ಪಾಟ್ನಾ ಸಾಹೀಬ್ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಆಸ್ತಿ ವಿವರ
ಪಾಟ್ನಾ, ಏಪ್ರಿಲ್ 29: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಶತ್ರುಘ್ನ ಸಿನ್ಹಾ ಅವರು ಸೋಮವಾರದಂದು ಪಟ್ನಾ ಸಾಹೀಬ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಅಭ್ಯರ್ಥಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದ್ದ ಸಿನ್ಹಾ ಅವರನ್ನು ಈ ಬಾರಿ ಬಿಜೆಪಿ ಮೂಲೆಗೆ ತಳ್ಳಿ ಪಾಟ್ನಾ ಸಾಹಿಬ್ ನಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿತ್ತು. ನಾನು ಈ ಪಾರ್ಟಿಯಲ್ಲಿ ಭಾರತ ರತ್ನ ನಾನಾಜಿ ದೇಶಮುಖ್, ದಿವಂಗತ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಬೆಳೆದಿದ್ದೇನೆ, ನೋವಿನಿಂದಲೇ ಪಕ್ಷ ತೊರೆಯುತ್ತಿದ್ದೇನೆ ಎಂದು ಬಿಜೆಪಿ ಸಂಸ್ಥಾಪನಾ ದಿನದಂದು ಬಿಜೆಪಿ ಬಿಟ್ಟಿದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಶತ್ರುಘ್ನ ಸಿನ್ಹಾ, ನಾಮಪತ್ರ ಸಲ್ಲಿಕೆ ದಿನ ಶುಭ ಹಾರೈಸಲು ಇಲ್ಲಿ ನೆರೆದಿರುವ ಜನರಿಗೆ ನಾನು ಆಭಾರಿಯಾಗಿದ್ದೇನೆ. ನಿಮ್ಮ ಪ್ರೀತಿ, ಉತ್ಸಾಹ ನೋಡಿ ನನ್ನ ಹೃದಯ ತುಂಬಿ ಬಂದಿದೆ ಎಂದರು.

ಕಾಂಗ್ರೆಸ್, ಆರ್ ಜೆ ಡಿ ಹಾಗೂ ವಿಕಾಸ್ ಶೀಲ್ ಇನ್ಸಾನ್ ಪಾರ್ಟಿಯ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಎಂದುಹಾಲಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದರು. ಬಿಹಾರದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, 40 ಲೋಕಸಭಾ ಸ್ಥಾನಗಳ ಪೈಕಿ 19 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಮೇ 19ರಂದು ಅಂತಿಮ ಹಂತದ ಮತದಾನವಾಗಲಿದ್ದು, ಮೇ 23ರಂದು ಫಲಿತಾಂಶ ಹೊರಬರಲಿದೆ.
ಪಾಟ್ನಾ ಸಾಹೀಬ್ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಆಸ್ತಿ ವಿವರ
ಹೆಸರು: ಶತ್ರುಘ್ನ್ ಪ್ರಸಾದ್ ಸಿನ್ಹ
ತಂದೆ: ಭುವನೇಶ್ವರ್ ಪ್ರಸಾದ್ ಸಿನ್ಹಾ
ವಯಸ್ಸು: 73
* ಪಾಟ್ನಾದ ನಿವಾಸಿ, ಪಾಟ್ನಾ ಸಾಹೀಬ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
* 2018-19ರ ಆರ್ಥಿಕ ವರ್ಷದಲ್ಲಿ 1,34,24,388 ರು ಆದಾಯ ತೋರಿಸಿದ್ದಾರೆ.2014-15ರಲ್ಲಿ 53,94,830 ರು ನಷ್ಟಿತ್ತು.
ನಗದು : 4,58,232 ರು, ಪತ್ನಿ ಬಳಿ 5,95,366 ರು
ಚರಾಸ್ತಿ: 8,60,43,051 ರು, ಪತ್ನಿ : 18,67,25,965 ರು
ಸ್ಥಿರಾಸ್ತಿ : 93,81,20,000ರು
* 10,67,04,403 ಬ್ಯಾಂಕ್ ನಿಂದ ಸಾಲ ಹೊಂದಿದ್ದಾರೆ. ಪತ್ನಿ 17,8,59, 359 ರು
ಸ್ವಯಾರ್ಜಿತ ಆಸ್ತಿ: ಶತ್ರುಘ್ನ: 2,01,65,993 ರು, ಪತ್ನಿ : 2,20,60,765 ರು
ವಸತಿ ಆಸ್ತಿ: 1,03,61,76,600 ರು, ಅವರ ಪತ್ನಿ : 62,65,14,140 ರು
* ಮರ್ಸಿಡೀಸ್ ಬೆಂಜ್ ಸೇರಿದಂತೆ 48,20,484 ರು ಮೌಲ್ಯದ ವಾಹನಗಳಿವೆ.
* 1,03,67,807 ರು ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ.
* ಪೀಠೋಪಕರಣ, ಎಸಿ, ಸಿಸಿಟಿವಿ, ಜೆರಾಕ್ಸ್ ಯಂತ್ರ ಇತ್ಯಾದಿ; 13,93,767 ರು
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications