ಶಂಕರಾಚಾರ್ಯ ಜಯಂತಿ 2022: ಈ ಮಂಗಳಕರ ದಿನದ ಮಹತ್ವ, ಇತಿಹಾಸ ತಿಳಿಯಿರಿ
ಶಂಕರಾಚಾರ್ಯ ಜಯಂತಿಯನ್ನು ಹಿಂದೂ ತಿಂಗಳ ವೈಶಾಖದ ಐದನೇ ದಿನದಂದು ಆಚರಿಸಲಾಗುತ್ತದೆ. ಇದು ಶುಕ್ಲ ಪಕ್ಷದ ಸಮಯದಲ್ಲಿ ಐದನೇ ದಿನವನ್ನು ಸೂಚಿಸುತ್ತದೆ. ಅದರಂತೆ ಗ್ರೆಗೋರಿಯನ್ ಕ್ಯಾಲೆಂಡರ್, ದಿನವು ಪ್ರತಿ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬರುತ್ತದೆ. ಈ ವರ್ಷ, ಇದನ್ನು ಇಂದು ಅಂದರೆ ಮೇ 6, 2022 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಹಿಂದೂಗಳಲ್ಲಿ ಧಾರ್ಮಿಕ ಮತ್ತು ಪವಿತ್ರ ಹಬ್ಬವೆಂದು ಪರಿಗಣಿಸಲಾಗಿದೆ. ಏಕೆಂದರೆ ಶಿವನ ಅವತಾರ ಎಂದು ಕರೆಯಲ್ಪಡುವ ಆದಿ ಶಂಕರಾಚಾರ್ಯರ ಜನ್ಮದಿನವನ್ನು ಇಂದು ಆಚರಿಸಲಾಗುತ್ತದೆ. ವೈದಿಕ ಜ್ಞಾನವನ್ನು ಕಲಿಸಿದ ಜಗದ್ಗುರು ಎಂದೂ ಇವರನ್ನು ಕರೆಯಲಾಗುತ್ತದೆ. ಹಿಂದೂಗಳು ಈ ಶುಭ ದಿನವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ.
ಸಾವಿರದ ಇನ್ನೂರು ವರ್ಷಗಳ ಹಿಂದೆ ಸಾವಿರದ (ಸಾವೇ ಇರದ) ದೀಪದಂತಿದ್ದ ವೇದವು ನಾಸ್ತಿಕರೆಂಬ ಬೂದಿಯಿಂದ ಮುಚ್ಚಲ್ಪಟ್ಟು ಮಂಕಾಗಿದ್ದ ಸಮಯ. ಇನ್ನೊಂದು ಕಡೆ ವಾಸ್ತವವಾದ ಆಸ್ತಿಕ ಅರ್ಥಕ್ಕೆ ವಿರುದ್ಧವಾದ ಅರ್ಥಕಲ್ಪನೆಯಿಂದ ಅದೇ ದೀಪವು ಕಾಡ್ಗಿಚ್ಚಿನಂತೆ ಸುಡುವಂತಾಗಿದ್ದ ಕಾಲ. ಪ್ರತಿಯೊಬ್ಬರೂ ಧರ್ಮ ಮತ್ತು ಜ್ಞಾನವೆಂಬ ಎರಡು ಕಣ್ಣುಗಳನ್ನು ಮುಚ್ಚಿಕೊಂಡು ಕುರುಡಾದ ಸಮಯ. ಇಡೀ ಜಗತ್ತು ಅಂತಃಸತ್ವವೂ ಇಲ್ಲದೆ ಬಹಿರಾಧಾರವೂ ಇಲ್ಲದೇ ನರಳುತ್ತಿದ್ದ ಆ ಕಾಲ ಆಶ್ಚರ್ಯವೊಂದಕ್ಕೆ ಸಾಕ್ಷಿಯಾಯಿತು. ಅದೇ ಸಮಯದಲ್ಲಿ ಭಾರತದ ದಕ್ಷಿಣದ ತುದಿಲ್ಲೊಬ್ಬ ಬಾಲಕನು ಅಮಾವಾಸ್ಯೆಯಲ್ಲಿ ಮರೆಯಾದ ಚಂದ್ರ ಚೌತಿಯಂದು ಈಶ್ವರನ ತಲೆಯಲ್ಲಿ ಮತ್ತೆ ಮೆರೆಯುವಂತೆ ತನ್ನ ಎಂಟನೆಯ ವಯಸ್ಸಿಗೆ ಆ ದೀಪವನ್ನು ಶಿರಸ್ಸಿನಲ್ಲಿ ಧರಿಸಿ ಪುನಃ ಪ್ರಜ್ವಲಿಸುವ ಅವಕಾಶವನ್ನು ನೀಡಿದ್ದಲ್ಲದೆ ನಂದಾದೀಪದಂತೆ ನಿತ್ಯತ್ವವನ್ನು ಪಡೆಯುವಂತೆ ಮಾಡಿದನು. ಜಗತ್ತಿಗೆ ವೇದಚಂದ್ರನನ್ನು ಧರಿಸಿದ (ಉದ್ಧರಿಸಿದ) ಶಂಕರನಂತೆ ಕಂಡನು.

'ಆತ್ಮನೇ ಪರಮಾತ್ಮ'
ತನ್ನ ಹನ್ನೆರಡನೇ ವರ್ಷಕ್ಕೆ ಸಕಲ ವೇದಾಂಗಗಳನ್ನು ಶಾಸ್ತ್ರಗಳನ್ನು ಅಧ್ಯಯನ ಮಾಡಿ ಸಯುಕ್ತಿಗಳಿಂದ ವೇದವು ಮೋಕ್ಷಮಾರ್ಗದ ದೀಪವಾಗುವುದೇ ಹೊರತು ಬೆಂಕಿಯಾಗಲಾರದು ಎಂದು ಸಾಬೀತು ಪಡಿಸಿದನು. ಎಲ್ಲಕಿಂತ ಮಿಗಿಲಾಗಿ ಕಟ್ಟುಕಥೆಯ ಹರಿಕಾರರಿಂದ ವೇದವು ಆತ್ಮ ಮತ್ತು ಆತ್ಮಕ್ಕಿಂತ ಭಿನ್ನವಾದ ಪರಮಾತ್ಮನನ್ನು ಬೋಧಿಸುತ್ತದೆ ಎಂದು ಸಾರುತ್ತಿದ್ದವರಿಂದ ವೇದವನ್ನು ರಕ್ಷಿಸಿ ಆತ್ಮನೇ ಪರಮಾತ್ಮನು, ಜೀವನು ಮೋಹಾದಿ ಮಾಯೆಯಿಂದ ಕನಸಿನಂತೆ ಜಗತ್ತನ್ನು ಅನುಭವಿಸುತ್ತಿದ್ದಾನೆ ಎಂದು ವಾಸ್ತವತೆಯನ್ನು ಅರಿವಿಗೆ ಬರುವಂತೆ ಹದಿನಾರನೇ ವಯಸ್ಸಿನಲ್ಲೇ ವೇದಗಳಿಗೆ ಭಾಷ್ಯವನ್ನು ಬರೆದು ಪ್ರತಿಪಾದಿಸಿದನು.

ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠ
ಸಾಮಾನ್ಯ ನಂಬಿಕೆಯ ಪ್ರಕಾರ, ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ನಂಬಿಕೆ ಮತ್ತು ತತ್ವಶಾಸ್ತ್ರದ ಬಗ್ಗೆ ಎಲ್ಲರಿಗೂ ಕಲಿಸಿದರು. ಅವರು ಉಪನಿಷತ್ತುಗಳು, ಭಗವದ್ಗೀತೆ ಮತ್ತು ಬ್ರಹ್ಮಸೂತ್ರಗಳ ಮೂಲ ತತ್ವಗಳ ಬಗ್ಗೆ ಬೋಧನೆಗಳನ್ನು ಹರಡಿದರು. ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಲು ಅವರು ವಿವಿಧ ದೇಶಗಳಿಗೆ ಭೇಟಿ ನೀಡಿ ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು ಎಂದು ಹೇಳಲಾಗುತ್ತದೆ. ಅವುಗಳೆಂದರೆ, ಉತ್ತರದಲ್ಲಿ ಕಾಶ್ಮೀರ, ದಕ್ಷಿಣದಲ್ಲಿ ಶೃಂಗೇರಿ, ಪೂರ್ವದಲ್ಲಿ ಪುರಿ ಮತ್ತು ಪಶ್ಚಿಮದಲ್ಲಿ ದ್ವಾರಕಾ.
ಅಷ್ಟವರ್ಷೇ ಚತುರ್ವೇದಿ ದ್ವಾದಶೇ ಸರ್ವಶಾಸ್ತ್ರವಿತ್ ಷೋಡಶೇ ಕೃತವಾನ್ ಭಾಷ್ಯಂ ದ್ವಾತ್ರಿಂಶೇ ಮುನಿರಭ್ಯಗಾತ್ ಎಂಬ ಶ್ಲೋಕದಿಂದ ಆರಾಧಿಸಿ ಶ್ರೀಶಂಕರಭಗವತ್ಪಾದಾಚಾರ್ಯರೆಂದು ಆರಾಧಿಸುತ್ತೇವೆ. ಅಂಥ ಮಹಾತ್ಮರ ಜನ್ಮ ಪಡೆದ ಆ ಪುಣ್ಯದಿನ ವೈಶಾಖ ಮಾಸದ ಶುಕ್ಲ ಪಂಚಮೀ. ಈ ಸಂವತ್ಸರದಲ್ಲಿ ಆ ಶುಭ ಮುಹೂರ್ತ ಇಂದು (06-05-2022) ಬಂದಿದೆ.

ಜಗತ್ತನ್ನು ಜಾಗೃತಗೊಳಿಸಲು ಬಂದ ಶಿವ
ಸುಮಾರು 2500 ವರ್ಷಗಳ ಹಿಂದೆ, ಮಾನವರು ಸಾಕಷ್ಟು ಅಶಾಂತಿಯನ್ನು ಕಂಡಿದ್ದರು. ಶಾಂತಿಯ ಯಾವುದೇ ಚಿಹ್ನೆಗಳು ಇರಲಿಲ್ಲ ಮತ್ತು ಅವರು ಆಧ್ಯಾತ್ಮಿಕತೆಗೆ ಹತ್ತಿರವಾಗಲಿಲ್ಲ. ಆ ಸಮಯದಲ್ಲಿ, ಋಷಿಗಳು ಮತ್ತು ದೇವತೆಗಳು ಶಿವನ ಸಹಾಯವನ್ನು ಪಡೆಯಲು ಒಟ್ಟುಗೂಡಿದರು. ಅದರ ನಂತರ, ಜಗತ್ತನ್ನು ಜಾಗೃತಗೊಳಿಸಲು ಶಿವನು ಭೂಮಿಯ ಮೇಲೆ ಜನಿಸಿದನು. ಶಿವನು ಕಲ್ಡಿ ಎಂಬ ಸಣ್ಣ ಭಾರತೀಯ ಗ್ರಾಮದಲ್ಲಿ ಆದಿ ಶಂಕರಾಚಾರ್ಯರ ರೂಪದಲ್ಲಿ ಅವತರಿಸಿದ್ದರು ಎನ್ನಲಾಗುತ್ತದೆ.

ಮೈಸೂರು ಶಿಲ್ಪಿಗಳಿಂದ ರಚನೆ
ನವೆಂಬರ್ 2021 ರಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇದಾರನಾಥ ದೇಗುಲದ ಆವರಣದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. 12 ಅಡಿ ಎತ್ತರದ ಪ್ರತಿಮೆಯು 35 ಟನ್ ತೂಕವಿದ್ದು, ಮೈಸೂರು ಮೂಲದ ಶಿಲ್ಪಿಗಳಾದ ಯೋಗಿರಾಜ್ ಮತ್ತು ಅವರ ಮಗ ಕ್ಲೋರೈಟ್ ಸ್ಕಿಸ್ಟ್ನಿಂದ ತಯಾರಿಸಿದ್ದಾರೆ. ಈ ಬಂಡೆಯ ವಿಶೇಷತೆ ಎಂದರೆ ಮಳೆ, ಬಿಸಿಲು ಮತ್ತು ಕಠಿಣ ವಾತಾವರಣವನ್ನು ತಡೆದುಕೊಳ್ಳಬಲ್ಲದು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications