ಶಿಡ್ಲಘಟ್ಟ ಮೇಲೂರಿನ ಕಾಮಧೇನು ಸ್ವೀಟ್ಸ್ ಚೌಚೌ ಅಮೆರಿಕದವರೆಗೆ ಫೇಮಸ್
ಅರವತ್ನಾಲ್ಕು ವಿದ್ಯೆಗಳಲ್ಲಿ ಅಡುಗೆಯೂ ಒಂದು. ನಾವು ಕೇಳಿದ ನಳಪಾಕ, ಭೀಮಪಾಕಗಳು ಭಾರತದಲ್ಲೇ ಬಹಳ ಪ್ರಚಲಿತದಲ್ಲಿರುವಂಥದ್ದು. ಊರಿನ ಹೆಸರೊಂದಿಗೆ ಅಲ್ಲಿನ ಹೆಸರುವಾಸಿಯಾದ ಹೋಟೆಲ್, ಮೆಸ್, ಸಿಹಿ- ಖಾರ ತಿನಿಸಿನ ಅಂಗಡಿಗಳೂ ಸೇರಿಕೊಂಡಿರುತ್ತವೆ. ಈ ದಿನ ಶಿಡ್ಲಘಟ್ಟದ ಮೇಲೂರಿನಲ್ಲಿರುವ ಕಾಮಧೇನು ಸ್ವೀಟ್ಸ್ ಬಗ್ಗೆ ತಿಳಿಸಬೇಕು ಅಂತಲೇ ಈ ಲೇಖನ.
ಕೆಲವರ ಕೈರುಚಿಯಂತೂ ದೇಶ, ಭಾಷೆಯ ಗಡಿ ಮೀರಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಸಣ್ಣ ಗ್ರಾಮದಲ್ಲಿದ್ದರೂ ಕಲಿತ ವಿದ್ಯೆಯಿಂದಲೇ ದೇಶದ ರಾಯಭಾರಿಗಳಾಗಿರುತ್ತಾರೆ. ಕಾಮಧೇನು ಸ್ವೀಟ್ಸ್ ನ ಮಾಲೀಕ ಶ್ರೀಧರ್ ಅಂಥಹವರಲ್ಲಿ ಒಬ್ಬರು.

ಮೇಲೂರಿನ ಮಿಕ್ಸ್ ಚರ್ ಎಂದೇ ಪ್ರಸಿದ್ಧವಾದದ್ದು ಇವರು ತಯಾರಿಸುವ ಚೌಚೌ. ಮೇಲೂರು ಗ್ರಾಮದ ಖಾರದ ತಿನಿಸು ತಾಲ್ಲೂಕು, ಜಿಲ್ಲೆಯನ್ನೂ ಮೀರಿ ಅಮೆರಿಕವನ್ನೂ ತಲುಪಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇವರ ಗ್ರಾಹಕರು ಅಮೆರಿಕದಲ್ಲಿನ ತಮ್ಮ ಸಂಬಂಧಿಕರು ಬಂದು ವಾಪಸ್ ಹೋಗುವಾಗ ಮೇಲೂರಿನ ಮಿಕ್ಸ್ಚರ್ ಕೊಂಡು ಹೋಗುತ್ತಾರೆ.
18 ವರ್ಷಗಳಿಂದ ಖಾರ- ಸಿಹಿ ತಿಂಡಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಇವರು ಜಿಲೇಬಿ, ಜಹಾಂಗೀರ್, ಲಾಡು, ಸೋನ್ ಪಾಪಡಿ ಮುಂತಾದ ತಿಂಡಿಗಳನ್ನೂ ತಯಾರಿಸುತ್ತಾರೆ. ಮೇಲೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮುಂತಾದ ಯಾವುದೇ ಸಂಭ್ರಮಾಚರಣೆಗಳಿಗೆ ಇವರ ಸಿಹಿ ಇರಲೇಬೇಕು.

"ಈ ವಿದ್ಯೆಯನ್ನು ಬಂಗಾರಪೇಟೆಯಲ್ಲಿನ ನನ್ನ ಚಿಕ್ಕಪ್ಪನವರ ಬಳಿ ಕಲಿತೆ. ಗುಣಮಟ್ಟವನ್ನು ಕಮ್ಮಿಯಾಗದಂತೆ ಸದಾ ನೋಡಿಕೊಳ್ಳುತ್ತೇನೆ. ಉತ್ತಮವಾದ ಎಣ್ಣೆ ಬಳಸುತ್ತೇನೆ. ಒಳ್ಳೆಯ ನಾಟಿ ಕಡಲೆ ಬೇಳೆಯನ್ನು ನೋಡಿ ಕೊಂಡು ತಂದು ಆರಿಸಿ, ಒಣಗಿಸಿ, ಪುಡಿ ಮಾಡಿಸಿ ಬಳಸುತ್ತೇನೆ. ಈ ಕೆಲಸಕ್ಕೆ ನಾನು ಕೆಲಸದವರನ್ನು ಇಟ್ಟುಕೊಂಡಿಲ್ಲ. ತಿಂಡಿ ತಯಾರಿಕೆ ಹಾಗೂ ಮಾರಾಟಕ್ಕೆ ನನ್ನ ಪತ್ನಿ ಹಾಗೂ ತಮ್ಮ ಸಹಕರಿಸುತ್ತಾರೆ. ಕೆಲಸದವರನ್ನು ನೇಮಿಸಿಕೊಂಡರೆ ಗುಣಮಟ್ಟ ಕೆಡಬಹುದೆಂಬ ಭಯವಿದೆ" ಎನ್ನುತ್ತಾರೆ ಶ್ರೀಧರ್.
"ಕೆಲ ಗ್ರಾಹಕರು ಅಮೆರಿಕಕ್ಕೆ ನಮ್ಮ ಮಿಕ್ಸ್ಚರ್ ತೆಗೆದುಕೊಂಡು ಹೋಗುತ್ತಾರೆ. ಅವರಿಗೆ ಬೇಕಾದ ರೀತಿಯಲ್ಲಿ ಖಾರ ಮಾಡಿಕೊಡುತ್ತೇನೆ. ವಿಮಾನದಲ್ಲಿ ಹೆಚ್ಚು ತೆಗೆದುಕೊಂಡು ಹೋಗಲಾಗದೆಂದು ಒಮ್ಮೆಗೆ ನಾಲ್ಕರಿಂದ ಐದು ಕೆ.ಜಿ ತೆಗೆದುಕೊಂಡು ಹೋಗುತ್ತಾರೆ. ತಾಲೂಕಿನ ಹಲವಾರು ಮಂದಿ ಗ್ರಾಹಕರು ತಮ್ಮ ಸಂಬಂಧಿಕರ ಮನೆಗಳಿಗೆ ಮತ್ತು ಸ್ನೇಹಿತರಿಗೆ ನೀಡಲು ನನ್ನ ಬಳಿ ಸಿಹಿ ಹಾಗೂ ಖಾರ ಖರೀದಿಸುತ್ತಾರೆ. ಜನರು ಮೆಚ್ಚುವುದು ಗುಣಮಟ್ಟವನ್ನು ಎಂಬ ಎಚ್ಚರಿಕೆ ಸದಾ ನನ್ನದು" ಎನ್ನುತ್ತಾರೆ ಕಾಮಧೇನು ಸ್ವೀಟ್ಸ್ ನ ಎನ್.ಶ್ರೀಧರ್.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications