ನ ವಂಶದ ಎಲ್ಲಾ ಹಿರಿಯರ ನೆನೆದೆ. ಮುಂದಿನ ಪೀಳಿಗೆಯ ಮಕ್ಕಳಿಗೆ ಶುಭಕೋರಿದೆ ಎಂದಿದ್ದಾರೆ.

'ಕಳೆದ ಬಾರಿ 1880ರಲ್ಲಿ ನಡೆದದ್ದು ಈ ಮಹಾಕುಂಭಮೇಳ. ನನ್ನ ತಾತನ ಜನನ ಆದದ್ದು 1896 ಅಂದರೆ ನಮ್ಮ ತಾತ ಹುಟ್ಟುವ 16ವರ್ಷದ ಹಿಂದೆ.
ನಮ್ಮ ತಾತನಿಂದ ನನ್ನ ಮೊಮ್ಮಗ ಅರ್ಜುನ 5ನೆ ತಲೆಮಾರಿಗೆ ಬಂದಿದೆ. ಮುಂದಿನ ಬಾರಿ ಈ ಮಹಾಕುಂಭ ಬರೋದು 2170 ಇಸವಿಯಲ್ಲಿ ಅಂದರೆ ನಮ್ಮ ಮುಂದಿನ 5 ತಲೆಮಾರಿನ ಬದುಕು ಇಲ್ಲವಾಗಿರುತ್ತದೆ'.
'ನಾನು ನನ್ನದು, ನನ್ನ ಹಣ, ನನ್ನ ಮನೆ, ನನ್ನ ಹೆಂಡತಿ, ನನ್ನ ಮಕ್ಕಳು, ನನ್ನ ಪರಿವಾರ ಎನ್ನುವ ಕಥೆ ಏನಾಗಿರುತ್ತದೆಯೋ ದೇವರೆ ಬಲ್ಲ. ಕಡೆಯ ಪಕ್ಷ ನಮ್ಮ ಚಿತ್ರಪಟವು ಗೋಡೆಯಿಂದ ಮರೆಯಾಗಿ ಹಟ್ಟಸೇರುತ್ತೆ ಇಲ್ಲ ಕಸದ ಜೊತೆ ಲೀನ. ನಾವು ದುಡಿದದ್ದು ಮುಂದಿನವರು ಉಳಿಸಿಕೊಂಡಿದ್ದರೆ ಅಲ್ಪಸ್ವಲ್ಪ ಹರಟೆಯಲ್ಲಿ ನಮ್ಮ ಹೆಸರು ಬಂದುಹೋಗಬಹುದು. ಆದರೆ ಯಾರು ಹೋದರು ಒಬ್ಬರು ನೆನಪಲ್ಲಿ ಉಳಿದೆ ಇರುತ್ತಾರೆ ಅವರೇ ಶಾರದಾಸುತರು ಅಂದರೆ ಗಾಯಕರು ನಟರು ನಟಿಯರು ಸಂಗೀತ ವಿದ್ವಾಂಸರು ಹಾಗೂ ಲೇಖಕರು'.

'ಮಹಾಕುಂಭಕ್ಕೆ ಆಧ್ಯಾತ್ಮಿಕ ಸಾಧನೆಗೆ ಹೋದವರಿಗೆ ನಾನು ಮೇಲೆ ಹೇಳಿದ್ದ ಎಲ್ಲಾ ಮಾತುಗಳು ಮಾನಸದಲ್ಲಿ ಮಜ್ಜನವಾಗಿ ನಾನು ದೇಹವಲ್ಲಾ ಮುಂದೆ ಮಣ್ಣು ಎಂಬ ಅರಿವು ಮನದ ಆಳಕ್ಕೆ ಹೋಗಿ ಮನನವಾಗಿ ಮೌನವಾಗಿ ಅಹಂಕಾರ ಅಡಗಿ ಮನಸ್ಸು ಶಾಂತವಾಗುತ್ತದೆ. ನಾನು ಹೋದೆ ನೋಡಿದೆ ಬಂದೆ ಎನ್ನುವವರಿಗೆ ಅವರ ಬದುಕಿನ ಮತ್ತೊಂದು ಪ್ರವಾಸ ಅನ್ನಿಸುತ್ತದೆ. ನಾನು ಭಾವುಕನಾದೆ ನನ್ನ ವಂಶದ ಎಲ್ಲಾ ಹಿರಿಯರ ನೆನೆದೆ. ಮುಂದಿನ ಪೀಳಿಗೆಯ ಮಕ್ಕಳಿಗೆ ಶುಭಕೋರಿದೆ. ನನಗನ್ನಿಸಿದ್ದು ದೇವರ ಕೃಪೆಯಿಲ್ಲದೆ ನಮ್ಮ ಬದುಕಿನ ಆಟ ಯಾವುದು ನಡೆಯದು. ಇನ್ನು ಸಮಯವಿದೆ ಹೋಗುವವರು ಹೋಗಿ ಬನ್ನಿ ಮತ್ತೆ ನೋಡಲಾಗದು ಈ ಮಹಾಕುಂಭ' ಎಂದು ಜಗ್ಗೇಶ್ ಮಹಾ ಕುಂಭಮೇಳದ ಮಹತ್ವವನ್ನು ವಿವರಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications